September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸರಕಾರಿ ನೌಕರರ ಸಂಘದ ಕ್ಯಾಲೆಂಡರ್ ಬಿಡುಗಡೆ

ಬೆಳ್ತಂಗಡಿ: ರಾಜ್ಯದಲ್ಲಿ ಸರಕಾರಿ ನೌಕರರ ಸಂಘಟನೆ ಬಲಿಷ್ಠವಾಗಿದ್ದರಿಂದ ಎಲ್ಲಾ ನೌಕರರಿಗೆ ವೃತ್ತಿ ಒತ್ತಡದ ಬದುಕಿನ ನಡುವೆ ನ್ಯಾಯವೂ ದೊರೆಯುತ್ತಿದೆ ಎಂಬುದು ಆಶಾದಾಯಕ ವಿಚಾರ. ಆದ್ದರಿಂದ ಸಂಘಟನೆ ಎಲ್ಲರಿಗೂ ಬೇಕು ಎಂದು ತಹಶೀಲ್ದಾರ್ ಪೃಥ್ವಿ ಸಾನಿಕಂ ಹೇಳಿದರು.

ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಬೆಂಗಳೂರು ಇದರ ವತಿಯಿಂದ ರಾಜ್ಯಾಧ್ಯಕ್ಷ ಷಡಕ್ಷರಿ ಅವರ ಅಪೇಕ್ಷೆಯಂತೆ ರಾಜ್ಯದ ಎಲ್ಲಾ ಸರಕಾರಿ ನೌಕರರಿಗೆ ಕ್ಯಾಲೆಂಡರ್ ತಲುಪಿಸುವ ಗುರಿಯೊಂದಿಗೆ ಬೆಳ್ತಂಗಡಿ ಘಟಕದ ನೇತೃತ್ವದಲ್ಲಿ ಬೆಳ್ತಂಗಡಿ ಏಕತಾಭವನದಲ್ಲಿ ನಡೆದ ಕ್ಯಾಲೆಂಡರ್ ಬಿಡುಗಡೆ ಕಾರ್ಯ‌ ನೆರವೇರಿಸಿ ಅವರು ಮಾತನಾಡಿದರು.‌

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ತಾ. ಸರಕಾರಿ ನೌಕರರ ಸಂಘದ ಅಧ್ಯಕ್ಷ ಜಯರಾಜ್ ಜೈನ್ ಕರ್ನೋಡಿ ಮಾತನಾಡಿ, 2019 ರ ನಂತರ ಅಧಿಕಾರಕ್ಕೆ ಬಂದ ಈಗಿನ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಅನೇಕ ಯೋಜನೆಗಳು ನೌಕರರಿಗೆ ಲಭಿಸಿದೆ. ವೇತನ ಆಯೋಗ ರಚನೆ, ಮಹಿಳೆಯರಿಗೆ ಋತುಚಕ್ರ ರಜೆ ಸಹಿತ ಪ್ರಮುಖ ಪ್ರಯೋಜನಗಳು ಸ್ಮರಣೀಯವಾದುದು ಎಂದರು.

ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯಪಾಲಕ ಅಭಿಯಂತರ ಬಕ್ಕಪ್ಪನವರ್ ಶುಭ ಕೋರಿದರು.
ವೇದಿಕೆಯಲ್ಲಿ ತಾಲೂಕು ಸಮುದಾಯ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ರಮೇಶ್, ತಾ. ಸಂಘದ ಪ್ರಧಾನ ಕಾರ್ಯದರ್ಶಿ ವಿಕಾಸ್, ಕೋಶಾಧಿಕಾರಿ ಶೆಟ್ಟಿ ನಾರಾಯಣ ಸಂಜೀವ, ಸಂಘದ ರಾಜ್ಯ ಪರಿಷತ್ ಸದಸ್ಯ ಪ್ರದೀಪ್ ಕುಮಾರ್ ಉಪಸ್ಥಿತರಿದ್ದರು.
ಸಂಘದ ಗೌರವಾಧ್ಯಕ್ಷ ಅಮಿತಾನಂದ‌ ಹೆಗ್ಡೆ ಕಾರ್ಯಕ್ರಮ‌ ನಿರೂಪಿಸಿದರು. ಹಿರಿಯ ಉಪಾಧ್ಯಕ್ಷ ಚಂದ್ರಶೇಖರ ಧನ್ಯವಾದವಿತ್ತರು.
ವೃಂದ ಸಂಘಟನೆಗಳ ಪದಾಧಿಕಾರಿಗಳು, ತಾಲೂಕಿನ‌ ವಿವಿಧ ಇಲಾಖೆಗಳ ಮುಖ್ಯಸ್ಥ ಅಧಿಕಾರಿಗಳು ಉಪಸ್ಥಿತರಿದ್ದರು. ‌

ಬೆಳ್ತಂಗಡಿಗೆ ನೂತನವಾಗಿ ಪೊಲೀಸ್ ಉಪವಿಭಾಗ ಮಂಜೂರುಗೊಂಡು ಪ್ರಥಮ ಡಿವೈಎಸ್‌ಪಿ ಯಾಗಿ ಅಧಿಕಾರ ಸ್ವೀಕರಿಸಿದ ರೋಹಿಣಿ ಸಿ.ಕೆ ಅವರನ್ನು ಸಂಘದ ವತಿಯಿಂದ ಸ್ವಾಗತಿಸಲಾಗುವುದು. ಹೊಸ ಅಧಿಕಾರಿ ಆಗಮಿಸಿರುವುದು ಸಂಘಕ್ಕೆ ಹೆಮ್ಮೆ ತಂದಿದೆ. -ಜಯರಾಜ್ ಜೈನ್ ಅಧ್ಯಕ್ಷರು, ಸರಕಾರಿ ನೌಕರರ ಸಂಘ ಬೆಳ್ತಂಗಡಿ.

Related posts

ಪ್ರಧಾನಿ ನರೇಂದ್ರ ಮೋದಿ ಸರ್ಕಾರಕ್ಕೆ 12 ವರ್ಷ : ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ವಂದೇ ಮಾತರಂ’ ನನ್ನ ಸೇವೆ ದೇಶಕ್ಕಾಗಿ.. ನೇತ್ರಾವತಿ ನದಿ ಸ್ವಚ್ಛತಾ ಕಾರ್ಯಕ್ರಮ ಆರಂಭ : ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ ಸೇರಿದಂತೆ ಹಲವು ಸಂಘಟನೆಗಳ ಸಾಥ್

Suddi Udaya

ಪುಂಜಾಲಕಟ್ಟೆ ಉಳಿ ಯುವಕ ಮಂಡಲದಿಂದ ಭಜನಾ ತರಬೇತಿ ಕಾರ್ಯಗಾರ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಗೀತಾ ಗಾಯನ ಸ್ಪರ್ಧೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಎಂಟನೇ ದಿನದ ಬ್ರಹ್ಮಕಲಶೋತ್ಸವ:

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಸಹಭಾಗಿತ್ವ; ಮೇ 30: ಕುತ್ಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ

Suddi Udaya
error: Content is protected !!