22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರಿನಲ್ಲಿ ಆಧಾರ್ ಶಿಬಿರ

ಮಡಂತ್ಯಾರು : ಗ್ರಾಮ‌ಪಂಚಾಯತ್ ಮಡಂತ್ಯಾರು ಹಾಗೂ ಜೆಸಿಐ ಮಡಂತ್ಯಾರು ಸಹಯೋಗದಲ್ಲಿ, ಭಾರತೀಯ ಅಂಚೆ ಇಲಾಖೆ, ಪುತ್ತೂರು ವಿಭಾಗದ ಸಹಕಾರದಲ್ಲಿ ಜ 12 ಹಾಗೂ 13 ರಂದು ಎರಡು ದಿನಗಳ ಆಧಾರ್ ಶಿಬಿರವನ್ನು ಗ್ರಾಮ ಪಂಚಾಯತ್ ಮಡಂತ್ಯಾರಿನ ಅಧ್ಯಕ್ಷೆ ಜೇಸಿ ರೂಪಾ ನವೀನ್ ದೀಪ ಬೆಳಗಿಸಿ, ಉದ್ಘಾಟಿಸಿದರು.

ಅತಿಥಿಗಳಾಗಿ ಜೆಸಿಐ ಮಡಂತ್ಯಾರಿನ ಅಧ್ಯಕ್ಷರಾದ ಜೇಸಿ ಸಾಯಿಸುಮಾ ಎಂ. ನಾವಡ, ಜೆಸಿಐ ಭಾರತ ವಲಯ 15 ರ ಸಂಯೋಜಕರಾದ ಜೇಸಿ ಅಮಿತಾ ಅಶೋಕ್, ಅಂಚೆ ಇಲಾಖೆಯ ಮೇಲ್ವಿಚಾರಕರಾದ ಶ್ರೀಮತಿ ವಿಮಲಾ ಪಿ., ಗ್ರಾಮ ಪಂಚಾಯತ್ ಮಡಂತ್ಯಾರಿನ ಉಪಾಧ್ಯಕ್ಷ ಗೋಪಾಲಕೃಷ್ಣ ಕೆ., ಸದಸ್ಯರಾದ ವಿಶ್ವನಾಥ ಪೂಜಾರಿ ಹಾರಬೆ, ಕಿಶೋರ್ ಶೆಟ್ಟಿ ಮೂಡಾಯೂರು ಉಪಸ್ಥಿತರಿದ್ದರು.

ಜೆಸಿಐ ಮಡಂತ್ಯಾರಿನ ಕಾರ್ಯದರ್ಶಿ ಜೇಸಿ ಯತೀಶ್ ರೈ, ಯುವ ಜೇಸಿ ಅಧ್ಯಕ್ಷ ಜೇಸಿ ಕೃಪಾಲ್, ಲೇಡಿ ಜೇಸಿ ಸಂಯೋಜಕಿ ಜೇಸಿ ಭವ್ಯ ಟಿ. ಪೈ, ಜೇಸಿ ಅಶ್ವಿನಿ ಮತ್ತು ಪಂಚಾಯತ್ ಹಾಗೂ ಅಂಚೆ ಇಲಾಖೆ ಸಿಬ್ಬಂದಿಗಳು , ಆಶಾ ಕಾರ್ಯಕರ್ತೆಯರು ಸಹಕರಿಸಿದ್ದರು.

ಜೆಸಿಐ ಮಡಂತ್ಯಾರಿನ ಪೂರ್ವಾಧ್ಯಕ್ಷರಾದ ಜೇಸಿ ಅಶೋಕ್ ಗುಂಡಿಯಲ್ಕೆ ಸ್ವಾಗತಿಸಿ, ಗ್ರಾಮ ಪಂಚಾಯತ್ ಮಡಂತ್ಯಾರಿನ ಸದಸ್ಯರಾದ ವಿಶ್ವನಾಥ ಪೂಜಾರಿ ಹಾರಬೆಯವರು ಧನ್ಯವಾದ ಸಮರ್ಪಣೆ ಮಾಡಿದರು. ಗ್ರಾಮ ಪಂಚಾಯತ್ ಮಡಂತ್ಯಾರಿನ ಉಪಾಧ್ಯಕ್ಷ ಗೋಪಾಲಕೃಷ್ಣ ಕೆ. ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ನೈನಾಡು :ಪಿಂಟೊ ಬೇಕರಿ ಸಂಸ್ಥೆಯ ಮಾಲಕ ಸಿಲ್ವೆಸ್ಟರ್ ಪಿಂಟೊ ನಿಧನ

Suddi Udaya

ಮಚ್ಚಿನ ಅನಂತೇಶ್ವರ ಸಂಜೀವಿನಿ ಮಹಿಳಾ ಒಕ್ಕೂಟದ ವತಿಯಿಂದ ಸ್ವಸಹಾಯ ಸಂಘದ ಸದಸ್ಯರಿಗೆ ಫಿನೈಲ್ ಹಾಗೂ ಸೋಪ್ ಆಯಿಲ್ ತರಬೇತಿ

Suddi Udaya

ಪುಂಜಾಲಕಟ್ಟೆಯಲ್ಲಿ ರಾಜ್ಯಮಟ್ಟದ ಕರಾಟೆ ಸ್ಪರ್ಧೆ ಸಾಧಕ 10 ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya

ಕುಡ್ಲ ನನ್ನ ಹೃದಯದಲ್ಲಿದೆ: ಮುಲ್ಲೈ ಮುಹಿಲನ್

Suddi Udaya

ಗೇರುಕಟ್ಟೆ: ಅಲ್ಟೋ ಕಾರು ಡಿಕ್ಕಿ – ಪಾದಚಾರಿಗೆ ಗಂಭೀರ ಗಾಯ

Suddi Udaya

ಎ.07 -17: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ಜಾತ್ರೋತ್ಸವ: ಇಂದು ಮತ್ತು ನಾಳೆ ದೇವಸ್ಥಾನದಲ್ಲಿ ವಿವಿಧ ವೈದಿಕ ಕಾರ್ಯಕ್ರಮ

Suddi Udaya
error: Content is protected !!