25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅನಾರು ಶ್ರೀ ದುರ್ಗಾಪರಮೇಶ್ವರೀ ದೇವಿಯ ವರ್ಷಾವಧಿ ಜಾತ್ರಾ ಮಹೋತ್ಸವ: ತೋರಣ ಮುಹೂರ್ತ, ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ಕ್ಯಾಲೆಂಡರ್ ಬಿಡುಗಡೆ

ಪಟ್ರಮೆ: ಅನಾರು ಶ್ರೀ ದುರ್ಗಾಪರಮೇಶ್ವರೀ ದೇವಿಯ ವರ್ಷಾವಧಿ ಜಾತ್ರಾ ಮಹೋತ್ಸವವು ಜ.14ರಿಂದ ಪ್ರಾರಂಭಗೊಂಡು ಜ.18ರ ವರೆಗೆ ಬ್ರಹ್ಮಶ್ರೀ ಉಚ್ಚಿಲ ಪದ್ಮನಾಭ ತಂತ್ರಿಗಳು ನೀಲೇಶ್ವರ ಇವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ.

ಇಂದು (ಜ.14 ) ಬೆಳಿಗ್ಗೆ ತೋರಣ ಮುಹೂರ್ತ, ಹಾಗೂ ಗ್ರಾಮಸ್ಥರಿಂದ ಹಸಿರುವಾಣಿ ಹೊರೆಕಾಣಿಕೆ ನಡೆಯಿತು. ಈ ವೇಳೆ ದೇವಸ್ಥಾನದ 2026 ರ ನೂತನ ಕ್ಯಾಲೆಂಡರ್ ನ್ನು ಅನುವಂಶಿಕ ಆಡಳಿತ ಮೊಕ್ತೇಸರರಾದ ನಿತೇಶ್ ಬಲ್ಲಾಳ್ ಉಳಿಯಬೀಡು , ಅರ್ಚಕ ಯು.ವಿ. ಗುರುಪ್ರಸಾದ್ ನಿಡ್ವಣ್ಣಾಯ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಗ್ರಾಮ್ ಪಂಚಾಯತ್ ಅಧ್ಯಕ್ಷ ಮನೋಜ್ ಕುಮಾರ್, ಊರಿನ ಗಣ್ಯರಾದ ದೇವಪಾಲ ಅಜ್ರಿ, ಜಾತ್ರಾ ಸಮಿತಿಯ ಅಧ್ಯಕ್ಷ ವಿಠಲ ಎಂ.ಕೆ, ಕಾರ್ಯದರ್ಶಿ ಶರತ್ ಚಂದ್ರ, ಚಂದ್ರಶೇಖರ್, ಹರೀಶ, ಸಮಿತಿ ಸದಸ್ಯರು ಹಾಗೂ ಊರಿನ ಗಣ್ಯರು ಉಪಸ್ಥಿತರಿದ್ದರು.

ಸಂಜೆ ಧ್ವಜಾರೋಹಣ ಸುತ್ತು ಬಲಿ, ಮಹಾಪೂಜೆ, ರಾತ್ರಿ ಪಟ್ರಮೆ ಅನಾರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ಮತ್ತು ಸುರ್ಯತ್ತಾವು ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಅನುವಂಶಿಕ ಆಡಳಿತ ಮೊಕ್ತೇಸರ ನಿತೇಶ್ ಬಲ್ಲಾಳ್, ಉಳಿಯಬೀಡು ರವರ ಅಧ್ಯಕ್ಷತೆಯಲ್ಲಿ ಧಾರ್ಮಿಕ ಸಭೆ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಶ್ರೀ ಲಕ್ಷ್ಮೀ ಇಂಡಸ್ಟ್ರೀಸ್ ಮಾಲಕ ಮೋಹನ್ ಕುಮಾರ್ ಭಾಗವಹಿಸಲಿದ್ದಾರೆ.

Related posts

ನಡ ಸ. ಪ್ರೌ. ಶಾಲಾ ಮಕ್ಕಳ ಮಾಸಿಕ ಪತ್ರಿಕೆ ‘ಮಕ್ಕಳ ವಾಣಿ’ ಬಿಡುಗಡೆ

Suddi Udaya

ಬೆಳ್ತಂಗಡಿ: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಕನ್ನಡ ರಾಜ್ಯೋತ್ಸವ

Suddi Udaya

ನಾರಾವಿ ಸಂತ ಅಂತೋನಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ನಾಪತ್ತೆಯಾಗಿದ್ದ ಬೆಳಾಲು ಮಾಯಾ ಅತ್ರಿಜಾಲು ತಮ್ಮಯ್ಯ ಗೌಡರ ಮೃತ‌ದೇಹ ಕೆರೆಯಲ್ಲಿ ಪತ್ತೆ- ಶವ ಮೇಲೆತ್ತಿದ‌ ಶೌಯ೯ ವಿಪತ್ತು ತಂಡ

Suddi Udaya

ರುಡ್ ಸೆಟ್ ಸಂಸ್ಥೆಯಲ್ಲಿ ಟಿ.ವಿ. ಟೆಕ್ನಿಷಿಯನ್ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಮೃತದೇಹ ಹೂತು ಹಾಕಿದ ಪ್ರಕರಣ: 8ನೇ ಗುರುತು ಮಾಡಿದ ಜಾಗದಲ್ಲಿ ಸಿಗದ ಕಳೇಬರ

Suddi Udaya
error: Content is protected !!