30.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಅರೆಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನಕ್ಕೆ ಸುಮಂತ್ ಕುಮಾರ್ ಜೈನ್ ಹಾಗೂ ಆನಂದ ಶೆಟ್ಟಿ ವಾತ್ಸಲ್ಯ ನೀಡಿದ ನಂದಾ ದೀಪ ಅರ್ಪಣೆ: ಜಾತ್ರೋತ್ಸವದ ಅಮಂತ್ರಣ ಪತ್ರಿಕೆ ಬಿಡುಗಡೆ

ಗುರುವಾಯನಕೆರೆ: ಕಾರಣಿಕಾ ಕ್ಷೇತ್ರ ಅರೆಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನಕ್ಕೆ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಹಾಗೂ ನಿವೃತ್ತ ಸರಕಾರಿ ಅಧಿಕಾರಿ ಆನಂದ ಶೆಟ್ಟಿ ವಾತ್ಸಲ್ಯ ಅವರು ಸೇವಾ ರೂಪದಲ್ಲಿ ನೀಡಿದ ನಂದಾ ದೀಪಗಳನ್ನು ದೈವಕ್ಕೆ ಅರ್ಪಣೆ ಮತ್ತು ದೀಪ ಪ್ರಜ್ವಲನೆ ಕ್ಷೇತ್ರದ ತಂತ್ರಿಗಳು ಮತ್ತು ಅರ್ಚಕರ ಉಪಸ್ಥಿತಿಯಲ್ಲಿ ಜ.೧೪ರಂದು ಮಕರ ಸಂಕ್ರಮಣದ ಪುಣ್ಯ ದಿನದಂದು ನಡೆಯಿತು.

ಈ ಸಂದರ್ಭದಲ್ಲಿ ಫೆಬ್ರವರಿ ತಿಂಗಳಲ್ಲಿ ನಡೆಯಲಿರುವ ವಾರ್ಷಿಕ ಜಾತ್ರೋತ್ಸವದ ಆಮಂತ್ರ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು. ಈ ವೇಳೆ ವೇದಮೂರ್ತಿ ಗೋಪಾಲಕೃಷ್ಣ ತಂತ್ರಿ ಮಡಂತ್ಯಾರ್ ಮತ್ತು ಕ್ಷೇತ್ರದ ಅರ್ಚಕರಾದ ರತ್ನಾಕರ ನೂರಿತ್ತಾಯ ಇವರನ್ನು ಅರಮಲೆಬೆಟ್ಟದ ಕ್ಷೇತ್ರದವತಿಯಿಂದ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಅನುವಂಶಿಕ ಆಡಳಿತ ಮೊಕ್ತೇಸರರು ಸುಖೇಶ್ ಕುಮಾರ್ ಕಡಂಬು, ಸುನೀಶ್ ಕುಮಾರ್ ಜೈನ್, ಸನ್ಮತಿ ಜೈನ್, ಸುಮಂತ್ ಕುಮಾರ್ ಜೈನ್, ದೇವದಾಸ್ ಶೆಟ್ಟಿ ಬದ್ಯಾರ್, ಧರಣೇಂದ್ರ ಜೈನ್, ಪ್ರದೀಪ್ ಶೆಟ್ಟಿ ಪಾಡ್ಯಾರ್ ಮಜಲು, ಆನಂದ ಶೆಟ್ಟಿ ವಾತ್ಸಲ್ಯ, ಪುರಂದರ ಶೆಟ್ಟಿ ಪಾಡ್ಯಾರ್, ವಿಠ್ಠಲ್ ಶೆಟ್ಟಿ ಪಾಡ್ಯಾರ್, ಶೋಭಿತ್ ಜೈನ್, ಪ್ರದೀಪ್ ಶೆಟ್ಟಿ ವಾತ್ಸಲ್ಯ, ಸೀತಾರಾಮ ಶೆಟ್ಟಿ ವೈಭವ್ ಹಾರ್ಡ್ವೇರ್, ಪ್ರೇಮ್ ಶೆಟ್ಟಿ ಅನುಗ್ರಹ ಸೇರಿದಂತೆ ಭಕ್ತರು ಉಪಸ್ಥಿತರಿದ್ದರು.

Related posts

ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನ: ಅಂಗನವಾಡಿಗಳ 159 ಮಕ್ಕಳಿಗೆ ಮತ್ತು 87 ಮಂದಿ ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣೆ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿ ಗಳಿಗೆ ಪ್ರೋತ್ಸಾಹಧನ ವಿಚಾರಣೆ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶ ದಾನ ಮಾಡಿ ಮಾದರಿಯಾದ ಕಲ್ಮಂಜದ ಕು. ನಳಿನಿ

Suddi Udaya

ದಿಡುಪೆ : ರಹ್ಮಾನಿಯಾ ಜುಮ್ಮಾ ಮಸ್ಜಿದ್ ಮತ್ತು ದರ್ಗಾ ಶರೀಫ್ ಕಾಜೂರು ಇದರ ಅಂಗ ಸಂಸ್ಥೆ ಮಸ್ಜಿದುಲ್ ಹಿದಾಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ರಾಜ್ಯಮಟ್ಟದ ಕರಾಟೆ ಸ್ಪರ್ಧೆ

Suddi Udaya

ಹಾಡುಹಗಲೇ ಮುಂಡಾಜೆಯಲ್ಲಿಕಾಣಿಕೆ ಡಬ್ಬಿಯಿಂದ ಹಣ ಕಳ್ಳತನ

Suddi Udaya

ಪುದುವೆಟ್ಟು: ಅಡ್ಯಾದಲ್ಲಿ ಕಾಡಾನೆ ಪ್ರತ್ಯಕ್ಷ

Suddi Udaya
error: Content is protected !!