23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಮನೆಯ ಸಮೀಪದ ಕೆರೆಯಲ್ಲಿ ಪತ್ತೆ

ಕಳಿಯ: ದೇವಸ್ಥಾನಕ್ಕೆ ಇಂದು ಮುಂಜಾನೆ 4ಗಂಟೆಗೆ ಧನುಪೂಜೆಗೆ ಮನೆಯಿಂದ ಹೋಗಿದ್ದ ಬಾಲಕನೋರ್ವ ನಿಗೂಢವಾಗಿ ನಾಪತ್ತೆಯಾಗಿದ್ದು ಬಾಲಕನ ಮೃತದೇಹ ಮನೆಯ ಸಮೀಪದ ಕೆರೆಯಲ್ಲಿ ಪತ್ತೆಯಾಗಿದ್ದು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಘಟನೆ ವಿವರ: ಕುವೆಟ್ಟು ಗ್ರಾಮದ ಸಂಬೋಳ್ಯ ಬರಮೇಲು ಸುಬ್ರಹ್ಮಣ್ಯ ನಾಯಕ್ ಅವರ ಪುತ್ರ ಗೇರುಕಟ್ಟೆ ಪ್ರೌಢ ಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಸುಮಂತ್ (15ವ) ನಾಪತ್ತೆಯಾದ ಬಾಲಕನಾಗಿದ್ದಾನೆ. ನಾಳ ದೇವಸ್ಥಾನಕ್ಕೆ ಸುಮಂತ್ ಸೇರಿದಂತೆ ಮೂರು ಮಂದಿ ಬಾಲಕರು ಒಟ್ಟಿಗೆ ಹೋಗುತ್ತಿದ್ದು, ಇಂದು ಮುಂಜಾನೆ ಸುಮಂತ್ ಮನೆಯಿಂದ ಬರುವಾಗ ತಡವಾದ್ದರಿಂದ ಇಬ್ಬರು ಬಾಲಕರು ಆತನಿಗಾಗಿ ಕಾದು ದೇವಸ್ಥಾನಕ್ಕೆ ತೆರಳಿದ್ದರು. ಆದರೆ ಸುಮಂತ್ ಮನೆಯಿಂದ ಹೊರಟ್ಟಿದ್ದರು ದೇವಸ್ಥಾನಕ್ಕೆ ಬಂದಿರಲಿಲ್ಲ. ಇದರಿಂದ ಸಂಶಯಗೊಂಡ ಬಾಲಕರು ಆತನ ಮನೆಗೆ ಪೋನ್ ಮಾಡಿದಾಗ ಸುಮಂತ್‌ನ ಮನೆಯವರು ಆತ ದೇವಸ್ಥಾನಕ್ಕೆ ಮುಂಜಾನೆಯೇ ಹೋಗಿದ್ದಾನೆ ಎಂದು ತಿಳಿಸಿದ್ದರು. ಆದರೆ ಆತ ದೇವಸ್ಥಾನಕ್ಕೆ ಬಂದಿಲ್ಲ ಎಂದು ಬಾಲಕರು ಹೇಳಿದಾಗ ಮನೆಯವರು ಆತಂಕಗೊಂಡು ಸ್ಥಳೀಯವಾಗಿ ಮಾಹಿತಿ ನೀಡಿದರು. ಬಾಲಕ ಬರುವ ದಾರಿಯ ನಡುವೆ ಕೆರೆ ಬಳಿ ರಕ್ತದ ಕಲೆಗಳು ಸ್ಥಳೀಯರಿಗೆ ಕಂಡು ಬಂದಿದ್ದು, ಸ್ಥಳಕ್ಕೆ ಅರಣ್ಯ ಇಲಾಖೆಯವರು‌, ಪೊಲೀಸ್ ಇಲಾಖೆ , ಅಗ್ನಿ ಶಾಮಕ ದಳ ಸ್ಥಳೀಯರು ಸೇರಿ ತೀರಾ ಹುಡುಕಾಟ ನಡೆಸಿದ್ದು ಇದೀಗ ಬಾಲಕನ ಮೃತ ದೇಹ ಕೆರೆಯಲ್ಲಿ ಪತ್ತೆಯಾಗಿದೆ.

ಘಟನಾ ಸ್ಥಳಕ್ಕೆ ತಹಶೀಲ್ದಾರರು ಪೃಥ್ವಿ ಸಾನಿಕಂ, ಆರ್ ಐ ಪಾವಡಪ್ಪ, ಆಡಳಿತಾಧಿಕಾರಿ, ಬಿಒ ತಾರಕೇಸರಿ, ಶಾಲಾ ಶಿಕ್ಷಕರು, ಆಗಮಿಸಿದ್ದರು.

Related posts

ಬೆಳ್ತಂಗಡಿ ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 25ನೇ ವರ್ಷದ ಶಾಲಾ ವಾರ್ಷಿಕೋತ್ಸವ

Suddi Udaya

ಅ.31: ಅಳದಂಗಡಿಯಲ್ಲಿ ಶ್ರೀ ಮಹಾವೀರ ಮೆಡಿಕಲ್ಸ್ ಶುಭಾರಂಭ

Suddi Udaya

ಉಜಿರೆ ಎಸ್.ಡಿ.ಎಮ್ ಸಮೂಹ ಶಿಕ್ಷಣ ಸಂಸ್ಥೆಗಳಿಂದ ಶಿಕ್ಷಕರಿಗೆ ‘ಅನುಭವ ಕಲಿಕೆ’ ಕಾರ್ಯಾಗಾರ

Suddi Udaya

ಕಳೆಂಜದಲ್ಲಿ ರಾಜೇಶ್ ಎಂ.ಕೆ ಯವರ ಮೇಲೆ ನಡೆದ‌ ಹಲ್ಲೆ ಪ್ರಕರಣ: ಆಸ್ಪತ್ರೆಗೆ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಭೇಟಿ: ಆರೋಗ್ಯ ವಿಚಾರಣೆ

Suddi Udaya

ಬೆಳ್ತಂಗಡಿ: ಹೀಲಿಯಂ ಗ್ಯಾಸ್ ಸೋರಿಕೆಯಿಂದಾಗಿ ಬೆಂಕಿ ಅವಘಡ ಸ್ಥಳಕ್ಕೆ ರಕ್ಷಿತ್ ಶಿವರಾಂ ಭೇಟಿ

Suddi Udaya

ಈ ಬಾರಿಯ ಲೋಕಸಭಾ ಚುನಾವಣೆ ಭಾರತದ ಭವಿಷ್ಯವನ್ನು ನಿರ್ಧಾರ ಮಾಡುವ ನಿರ್ಣಾಯಕವಾದಂತಹ ಚುನಾವಣೆ: ಪ್ರತಾಪ್ ಸಿಂಹ ನಾಯಕ್

Suddi Udaya
error: Content is protected !!