July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾವೂರು ದೇವಸ್ಥಾನದಲ್ಲಿ ವಿಷ್ಣು ಸಹಸ್ರನಾಮ ಪಠಣ: ದಶಮಾನೋತ್ಸವ ಸಂಪನ್ನ : ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಸಮಾಜದಲ್ಲಿ ಶಾಂತಿ ಸಾಮರಸ್ಯ ಬೆಳೆಯಲು ಪ್ರತಿಯೊಬ್ಬರಲ್ಲು ಸಂಸ್ಕಾರ ಬೆಳೆಯಬೇಕು.ಅಂತಹ ಸಂಸ್ಕಾರಗಳು ಧಾರ್ಮಿಕ ಕೇಂದ್ರಗಳಿಂದ ದೊರೆಯಬೇಕು. ನಾವೂರು ಶ್ರೀ ಗೊಪಾಲಕೃಷ್ಣ ದೇವಸ್ಥಾನದಲ್ಲಿ ಕಳೆದ ಹತ್ತುವರ್ಷಗಳಿಂದ ಧನುರ್ಮಾಸ ಮತ್ತು ಇತರ ದಿನಗಳಲ್ಲಿ ಸಾವಿರಾರು ಮಂದಿಯಿಂದ ವಿಷ್ಣು ಸಹಸ್ರನಾಮ ಪಠಣ ಅಗುತ್ತಿದೆ. ಇಂತಹ ಕಾರ್ಯಕ್ರಮಗಳಿಂದ ಮಕ್ಕಳಿಗೆ ಉತ್ತಮ ಸಂಸ್ಕಾರ ದೊರೆಯುತ್ತದೆ ಎಂದು ಶಾಸಕ ಹರೀಶ್ ಪೂಂಜಾ ಹೇಳಿದರು.
ಅವರು ಜ.೧೪ ಮಕರ ಸಂಕ್ರಮಣದ ದಿನದಂದು ನಾವೂರು ಶ್ರೀ ಗೊಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀ ಗೊಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್ ನಾವೂರು ಇದರ ವತಿಯಿಂದ ಧನುರ್ಮಾಸ ಪ್ರಯುಕ್ತ ಕಳೆದ ಮೂವತ್ತು ದಿನಗಳಿಂದ ನಡೆಯುತ್ತಿರುವ ದಶಮಾನೋತ್ಸವದ ಸಾಮೂಹಿಕ ವಿಷ್ಣು ಸಹಸ್ರನಾಮ ಪಠಣ ಕಾರ್ಯಕ್ರಮದ ಸಮಾರೋಪದಲ್ಲಿ ವಿಷ್ಟು ಸಹಸ್ರನಾಮ ಪಠಣಕ್ಕೆ ದೀಪ ಪ್ರಜ್ವಲಿಸಿ ಚಾಲನೆ ನೀಡಿ, ಮಾತನಾಡಿ ಈ ಗ್ರಾಮದ ಪ್ರತಿಯೊಬ್ಬರೂ ಇಂತಹ ಪುಣ್ಯಕಾರ್ಯದಲ್ಲಿ ಭಾಗವಹಿಸುತ್ತಿರುವುದು ಇತರರಿಗೆ ಮಾದರಿಯಾಗಿದ್ದಾರೆ. ನೂರಾರು ಮಕ್ಕಳು ಭಾಗವಹಿ ಬಾಲ್ಯದಲ್ಲೇ ಸಂಸ್ಕಾರವಂತರಾಗಿರುವುದು ಹೆಮ್ಮಯ ವಿಷಯವಾಗಿದೆ ಎಂದರು.


ನಿವೃತ್ತ ಪ್ರಾಂಶುಪಾಲ ಕೃಷ್ಣಪ್ಪ ಪೂಜಾರಿ ಮಾತನಾಡಿ ಒಂದು ಗ್ರಾಮದ ದೇವಸ್ಥಾನದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಭಾಗವಹಿಸುತ್ತಿದ್ದಾರೆ ಎಂದರೆ ಗ್ರಾಮ ಸುಭೀಕ್ಷೆಯಾಗಿದೆ ಎಂದರ್ಥ. ಇಂದು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಧರ್ಮ ಜಾಗೃತಿಯ ಕಾರ್ಯ ನಡೆಯುತ್ತಿದೆ ಇಂತಹ ಕಾರ್ಯಕ್ರಮ ಎಲ್ಲ ಕಡೆ ನಡೆಯಬೇಕು ಎಂದರು.


ಜಾತ್ರೆಯ ಆಮಂತ್ರಣ ಪತ್ರಿಕೆ ಬಿಡುಗಡೆ:
ಇದೇ ಸಂದರ್ಭದಲ್ಲಿ ದೇವಸ್ಥಾನದ ಜಾತ್ರಾಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಶಾಸಕ ಹರೀಶ್ ಪೂಂಜಾ ಬಿಡುಗಡೆಗೊಳಿಸಿದರು. ಈ ಸಂದರ್ಭ ಸೇವಾ ಟ್ರಸ್ಟ್‌ನ ಅಧ್ಯಕ್ಷ ಡಾ. ಪ್ರದೀಪ್ ನಾವೂರು, ಟ್ರಷ್ಟಿಗಳಾದ ಹರೀಶ್ ಕಾರಿಂಜ, ಉಮೇಶ್ ಪೂಜಾರಿ, ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಐಟಿ ವಿಭಾಗದ ಮುಖ್ಯಸ್ಥ ಪೂರಣ್ ವರ್ಮ, ಉಜಿರೆ ರಬ್ಬರ್ ಸೊಸೈಟಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜು ಶೆಟ್ಟಿ, ಅಳದಂಗಡಿ ಶ್ರಿಮಹಾಗಣಪತಿ ದೇವಸ್ಥಾನದ ಅಧ್ಯಕ್ಷ ಡಾ ಶಶಿಧರ ಡೋಂಗ್ರೆ, ಡಾ. ಸುಷ್ಮಾಡೋಂಗ್ರೆ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಯೋಗೀಶ್ ಕುಮಾರ್ ನಡಕ್ಕರ, ಬಂಗಾಡಿ ಸಿ. ಎ ಬ್ಯಾಂಕ್ ಅಧ್ಯಕ್ಷ ಹರೀಶ್ ಕುಮಾರ್, ಗಣಪತಿ ಭಟ್ ಕುಳಮರ್ವ, ಶ್ರಿಗುರುದೇವ ಬ್ಯಾಂಕ್ ನ ನಿರ್ದೇಶಕಿ ತನುಜಾ ಶೇಖರ್, ಲಯನ್ಸ್ ಕ್ಲಬ್‌ನ ಮಾಜಿ ಅಧ್ಯಕ್ಷ ವಸಂತ ಶೆಟ್ಟಿ ಶ್ರದ್ಧಾ, ಮಿತ್ತಬಾಗಿಲು ಗ್ರಾಮ ಪಂಚಾಯತ್ ಅದ್ಯಕ್ಷ ವಿನಯಚಂದ್ರ ಸೇನೆರೆಬೆಟ್ಟು, ಪಿಡಿಒ ಮೋಹನ್ ಬಂಗೇರ, ಸುದ್ದಿ ಉದಯ ಪತ್ರಿಕೆಯ ಸಂಪಾದಕ ಬಿ.ಎಸ್ ಕುಲಾಲ್, ವಿಜಯವಾಣಿ ಪತ್ರಿಕೆಯ ಪತ್ರಕರ್ತ ಮನೋಹರ್ ಬಳಂಜ, ಚೈತ್ರೆಶ್ ಇಳಂತಿಳ, ಸುದ್ದಿ ಚಾನೆಲ್‌ನ ಮುಖ್ಯಸ್ಥ ದಾಮೋದರ್ ದೊಂಡೋಲೆ, ರಾಜೀವ್ ಸಾಲಿಯಾನ್ ಮುಂಡೂರು, ಶಿಕ್ಷಕ ಜಗನ್ನಾಥ್, ರಾಜೇಂದ್ರ ಭಟ್, ಕರ್ನಾಟಕ ಬ್ಯಾಂಕ್ ಮ್ಯಾನೇಜರ್ ವೆಂಕಟರಮಣ ಮಯ್ಯ ಮತ್ತು ಸಾವಿರಾರು ಭಕ್ತಾದಿಗಳು ಉಪಸ್ಥಿತರಿದ್ದರು. ಮುಂಜಾನೆ ವಿಷ್ಟುಸಹಸ್ರನಾಮ ಪಠಣ ನಡೆಯಿತು.

Related posts

ದ.ಕ. ಹಾಗೂ ಉಡುಪಿ ಜಿಲ್ಲೆಯಲ್ಲಿ ವಸತಿ ಮತ್ತು ವಾಣಿಜ್ಯ ಸಂಬಂಧ ಭೂ ಪರಿವರ್ತನೆ ಜಮೀನುಗಳ ಏಕ ವಿನ್ಯಾಸ ನಕ್ಷೆಗಳಿಗೆ ಆಯಾ ಗ್ರಾ.ಪಂ. ಗಳಲ್ಲಿಯೆ ಅನುಮೋದನೆ ನೀಡುವಂತೆ ಶಾಸಕರುಗಳಿಂದ ಮನವಿ

Suddi Udaya

ಮುಂಡಾಜೆ ಹಿ. ಪ್ರಾ. ಶಾಲಾ ವಿದ್ಯಾರ್ಥಿನಿ ದ್ವಿಷಾ ಯು.ಡಿ. ರಿಗೆ ರಾಷ್ಟ್ರ ಮಟ್ಟದ ಗೋಲ್ಡನ್ ಆರೋ ಪ್ರಶಸ್ತಿ

Suddi Udaya

ಕಜಕೆ, ಎಳನೀರು , ಕಕ್ಕಿಂಜೆ ಶಾಲಾ ಮತಗಟ್ಟೆಗೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಾದ ಮುಲ್ಲೈ ಮುಗಿಲನ್ ಭೇಟಿ

Suddi Udaya

ಶ್ರೀ ವೀರಾಂಜನೇಯ ಸೇವಾ ಸಮಿತಿ ಸಂಸ್ಥೆಯಿಂದ ದಿನನಿತ್ಯ ಬಳಕೆಯ ನೆರವು ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾಗಿ ಅಭಿಷಕ್ತರಾದ ಅ. ವಂ. ಜೇಮ್ಸ್ ಪಟ್ಟೇರಿಲ್ ರವರಿಗೆ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪರವಾಗಿ ಅಭಿನಂದನೆ

Suddi Udaya

ಮತದಾನ ಜಾಗೃತಿಗಾಗಿ ಸೆಲ್ಪಿ ಪಾಯಿಂಟ್’ನಾನು ಮತದಾನ ಮಾಡುವೆ ನೀವು ಮಾಡಿ’ ಸಂದೇಶ ಸಾರಿದ ತಾ.ಪಂ.‌ಕಾಯ೯ನಿವಾ೯ಹಣಾಧಿಕಾರಿ ಹಾಗೂ ಸಿಬ್ಬಂದಿಗಳು

Suddi Udaya
error: Content is protected !!