September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮುಂಡಾಜೆ: ರಬ್ಬರ್ ತೋಟದಲ್ಲಿ ನಾಲ್ಕು ಚಿರತೆಗಳು ಪ್ರತ್ಯಕ್ಷ: ಅಪಾಯದಿಂದ ಪಾರಾದ ಕಾರ್ಮಿಕರು

ಮುಂಡಾಜೆ: ಉಜಿರೆ ರಬ್ಬರ್ ಸೊಸೈಟಿಯ ಉಪಾಧ್ಯಕ್ಷ ಅನಂತ್ ಭಟ್ ಮಚ್ಚಿಮಲೆಯವರ ರಬ್ಬರ್ ತೋಟದಲ್ಲಿ ನಾಲ್ಕು ಚಿರತೆಗಳು ಪತ್ತೆಯಾಗಿದ್ದು, ಮುಂಡಾಜೆಯ ಜನರಲ್ಲಿ ಆತಂಕ ಮೂಡಿಸಿದೆ.

ರಬ್ಬರ್ ಟ್ಯಾಪಿಂಗ್ ನ ಕಾರ್ಮಿಕರು ಚಿರತೆಗಳನ್ನು ನೋಡಿ ಕಕ್ಕಾಬಿಕ್ಕಿಯಾಗಿ ಓಡಿದ್ದು, ಅವರು ಅನಂತ್ ಭಟ್ ರವರಿಗೆ ಮಾಹಿತಿ ನೀಡಿದ್ದಾರೆ. ಒಂದು ದೊಡ್ಡ ಚಿರತೆಯ ಜೊತೆ ಮೂರು ಮರಿ ಚಿರತೆಗಳು ಪತ್ತೆಯಾಗಿದ್ದು, ಮತ್ತಷ್ಟು ಚಿರತೆಗಳು ಇರುವ ಸಾಧ್ಯತೆಯಿದೆ ಎಂದು ಅಂದಾಜಿಸಲಾಗಿದೆ.

ಸುಮಾರು 3-4 ದಿನಗಳಿಂದ ಚಿರತೆ ಮುಂಡಾಜೆ ಪರಿಸರದಲ್ಲಿ ಓಡಾಡುತ್ತಿದ್ದು, ಅರಸಮಜಲು, ಕುಂಟಾಲಪಲ್ಕೆ, ಕಲ್ಲಪಿತ್ತಿಲು ಎಂಬಲ್ಲಿ ಓಡಾಟ ನಡೆಸಿದ್ದು, ಜ.12ಂದು ಅರಸಮಜಲು ಚಿದಾನಂದ ನಾಯ್ಕ ರವರ ಮನೆಯ ಹಟ್ಟಿಯಲ್ಲಿದ್ದ ಕರುವನ್ನು ಚಿರತೆಯು ತಿಂದು ಹೋಗಿದ್ದು, ನಂತರ ಸ್ಥಳೀಯರ ನಾಯಿಯನ್ನು ತಿಂದ್ದು ಹಾಕಿದ ಬಗ್ಗೆ ವರದಿಯಾಗಿದೆ.

Related posts

ನಾರಾವಿ: ಸಂತ ಅಂತೋನಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ರಾಜ್ಯವನ್ನು ಸಾಲದ ಕೂಪಕ್ಕೆ ತಳ್ಳಿದೆ: ಪ್ರತಾಪ್ ಸಿಂಹ ನಾಯಕ್ ಆರೋಪ

Suddi Udaya

ಕುವೆಟ್ಟು: ಅರ್ಕಜೆ ನಿವಾಸಿ ಚಂದ್ರಹಾಸ ಪೂಜಾರಿ ನಿಧನ

Suddi Udaya

ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ದರೆಗೆ ಗುದ್ದಿದ ಲಾರಿ

Suddi Udaya

ಆ. 1: ಧರ್ಮಸ್ಥಳದಲ್ಲಿ “ಜ್ಞಾನ ಚಂದನ” ಮತ್ತ”ಜ್ಞಾನ ನಂದನ” ಕೃತಿಗಳ ಬಿಡುಗಡೆ ಹಾಗೂ ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧೆ ವಿಜೇತರಿಗೆ ಪುರಸ್ಕಾರ ಸಮಾರಂಭ

Suddi Udaya

ಉಜಿರೆಯ ರಕ್ಷಿತ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶ್ರೀರಸ್ತು ಶುಭಮಸ್ತು ಧಾರವಾಹಿಯ ನಟಿ ದೀಪಾ ಕಟ್ಟೆ

Suddi Udaya
error: Content is protected !!