July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮುಂಡಾಜೆ: ರಬ್ಬರ್ ತೋಟದಲ್ಲಿ ನಾಲ್ಕು ಚಿರತೆಗಳು ಪ್ರತ್ಯಕ್ಷ: ಅಪಾಯದಿಂದ ಪಾರಾದ ಕಾರ್ಮಿಕರು

ಮುಂಡಾಜೆ: ಉಜಿರೆ ರಬ್ಬರ್ ಸೊಸೈಟಿಯ ಉಪಾಧ್ಯಕ್ಷ ಅನಂತ್ ಭಟ್ ಮಚ್ಚಿಮಲೆಯವರ ರಬ್ಬರ್ ತೋಟದಲ್ಲಿ ನಾಲ್ಕು ಚಿರತೆಗಳು ಪತ್ತೆಯಾಗಿದ್ದು, ಮುಂಡಾಜೆಯ ಜನರಲ್ಲಿ ಆತಂಕ ಮೂಡಿಸಿದೆ.

ರಬ್ಬರ್ ಟ್ಯಾಪಿಂಗ್ ನ ಕಾರ್ಮಿಕರು ಚಿರತೆಗಳನ್ನು ನೋಡಿ ಕಕ್ಕಾಬಿಕ್ಕಿಯಾಗಿ ಓಡಿದ್ದು, ಅವರು ಅನಂತ್ ಭಟ್ ರವರಿಗೆ ಮಾಹಿತಿ ನೀಡಿದ್ದಾರೆ. ಒಂದು ದೊಡ್ಡ ಚಿರತೆಯ ಜೊತೆ ಮೂರು ಮರಿ ಚಿರತೆಗಳು ಪತ್ತೆಯಾಗಿದ್ದು, ಮತ್ತಷ್ಟು ಚಿರತೆಗಳು ಇರುವ ಸಾಧ್ಯತೆಯಿದೆ ಎಂದು ಅಂದಾಜಿಸಲಾಗಿದೆ.

ಸುಮಾರು 3-4 ದಿನಗಳಿಂದ ಚಿರತೆ ಮುಂಡಾಜೆ ಪರಿಸರದಲ್ಲಿ ಓಡಾಡುತ್ತಿದ್ದು, ಅರಸಮಜಲು, ಕುಂಟಾಲಪಲ್ಕೆ, ಕಲ್ಲಪಿತ್ತಿಲು ಎಂಬಲ್ಲಿ ಓಡಾಟ ನಡೆಸಿದ್ದು, ಜ.12ಂದು ಅರಸಮಜಲು ಚಿದಾನಂದ ನಾಯ್ಕ ರವರ ಮನೆಯ ಹಟ್ಟಿಯಲ್ಲಿದ್ದ ಕರುವನ್ನು ಚಿರತೆಯು ತಿಂದು ಹೋಗಿದ್ದು, ನಂತರ ಸ್ಥಳೀಯರ ನಾಯಿಯನ್ನು ತಿಂದ್ದು ಹಾಕಿದ ಬಗ್ಗೆ ವರದಿಯಾಗಿದೆ.

Related posts

ವೇಣೂರು: ಸಹೋದರರಿಬ್ಬರಿದ್ದ ಬೈಕ್ ಗೆ ಗೂಡ್ಸ್ ರಿಕ್ಷಾ ಡಿಕ್ಕಿ: ಓರ್ವ ಸ್ಥಳದಲ್ಲೇ ಮೃತ್ಯು, ಮತ್ತೋರ್ವನಿಗೆ ಗಂಭೀರ ಗಾಯ

Suddi Udaya

ಇತ್ತೀಚೆಗೆ ಮೃತರಾದ ಕುಕ್ಕಪ್ಪ ಗೌಡರವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯರಾಗಿ ನಾರಾಯಣ ಪೂಜಾರಿ , ಕೆ.ಶ್ರೀಧರ್ ರಾವ್ ಆಯ್ಕೆ

Suddi Udaya

ಪುಂಜಾಲಕಟ್ಟೆ ಸ.ಪ್ರ.ದ. ಕಾಲೇಜಿನಲ್ಲಿ ಅಂತರ ಕಾಲೇಜು ಪುರುಷರ ಹ್ಯಾಂಡ್ ಬಾಲ್ ಪಂದ್ಯಾಟ

Suddi Udaya

ಅರಸಿನಮಕ್ಕಿ: ಕಾಪು-ಉಪರಡ್ಕ ಬಳಿ ರಸ್ತೆಗೆ ಬೃಹತ್ ಗಾತ್ರದ ಮರ ಬಿದ್ದು 2 ವಿದ್ಯುತ್ ಕಂಬಗಳಿಗೆ ಹಾನಿ

Suddi Udaya

ಗುರುವಾಯನಕೆರೆ: ಎಕ್ಸೆಲ್ ನಲ್ಲಿ ಚುನಾವಣಾ ಅರಿವು ಸ್ಪರ್ಧೆಗಳ ಉದ್ಘಾಟನೆ

Suddi Udaya
error: Content is protected !!