22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಅರೆಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನಕ್ಕೆ ಸುಮಂತ್ ಕುಮಾರ್ ಜೈನ್ ಹಾಗೂ ಆನಂದ ಶೆಟ್ಟಿ ವಾತ್ಸಲ್ಯ ನೀಡಿದ ನಂದಾ ದೀಪ ಅರ್ಪಣೆ: ಜಾತ್ರೋತ್ಸವದ ಅಮಂತ್ರಣ ಪತ್ರಿಕೆ ಬಿಡುಗಡೆ

ಗುರುವಾಯನಕೆರೆ: ಕಾರಣಿಕಾ ಕ್ಷೇತ್ರ ಅರೆಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನಕ್ಕೆ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಹಾಗೂ ನಿವೃತ್ತ ಸರಕಾರಿ ಅಧಿಕಾರಿ ಆನಂದ ಶೆಟ್ಟಿ ವಾತ್ಸಲ್ಯ ಅವರು ಸೇವಾ ರೂಪದಲ್ಲಿ ನೀಡಿದ ನಂದಾ ದೀಪಗಳನ್ನು ದೈವಕ್ಕೆ ಅರ್ಪಣೆ ಮತ್ತು ದೀಪ ಪ್ರಜ್ವಲನೆ ಕ್ಷೇತ್ರದ ತಂತ್ರಿಗಳು ಮತ್ತು ಅರ್ಚಕರ ಉಪಸ್ಥಿತಿಯಲ್ಲಿ ಜ.೧೪ರಂದು ಮಕರ ಸಂಕ್ರಮಣದ ಪುಣ್ಯ ದಿನದಂದು ನಡೆಯಿತು.

ಈ ಸಂದರ್ಭದಲ್ಲಿ ಫೆಬ್ರವರಿ ತಿಂಗಳಲ್ಲಿ ನಡೆಯಲಿರುವ ವಾರ್ಷಿಕ ಜಾತ್ರೋತ್ಸವದ ಆಮಂತ್ರ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು. ಈ ವೇಳೆ ವೇದಮೂರ್ತಿ ಗೋಪಾಲಕೃಷ್ಣ ತಂತ್ರಿ ಮಡಂತ್ಯಾರ್ ಮತ್ತು ಕ್ಷೇತ್ರದ ಅರ್ಚಕರಾದ ರತ್ನಾಕರ ನೂರಿತ್ತಾಯ ಇವರನ್ನು ಅರಮಲೆಬೆಟ್ಟದ ಕ್ಷೇತ್ರದವತಿಯಿಂದ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಅನುವಂಶಿಕ ಆಡಳಿತ ಮೊಕ್ತೇಸರರು ಸುಖೇಶ್ ಕುಮಾರ್ ಕಡಂಬು, ಸುನೀಶ್ ಕುಮಾರ್ ಜೈನ್, ಸನ್ಮತಿ ಜೈನ್, ಸುಮಂತ್ ಕುಮಾರ್ ಜೈನ್, ದೇವದಾಸ್ ಶೆಟ್ಟಿ ಬದ್ಯಾರ್, ಧರಣೇಂದ್ರ ಜೈನ್, ಪ್ರದೀಪ್ ಶೆಟ್ಟಿ ಪಾಡ್ಯಾರ್ ಮಜಲು, ಆನಂದ ಶೆಟ್ಟಿ ವಾತ್ಸಲ್ಯ, ಪುರಂದರ ಶೆಟ್ಟಿ ಪಾಡ್ಯಾರ್, ವಿಠ್ಠಲ್ ಶೆಟ್ಟಿ ಪಾಡ್ಯಾರ್, ಶೋಭಿತ್ ಜೈನ್, ಪ್ರದೀಪ್ ಶೆಟ್ಟಿ ವಾತ್ಸಲ್ಯ, ಸೀತಾರಾಮ ಶೆಟ್ಟಿ ವೈಭವ್ ಹಾರ್ಡ್ವೇರ್, ಪ್ರೇಮ್ ಶೆಟ್ಟಿ ಅನುಗ್ರಹ ಸೇರಿದಂತೆ ಭಕ್ತರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಪಟ್ಟಣ ಪಂಚಾಯತ್ 8 ಮಂದಿ ಪೌರ ಕಾರ್ಮಿಕರ ನೇರ ನೇಮಕಾತಿ

Suddi Udaya

ಕುಂಭಮೇಳದಲ್ಲಿ ಪವಿತ್ರ ಸ್ನಾನಗೈದ ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಭಕ್ತರು

Suddi Udaya

ಕೊಯ್ಯೂರು ಗ್ರಾ.ಪಂ. ನ ಗ್ರಾಮ ಸಭೆ

Suddi Udaya

ಕಂಪನಿ ಸೆಕ್ರೆಟರಿ ಪ್ರವೇಶ ಪರೀಕ್ಷೆಯಲ್ಲಿ ಉಜಿರೆ ಶ್ರೀ ಧ.ಮಂ. ಪ.ಪೂ ಕಾಲೇಜಿನ ಏಳು ವಿದ್ಯಾರ್ಥಿಗಳು ತೇರ್ಗಡೆ

Suddi Udaya

ಸಂಪೂರ್ಣ ಹಾಳಾದ ಧರ್ಮಸ್ಥಳ-ಮುಳಿಕ್ಕಾರು ರಸ್ತೆ: ಶಾಲಾ ಮಕ್ಕಳು ಸಂಚರಿಸಲು ಪರದಾಡುವ ಸ್ಥಿತಿ ನಿರ್ಮಾಣ, ಅಲ್ಲಲ್ಲಿ ಹೂತು ಹೋಗುವ ವಾಹನಗಳು

Suddi Udaya

ಉಜಿರೆ ಎಸ್.ಡಿ.ಎಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya
error: Content is protected !!