25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಮನೆಯ ಸಮೀಪದ ಕೆರೆಯಲ್ಲಿ ಪತ್ತೆ

ಕಳಿಯ: ದೇವಸ್ಥಾನಕ್ಕೆ ಇಂದು ಮುಂಜಾನೆ 4ಗಂಟೆಗೆ ಧನುಪೂಜೆಗೆ ಮನೆಯಿಂದ ಹೋಗಿದ್ದ ಬಾಲಕನೋರ್ವ ನಿಗೂಢವಾಗಿ ನಾಪತ್ತೆಯಾಗಿದ್ದು ಬಾಲಕನ ಮೃತದೇಹ ಮನೆಯ ಸಮೀಪದ ಕೆರೆಯಲ್ಲಿ ಪತ್ತೆಯಾಗಿದ್ದು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಘಟನೆ ವಿವರ: ಕುವೆಟ್ಟು ಗ್ರಾಮದ ಸಂಬೋಳ್ಯ ಬರಮೇಲು ಸುಬ್ರಹ್ಮಣ್ಯ ನಾಯಕ್ ಅವರ ಪುತ್ರ ಗೇರುಕಟ್ಟೆ ಪ್ರೌಢ ಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಸುಮಂತ್ (15ವ) ನಾಪತ್ತೆಯಾದ ಬಾಲಕನಾಗಿದ್ದಾನೆ. ನಾಳ ದೇವಸ್ಥಾನಕ್ಕೆ ಸುಮಂತ್ ಸೇರಿದಂತೆ ಮೂರು ಮಂದಿ ಬಾಲಕರು ಒಟ್ಟಿಗೆ ಹೋಗುತ್ತಿದ್ದು, ಇಂದು ಮುಂಜಾನೆ ಸುಮಂತ್ ಮನೆಯಿಂದ ಬರುವಾಗ ತಡವಾದ್ದರಿಂದ ಇಬ್ಬರು ಬಾಲಕರು ಆತನಿಗಾಗಿ ಕಾದು ದೇವಸ್ಥಾನಕ್ಕೆ ತೆರಳಿದ್ದರು. ಆದರೆ ಸುಮಂತ್ ಮನೆಯಿಂದ ಹೊರಟ್ಟಿದ್ದರು ದೇವಸ್ಥಾನಕ್ಕೆ ಬಂದಿರಲಿಲ್ಲ. ಇದರಿಂದ ಸಂಶಯಗೊಂಡ ಬಾಲಕರು ಆತನ ಮನೆಗೆ ಪೋನ್ ಮಾಡಿದಾಗ ಸುಮಂತ್‌ನ ಮನೆಯವರು ಆತ ದೇವಸ್ಥಾನಕ್ಕೆ ಮುಂಜಾನೆಯೇ ಹೋಗಿದ್ದಾನೆ ಎಂದು ತಿಳಿಸಿದ್ದರು. ಆದರೆ ಆತ ದೇವಸ್ಥಾನಕ್ಕೆ ಬಂದಿಲ್ಲ ಎಂದು ಬಾಲಕರು ಹೇಳಿದಾಗ ಮನೆಯವರು ಆತಂಕಗೊಂಡು ಸ್ಥಳೀಯವಾಗಿ ಮಾಹಿತಿ ನೀಡಿದರು. ಬಾಲಕ ಬರುವ ದಾರಿಯ ನಡುವೆ ಕೆರೆ ಬಳಿ ರಕ್ತದ ಕಲೆಗಳು ಸ್ಥಳೀಯರಿಗೆ ಕಂಡು ಬಂದಿದ್ದು, ಸ್ಥಳಕ್ಕೆ ಅರಣ್ಯ ಇಲಾಖೆಯವರು‌, ಪೊಲೀಸ್ ಇಲಾಖೆ , ಅಗ್ನಿ ಶಾಮಕ ದಳ ಸ್ಥಳೀಯರು ಸೇರಿ ತೀರಾ ಹುಡುಕಾಟ ನಡೆಸಿದ್ದು ಇದೀಗ ಬಾಲಕನ ಮೃತ ದೇಹ ಕೆರೆಯಲ್ಲಿ ಪತ್ತೆಯಾಗಿದೆ.

ಘಟನಾ ಸ್ಥಳಕ್ಕೆ ತಹಶೀಲ್ದಾರರು ಪೃಥ್ವಿ ಸಾನಿಕಂ, ಆರ್ ಐ ಪಾವಡಪ್ಪ, ಆಡಳಿತಾಧಿಕಾರಿ, ಬಿಒ ತಾರಕೇಸರಿ, ಶಾಲಾ ಶಿಕ್ಷಕರು, ಆಗಮಿಸಿದ್ದರು.

Related posts

ಕೊಯ್ಯೂರು ಶ್ರೀಕೃಷ್ಣ ಭಜನಾ ಮಂಡಳಿ ಭಜನೋತ್ಸವ

Suddi Udaya

ಪಟ್ರಮೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ: ತೋರಣ ಮೂಹೂರ್ತ, ಹೊರೆಕಾಣಿಕೆ ಸಮರ್ಪಣೆ

Suddi Udaya

ಜ.29-ಫೆ.2 : ಬದ್ಯಾರು ಶ್ರೀ ಲೋಕನಾಥೇಶ್ವರ ದೇವರ ವಾರ್ಷಿಕ ಜಾತ್ರೋತ್ಸವ

Suddi Udaya

ರೆಖ್ಯ: ರಾಷ್ಟ್ರೀಯ ಹೆದ್ದಾರಿ 75ರ ಫ್ಲೈಓವರ್ ನಲ್ಲಿ ಬೈಕ್ ಹಾಗೂ ಕಾರು ನಡುವೆ ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು

Suddi Udaya

ಗೋಳಿಯಂಗಡಿಯಲ್ಲಿ ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ಕಳವು

Suddi Udaya

ಅನುಗ್ರಹ ಕಾಲೇಜಿನಲ್ಲಿ ಅನುಕ-2025 ರ ಉದ್ಘಾಟನೆ

Suddi Udaya
error: Content is protected !!