27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮುಂಡಾಜೆ: ರಬ್ಬರ್ ತೋಟದಲ್ಲಿ ನಾಲ್ಕು ಚಿರತೆಗಳು ಪ್ರತ್ಯಕ್ಷ: ಅಪಾಯದಿಂದ ಪಾರಾದ ಕಾರ್ಮಿಕರು

ಮುಂಡಾಜೆ: ಉಜಿರೆ ರಬ್ಬರ್ ಸೊಸೈಟಿಯ ಉಪಾಧ್ಯಕ್ಷ ಅನಂತ್ ಭಟ್ ಮಚ್ಚಿಮಲೆಯವರ ರಬ್ಬರ್ ತೋಟದಲ್ಲಿ ನಾಲ್ಕು ಚಿರತೆಗಳು ಪತ್ತೆಯಾಗಿದ್ದು, ಮುಂಡಾಜೆಯ ಜನರಲ್ಲಿ ಆತಂಕ ಮೂಡಿಸಿದೆ.

ರಬ್ಬರ್ ಟ್ಯಾಪಿಂಗ್ ನ ಕಾರ್ಮಿಕರು ಚಿರತೆಗಳನ್ನು ನೋಡಿ ಕಕ್ಕಾಬಿಕ್ಕಿಯಾಗಿ ಓಡಿದ್ದು, ಅವರು ಅನಂತ್ ಭಟ್ ರವರಿಗೆ ಮಾಹಿತಿ ನೀಡಿದ್ದಾರೆ. ಒಂದು ದೊಡ್ಡ ಚಿರತೆಯ ಜೊತೆ ಮೂರು ಮರಿ ಚಿರತೆಗಳು ಪತ್ತೆಯಾಗಿದ್ದು, ಮತ್ತಷ್ಟು ಚಿರತೆಗಳು ಇರುವ ಸಾಧ್ಯತೆಯಿದೆ ಎಂದು ಅಂದಾಜಿಸಲಾಗಿದೆ.

ಸುಮಾರು 3-4 ದಿನಗಳಿಂದ ಚಿರತೆ ಮುಂಡಾಜೆ ಪರಿಸರದಲ್ಲಿ ಓಡಾಡುತ್ತಿದ್ದು, ಅರಸಮಜಲು, ಕುಂಟಾಲಪಲ್ಕೆ, ಕಲ್ಲಪಿತ್ತಿಲು ಎಂಬಲ್ಲಿ ಓಡಾಟ ನಡೆಸಿದ್ದು, ಜ.12ಂದು ಅರಸಮಜಲು ಚಿದಾನಂದ ನಾಯ್ಕ ರವರ ಮನೆಯ ಹಟ್ಟಿಯಲ್ಲಿದ್ದ ಕರುವನ್ನು ಚಿರತೆಯು ತಿಂದು ಹೋಗಿದ್ದು, ನಂತರ ಸ್ಥಳೀಯರ ನಾಯಿಯನ್ನು ತಿಂದ್ದು ಹಾಕಿದ ಬಗ್ಗೆ ವರದಿಯಾಗಿದೆ.

Related posts

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ವಾರ್ಷಿಕ ಮಹಾಸಭೆ

Suddi Udaya

ಮುಂಡಾಜೆ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಎಕ್ಸಲೆಂಟ್ ಮೂಡುಬಿದಿರೆಗೆ ರಾಜ್ಯ ಮಟ್ಟದಲ್ಲಿ ಎರಡನೇ ಮತ್ತು ನಾಲ್ಕನೇ ರ‍್ಯಾಂಕ್‌ಗಳು

Suddi Udaya

ಸುಲ್ಕೇರಿ ಗ್ರಾಮ ಸಭೆಗೆ ಒಂದು ಗಂಟೆ ಲೇಟಾಗಿ ಬಂದ ನೋಡೇಲ್ ಅಧಿಕಾರಿ, ಕಾದು ಕಾದು ಸುಸ್ತಾದ ಗ್ರಾಮಸ್ಥರು, ಅಧಿಕಾರಿ ವಿರುದ್ದ ಅಸಮಾಧಾನ, ನಿಗದಿತ ಸಮಯದಲ್ಲಿ ಸಭೆ ಪ್ರಾರಂಭವಾಗದೆ ವಿಳಂಬ

Suddi Udaya

ಡಾಮರೀಕರಣ ಭಾಗ್ಯಕ್ಕಾಗಿ ಕಾಯುತ್ತಿರುವ ಬಂಗೇರಕಟ್ಟೆ- ನೆತ್ತರ ರಸ್ತೆ

Suddi Udaya

ಕೊಕ್ಕಡ: ಕಾಪಿನಬಾಗಿಲುನಲ್ಲಿ ಒಂಟಿ ಸಲಗದ ಹಾವಳಿ: ಅಪಾರ ಅಡಿಕೆ ಗಿಡ, ಬಾಳೆ ಗಿಡಗಳಿಗೆ ಹಾನಿ

Suddi Udaya
error: Content is protected !!