22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮುಂಡಾಜೆ: ರಬ್ಬರ್ ತೋಟದಲ್ಲಿ ನಾಲ್ಕು ಚಿರತೆಗಳು ಪ್ರತ್ಯಕ್ಷ: ಅಪಾಯದಿಂದ ಪಾರಾದ ಕಾರ್ಮಿಕರು

ಮುಂಡಾಜೆ: ಉಜಿರೆ ರಬ್ಬರ್ ಸೊಸೈಟಿಯ ಉಪಾಧ್ಯಕ್ಷ ಅನಂತ್ ಭಟ್ ಮಚ್ಚಿಮಲೆಯವರ ರಬ್ಬರ್ ತೋಟದಲ್ಲಿ ನಾಲ್ಕು ಚಿರತೆಗಳು ಪತ್ತೆಯಾಗಿದ್ದು, ಮುಂಡಾಜೆಯ ಜನರಲ್ಲಿ ಆತಂಕ ಮೂಡಿಸಿದೆ.

ರಬ್ಬರ್ ಟ್ಯಾಪಿಂಗ್ ನ ಕಾರ್ಮಿಕರು ಚಿರತೆಗಳನ್ನು ನೋಡಿ ಕಕ್ಕಾಬಿಕ್ಕಿಯಾಗಿ ಓಡಿದ್ದು, ಅವರು ಅನಂತ್ ಭಟ್ ರವರಿಗೆ ಮಾಹಿತಿ ನೀಡಿದ್ದಾರೆ. ಒಂದು ದೊಡ್ಡ ಚಿರತೆಯ ಜೊತೆ ಮೂರು ಮರಿ ಚಿರತೆಗಳು ಪತ್ತೆಯಾಗಿದ್ದು, ಮತ್ತಷ್ಟು ಚಿರತೆಗಳು ಇರುವ ಸಾಧ್ಯತೆಯಿದೆ ಎಂದು ಅಂದಾಜಿಸಲಾಗಿದೆ.

ಸುಮಾರು 3-4 ದಿನಗಳಿಂದ ಚಿರತೆ ಮುಂಡಾಜೆ ಪರಿಸರದಲ್ಲಿ ಓಡಾಡುತ್ತಿದ್ದು, ಅರಸಮಜಲು, ಕುಂಟಾಲಪಲ್ಕೆ, ಕಲ್ಲಪಿತ್ತಿಲು ಎಂಬಲ್ಲಿ ಓಡಾಟ ನಡೆಸಿದ್ದು, ಜ.12ಂದು ಅರಸಮಜಲು ಚಿದಾನಂದ ನಾಯ್ಕ ರವರ ಮನೆಯ ಹಟ್ಟಿಯಲ್ಲಿದ್ದ ಕರುವನ್ನು ಚಿರತೆಯು ತಿಂದು ಹೋಗಿದ್ದು, ನಂತರ ಸ್ಥಳೀಯರ ನಾಯಿಯನ್ನು ತಿಂದ್ದು ಹಾಕಿದ ಬಗ್ಗೆ ವರದಿಯಾಗಿದೆ.

Related posts

ಕೊಕ್ಕಡ ವಿಶ್ವ ಹಿಂದೂ ಪರಿಷದ್ , ಕೊಕ್ಕಡ ಶ್ರೀ ರಾಮ ಸೇವಾ ಟ್ರಸ್ಟ್, ಆಶ್ರಯದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಹತ್ಯಡ್ಕ: ಕೊಡಂಗೆ ನಿವಾಸಿ ಹರಿಹರ ಹೆಬ್ಬಾರ್ ಗೋಖಲೆ ನಿಧನ

Suddi Udaya

ಗುರುವಾಯನಕೆರೆಯ ‘ಕೆರೆ’ ಗೆ ಲೋಕಾಯುಕ್ತ ನ್ಯಾಯಾಮೂರ್ತಿ ಭೇಟಿ, ಪರಿಶೀಲನೆ

Suddi Udaya

ಲಾಯಿಲ: ಕನ್ನಾಜೆ ಅಂಗನವಾಡಿ ಕೇಂದ್ರದಲ್ಲಿ ಹಣ್ಣಿನ ಗಿಡಗಳ ನಾಟಿ ಹಾಗೂ ಶಾಲಾ ಕೈತೋಟ ರಚನೆ

Suddi Udaya

ಕನ್ಯಾಡಿ: ಗುರಿಪಳ್ಳ ಪ್ರವೀಣ್ ರೋಡ್ರಿಗಸ್ ರವರ ಮನೆಯ ಮೇಲೆ ಅಬಕಾರಿ ದಾಳಿ: 18 ಲೀ. ಕಳ್ಳಬಟ್ಟಿ ಸಾರಾಯಿ ವಶ

Suddi Udaya

ವೇಣೂರು ವಿದ್ಯೋದಯ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!