ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅನಾರು ಶ್ರೀ ದುರ್ಗಾಪರಮೇಶ್ವರೀ ದೇವಿಯ ವರ್ಷಾವಧಿ ಜಾತ್ರಾ ಮಹೋತ್ಸವ: ತೋರಣ ಮುಹೂರ್ತ, ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ಕ್ಯಾಲೆಂಡರ್ ಬಿಡುಗಡೆ

ಪಟ್ರಮೆ: ಅನಾರು ಶ್ರೀ ದುರ್ಗಾಪರಮೇಶ್ವರೀ ದೇವಿಯ ವರ್ಷಾವಧಿ ಜಾತ್ರಾ ಮಹೋತ್ಸವವು ಜ.14ರಿಂದ ಪ್ರಾರಂಭಗೊಂಡು ಜ.18ರ ವರೆಗೆ ಬ್ರಹ್ಮಶ್ರೀ ಉಚ್ಚಿಲ ಪದ್ಮನಾಭ ತಂತ್ರಿಗಳು ನೀಲೇಶ್ವರ ಇವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ.

ಇಂದು (ಜ.14 ) ಬೆಳಿಗ್ಗೆ ತೋರಣ ಮುಹೂರ್ತ, ಹಾಗೂ ಗ್ರಾಮಸ್ಥರಿಂದ ಹಸಿರುವಾಣಿ ಹೊರೆಕಾಣಿಕೆ ನಡೆಯಿತು. ಈ ವೇಳೆ ದೇವಸ್ಥಾನದ 2026 ರ ನೂತನ ಕ್ಯಾಲೆಂಡರ್ ನ್ನು ಅನುವಂಶಿಕ ಆಡಳಿತ ಮೊಕ್ತೇಸರರಾದ ನಿತೇಶ್ ಬಲ್ಲಾಳ್ ಉಳಿಯಬೀಡು , ಅರ್ಚಕ ಯು.ವಿ. ಗುರುಪ್ರಸಾದ್ ನಿಡ್ವಣ್ಣಾಯ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಗ್ರಾಮ್ ಪಂಚಾಯತ್ ಅಧ್ಯಕ್ಷ ಮನೋಜ್ ಕುಮಾರ್, ಊರಿನ ಗಣ್ಯರಾದ ದೇವಪಾಲ ಅಜ್ರಿ, ಜಾತ್ರಾ ಸಮಿತಿಯ ಅಧ್ಯಕ್ಷ ವಿಠಲ ಎಂ.ಕೆ, ಕಾರ್ಯದರ್ಶಿ ಶರತ್ ಚಂದ್ರ, ಚಂದ್ರಶೇಖರ್, ಹರೀಶ, ಸಮಿತಿ ಸದಸ್ಯರು ಹಾಗೂ ಊರಿನ ಗಣ್ಯರು ಉಪಸ್ಥಿತರಿದ್ದರು.

ಸಂಜೆ ಧ್ವಜಾರೋಹಣ ಸುತ್ತು ಬಲಿ, ಮಹಾಪೂಜೆ, ರಾತ್ರಿ ಪಟ್ರಮೆ ಅನಾರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ಮತ್ತು ಸುರ್ಯತ್ತಾವು ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಅನುವಂಶಿಕ ಆಡಳಿತ ಮೊಕ್ತೇಸರ ನಿತೇಶ್ ಬಲ್ಲಾಳ್, ಉಳಿಯಬೀಡು ರವರ ಅಧ್ಯಕ್ಷತೆಯಲ್ಲಿ ಧಾರ್ಮಿಕ ಸಭೆ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಶ್ರೀ ಲಕ್ಷ್ಮೀ ಇಂಡಸ್ಟ್ರೀಸ್ ಮಾಲಕ ಮೋಹನ್ ಕುಮಾರ್ ಭಾಗವಹಿಸಲಿದ್ದಾರೆ.

Related posts

ಶಿಶಿಲ: ಸೃಷ್ಟಿ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ರಾಜಕೇಸರಿ ಟ್ರಸ್ಟ್ ವತಿಯಿಂದ ಪರಪಾದೆ ಶಾಲೆಯಲ್ಲಿ ಸ್ವಚ್ಛಾಲಯ ಅಭಿಯಾನ

Suddi Udaya

ಇಂದಬೆಟ್ಟು ಪಲ್ಲದಕೋಡಿ ನಿವಾಸಿ ಜಗದೀಶ್ ನಿಧನ

Suddi Udaya

ಯಕ್ಷಧ್ರುವ ಪಟ್ಲ ಘಟಕ ಬೆಳ್ತಂಗಡಿ ವತಿಯಿಂದ ಯಕ್ಷಸಂಭ್ರಮ ಉದ್ಘಾಟನೆ: ನಾಲ್ವರು ಯಕ್ಷಗಾನ ತರಬೇತಿ ಗುರುಗಳಿಗೆ ಗೌರವಾರ್ಪಣೆ: 8 ಶಾಲೆಗಳು 480 ಯಕ್ಷ ವಿದ್ಯಾರ್ಥಿಗಳಿಂದ ಯಕ್ಷಗಾನ ರಂಗಪ್ರವೇಶ

Suddi Udaya

ಪ್ರಕೃತಿ ವಿಸ್ಮಯ: ಒಂದೇ ಗೊನೆಯಲ್ಲಿ ಎರಡು ಬಾಳೆ ಹೂ(ಪೂಂಬೆ)

Suddi Udaya

ಗೌಸಿಯಾ ಜಾಮಿಯಾ ಮಸೀದಿಯಲ್ಲಿ ಏಪ್ರಿಲ್ 11 ಮತ್ತು 12 ರಂದು ನಡೆಯಲಿರುವ ಬೃಹತ್ ವಾರ್ಷಿಕ ಜಲಾಲಿಯ್ಯಾ ರಾತೀಬ್ ಮಜ್ಲಿಸ್ ಕಾರ್ಯಕ್ರಮ

Suddi Udaya
error: Content is protected !!