25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅನಾರು ಶ್ರೀ ದುರ್ಗಾಪರಮೇಶ್ವರೀ ದೇವಿಯ ವರ್ಷಾವಧಿ ಜಾತ್ರಾ ಮಹೋತ್ಸವ: ತೋರಣ ಮುಹೂರ್ತ, ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ಕ್ಯಾಲೆಂಡರ್ ಬಿಡುಗಡೆ

ಪಟ್ರಮೆ: ಅನಾರು ಶ್ರೀ ದುರ್ಗಾಪರಮೇಶ್ವರೀ ದೇವಿಯ ವರ್ಷಾವಧಿ ಜಾತ್ರಾ ಮಹೋತ್ಸವವು ಜ.14ರಿಂದ ಪ್ರಾರಂಭಗೊಂಡು ಜ.18ರ ವರೆಗೆ ಬ್ರಹ್ಮಶ್ರೀ ಉಚ್ಚಿಲ ಪದ್ಮನಾಭ ತಂತ್ರಿಗಳು ನೀಲೇಶ್ವರ ಇವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ.

ಇಂದು (ಜ.14 ) ಬೆಳಿಗ್ಗೆ ತೋರಣ ಮುಹೂರ್ತ, ಹಾಗೂ ಗ್ರಾಮಸ್ಥರಿಂದ ಹಸಿರುವಾಣಿ ಹೊರೆಕಾಣಿಕೆ ನಡೆಯಿತು. ಈ ವೇಳೆ ದೇವಸ್ಥಾನದ 2026 ರ ನೂತನ ಕ್ಯಾಲೆಂಡರ್ ನ್ನು ಅನುವಂಶಿಕ ಆಡಳಿತ ಮೊಕ್ತೇಸರರಾದ ನಿತೇಶ್ ಬಲ್ಲಾಳ್ ಉಳಿಯಬೀಡು , ಅರ್ಚಕ ಯು.ವಿ. ಗುರುಪ್ರಸಾದ್ ನಿಡ್ವಣ್ಣಾಯ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಗ್ರಾಮ್ ಪಂಚಾಯತ್ ಅಧ್ಯಕ್ಷ ಮನೋಜ್ ಕುಮಾರ್, ಊರಿನ ಗಣ್ಯರಾದ ದೇವಪಾಲ ಅಜ್ರಿ, ಜಾತ್ರಾ ಸಮಿತಿಯ ಅಧ್ಯಕ್ಷ ವಿಠಲ ಎಂ.ಕೆ, ಕಾರ್ಯದರ್ಶಿ ಶರತ್ ಚಂದ್ರ, ಚಂದ್ರಶೇಖರ್, ಹರೀಶ, ಸಮಿತಿ ಸದಸ್ಯರು ಹಾಗೂ ಊರಿನ ಗಣ್ಯರು ಉಪಸ್ಥಿತರಿದ್ದರು.

ಸಂಜೆ ಧ್ವಜಾರೋಹಣ ಸುತ್ತು ಬಲಿ, ಮಹಾಪೂಜೆ, ರಾತ್ರಿ ಪಟ್ರಮೆ ಅನಾರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ಮತ್ತು ಸುರ್ಯತ್ತಾವು ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಅನುವಂಶಿಕ ಆಡಳಿತ ಮೊಕ್ತೇಸರ ನಿತೇಶ್ ಬಲ್ಲಾಳ್, ಉಳಿಯಬೀಡು ರವರ ಅಧ್ಯಕ್ಷತೆಯಲ್ಲಿ ಧಾರ್ಮಿಕ ಸಭೆ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಶ್ರೀ ಲಕ್ಷ್ಮೀ ಇಂಡಸ್ಟ್ರೀಸ್ ಮಾಲಕ ಮೋಹನ್ ಕುಮಾರ್ ಭಾಗವಹಿಸಲಿದ್ದಾರೆ.

Related posts

ಮೇ.13: ಸುರತ್ಕಲ್ ಎನ್‌ಐಟಿಕೆಯಲ್ಲಿ ಬೆಳ್ತಂಗಡಿ ಸೇರಿದಂತೆ ದ.ಕ ಜಿಲ್ಲೆಯ ಎಂಟು ವಿಧಾನ ಸಭಾ ಕ್ಷೇತ್ರಗಳ ಮತ ಎಣಿಕೆ: ಸ್ಟ್ರಾಂಗ್ ರೂಮ್‌ಗೆ ಕೇಂದ್ರೀಯ ಅರೆಸೇನಾ ಪಡೆಯಿಂದ ಬಿಗು ಭದ್ರತೆ

Suddi Udaya

ಮರುಮೌಲ್ಯ ಮಾಪನದಲ್ಲಿ ಶ್ರೀ ಧ.ಮಂ.ಪ.ಪೂ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿನಿ ಕು. ಅನನ್ಯ ರಾಜ್ಯಕ್ಕೆ 9ನೇ ರ‍್ಯಾಂಕ್

Suddi Udaya

ಉರುವಾಲು ಶ್ರೀ ವಿಘ್ನೇಶ್ವರ ಭಜನಾ ಮಂಡಳಿಯಲ್ಲಿ ಶ್ರೀ ವರಮಹಾಲಕ್ಷ್ಮಿ ವ್ರತ ಪೂಜೆ

Suddi Udaya

ಕಕ್ಕಿಂಜೆ: ಸಿದ್ದಿಕ್ ಯು.ಪಿ. ಮಾಲಕತ್ವದ ವಾಯುಮಾಲಿನ್ಯ ತಪಾಸಣಾ ಕೇಂದ್ರ ಉದ್ಘಾಟನೆ

Suddi Udaya

ಉಜಿರೆಯಲ್ಲಿ ಎನ್ನೆಸ್ಸೆಸ್ ವತಿಯಿಂದ ರಾಷ್ಟ್ರೀಯ ಯುವದಿನ ಸಂಪನ್ನ

Suddi Udaya

ಮುಂಡಾಜೆ ಸೋಮಂತಡ್ಕದಲ್ಲಿ ಕಾಂಗ್ರೆಸ್ ಪ್ರಚಾರ ಸಭೆ

Suddi Udaya
error: Content is protected !!