July 23, 2026
Uncategorized

ಅರೆಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನಕ್ಕೆ ಸುಮಂತ್ ಕುಮಾರ್ ಜೈನ್ ಹಾಗೂ ಆನಂದ ಶೆಟ್ಟಿ ವಾತ್ಸಲ್ಯ ನೀಡಿದ ನಂದಾ ದೀಪ ಅರ್ಪಣೆ: ಜಾತ್ರೋತ್ಸವದ ಅಮಂತ್ರಣ ಪತ್ರಿಕೆ ಬಿಡುಗಡೆ

ಗುರುವಾಯನಕೆರೆ: ಕಾರಣಿಕಾ ಕ್ಷೇತ್ರ ಅರೆಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನಕ್ಕೆ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಹಾಗೂ ನಿವೃತ್ತ ಸರಕಾರಿ ಅಧಿಕಾರಿ ಆನಂದ ಶೆಟ್ಟಿ ವಾತ್ಸಲ್ಯ ಅವರು ಸೇವಾ ರೂಪದಲ್ಲಿ ನೀಡಿದ ನಂದಾ ದೀಪಗಳನ್ನು ದೈವಕ್ಕೆ ಅರ್ಪಣೆ ಮತ್ತು ದೀಪ ಪ್ರಜ್ವಲನೆ ಕ್ಷೇತ್ರದ ತಂತ್ರಿಗಳು ಮತ್ತು ಅರ್ಚಕರ ಉಪಸ್ಥಿತಿಯಲ್ಲಿ ಜ.೧೪ರಂದು ಮಕರ ಸಂಕ್ರಮಣದ ಪುಣ್ಯ ದಿನದಂದು ನಡೆಯಿತು.

ಈ ಸಂದರ್ಭದಲ್ಲಿ ಫೆಬ್ರವರಿ ತಿಂಗಳಲ್ಲಿ ನಡೆಯಲಿರುವ ವಾರ್ಷಿಕ ಜಾತ್ರೋತ್ಸವದ ಆಮಂತ್ರ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು. ಈ ವೇಳೆ ವೇದಮೂರ್ತಿ ಗೋಪಾಲಕೃಷ್ಣ ತಂತ್ರಿ ಮಡಂತ್ಯಾರ್ ಮತ್ತು ಕ್ಷೇತ್ರದ ಅರ್ಚಕರಾದ ರತ್ನಾಕರ ನೂರಿತ್ತಾಯ ಇವರನ್ನು ಅರಮಲೆಬೆಟ್ಟದ ಕ್ಷೇತ್ರದವತಿಯಿಂದ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಅನುವಂಶಿಕ ಆಡಳಿತ ಮೊಕ್ತೇಸರರು ಸುಖೇಶ್ ಕುಮಾರ್ ಕಡಂಬು, ಸುನೀಶ್ ಕುಮಾರ್ ಜೈನ್, ಸನ್ಮತಿ ಜೈನ್, ಸುಮಂತ್ ಕುಮಾರ್ ಜೈನ್, ದೇವದಾಸ್ ಶೆಟ್ಟಿ ಬದ್ಯಾರ್, ಧರಣೇಂದ್ರ ಜೈನ್, ಪ್ರದೀಪ್ ಶೆಟ್ಟಿ ಪಾಡ್ಯಾರ್ ಮಜಲು, ಆನಂದ ಶೆಟ್ಟಿ ವಾತ್ಸಲ್ಯ, ಪುರಂದರ ಶೆಟ್ಟಿ ಪಾಡ್ಯಾರ್, ವಿಠ್ಠಲ್ ಶೆಟ್ಟಿ ಪಾಡ್ಯಾರ್, ಶೋಭಿತ್ ಜೈನ್, ಪ್ರದೀಪ್ ಶೆಟ್ಟಿ ವಾತ್ಸಲ್ಯ, ಸೀತಾರಾಮ ಶೆಟ್ಟಿ ವೈಭವ್ ಹಾರ್ಡ್ವೇರ್, ಪ್ರೇಮ್ ಶೆಟ್ಟಿ ಅನುಗ್ರಹ ಸೇರಿದಂತೆ ಭಕ್ತರು ಉಪಸ್ಥಿತರಿದ್ದರು.

Related posts

ಅರಸಿನಮಕ್ಕಿ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವರ ಬ್ರಹ್ಮಕಲಶೋತ್ಸವ ಸಂಭ್ರಮ: ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಕಾರ್ಯಕ್ರಮದ ಯಶಸ್ವಿಗೆ ಪೂರ್ವಭಾವಿ ಸಭೆ

Suddi Udaya

ಆ.18 ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ; ಬದುಕು ಕಟ್ಟೋಣ ಬನ್ನಿ ತಂಡ ಮತ್ತು ಇತರ ಸಂಘಟನೆಗಳ ನೇತೃತ್ವ ಯುವ ಜನತೆಯನ್ನು ತೊಡಗಿಸಿಕೊಂಡು ರಕ್ತದಾನಕ್ಕೆ ಪ್ರೇರಣೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ವತಿಯಿoದ ಡಾ. ಹೆಗ್ಗಡೆ ರವರಿಗೆ ಪಟ್ಟಾಭಿಷೇಕ ವಧ೯ಂತ್ಯುತ್ಸವ‌ ಅಭಿನಂದನೆ

Suddi Udaya

ಎಸ್ಐಆರ್ ಹೆಸರಿನಲ್ಲಿ ಕೇಂದ್ರ ಸರ್ಕಾರ ಪ್ರಜಾತಂತ್ರದ ಕಗ್ಗೊಲೆ ಮಾಡಲು ಯತ್ನಿಸುತ್ತಿದೆ. ರಕ್ಷಿತ್ ಶಿವರಾಂ

Suddi Udaya

ನಾಪತ್ತೆಯಾಗಿದ್ದ ಬೆದ್ರಬೆಟ್ಟು ನಿವಾಸಿ ಮೋಹಿನಿ ರವರ ಮೃತದೇಹ ಬಂಗಾಡಿ ನದಿಯಲ್ಲಿ ಪತ್ತೆ

Suddi Udaya
error: Content is protected !!