32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಮನೆಯ ಸಮೀಪದ ಕೆರೆಯಲ್ಲಿ ಪತ್ತೆ

ಕಳಿಯ: ದೇವಸ್ಥಾನಕ್ಕೆ ಇಂದು ಮುಂಜಾನೆ 4ಗಂಟೆಗೆ ಧನುಪೂಜೆಗೆ ಮನೆಯಿಂದ ಹೋಗಿದ್ದ ಬಾಲಕನೋರ್ವ ನಿಗೂಢವಾಗಿ ನಾಪತ್ತೆಯಾಗಿದ್ದು ಬಾಲಕನ ಮೃತದೇಹ ಮನೆಯ ಸಮೀಪದ ಕೆರೆಯಲ್ಲಿ ಪತ್ತೆಯಾಗಿದ್ದು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಘಟನೆ ವಿವರ: ಕುವೆಟ್ಟು ಗ್ರಾಮದ ಸಂಬೋಳ್ಯ ಬರಮೇಲು ಸುಬ್ರಹ್ಮಣ್ಯ ನಾಯಕ್ ಅವರ ಪುತ್ರ ಗೇರುಕಟ್ಟೆ ಪ್ರೌಢ ಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಸುಮಂತ್ (15ವ) ನಾಪತ್ತೆಯಾದ ಬಾಲಕನಾಗಿದ್ದಾನೆ. ನಾಳ ದೇವಸ್ಥಾನಕ್ಕೆ ಸುಮಂತ್ ಸೇರಿದಂತೆ ಮೂರು ಮಂದಿ ಬಾಲಕರು ಒಟ್ಟಿಗೆ ಹೋಗುತ್ತಿದ್ದು, ಇಂದು ಮುಂಜಾನೆ ಸುಮಂತ್ ಮನೆಯಿಂದ ಬರುವಾಗ ತಡವಾದ್ದರಿಂದ ಇಬ್ಬರು ಬಾಲಕರು ಆತನಿಗಾಗಿ ಕಾದು ದೇವಸ್ಥಾನಕ್ಕೆ ತೆರಳಿದ್ದರು. ಆದರೆ ಸುಮಂತ್ ಮನೆಯಿಂದ ಹೊರಟ್ಟಿದ್ದರು ದೇವಸ್ಥಾನಕ್ಕೆ ಬಂದಿರಲಿಲ್ಲ. ಇದರಿಂದ ಸಂಶಯಗೊಂಡ ಬಾಲಕರು ಆತನ ಮನೆಗೆ ಪೋನ್ ಮಾಡಿದಾಗ ಸುಮಂತ್‌ನ ಮನೆಯವರು ಆತ ದೇವಸ್ಥಾನಕ್ಕೆ ಮುಂಜಾನೆಯೇ ಹೋಗಿದ್ದಾನೆ ಎಂದು ತಿಳಿಸಿದ್ದರು. ಆದರೆ ಆತ ದೇವಸ್ಥಾನಕ್ಕೆ ಬಂದಿಲ್ಲ ಎಂದು ಬಾಲಕರು ಹೇಳಿದಾಗ ಮನೆಯವರು ಆತಂಕಗೊಂಡು ಸ್ಥಳೀಯವಾಗಿ ಮಾಹಿತಿ ನೀಡಿದರು. ಬಾಲಕ ಬರುವ ದಾರಿಯ ನಡುವೆ ಕೆರೆ ಬಳಿ ರಕ್ತದ ಕಲೆಗಳು ಸ್ಥಳೀಯರಿಗೆ ಕಂಡು ಬಂದಿದ್ದು, ಸ್ಥಳಕ್ಕೆ ಅರಣ್ಯ ಇಲಾಖೆಯವರು‌, ಪೊಲೀಸ್ ಇಲಾಖೆ , ಅಗ್ನಿ ಶಾಮಕ ದಳ ಸ್ಥಳೀಯರು ಸೇರಿ ತೀರಾ ಹುಡುಕಾಟ ನಡೆಸಿದ್ದು ಇದೀಗ ಬಾಲಕನ ಮೃತ ದೇಹ ಕೆರೆಯಲ್ಲಿ ಪತ್ತೆಯಾಗಿದೆ.

ಘಟನಾ ಸ್ಥಳಕ್ಕೆ ತಹಶೀಲ್ದಾರರು ಪೃಥ್ವಿ ಸಾನಿಕಂ, ಆರ್ ಐ ಪಾವಡಪ್ಪ, ಆಡಳಿತಾಧಿಕಾರಿ, ಬಿಒ ತಾರಕೇಸರಿ, ಶಾಲಾ ಶಿಕ್ಷಕರು, ಆಗಮಿಸಿದ್ದರು.

Related posts

ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ ಪ್ರಾಂಶುಪಾಲರು ಡಾ. ಪ್ರಶಾಂತ್ ಶೆಟ್ಟಿ ರವರಿಗೆ ‘ಆಯುಷ್ ಭೂಷಣ’ ಪುರಸ್ಕಾರ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಲ್ಲಿ ಆಟಿಡೊಂಜಿ ಕೂಟ ವಿಶೇಷ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

Suddi Udaya

ತೋಟತ್ತಾಡಿ ಎಸ್. ಎನ್. ಡಿ. ಪಿ. ವತಿಯಿಂದ ಸ್ವಾತಂತ್ರ ದಿನ ಆಚರಣೆ

Suddi Udaya

ನರಸಿಂಹಗಡದಲ್ಲಿ ಶ್ರೀ ಲಕ್ಷೀ ನರಸಿಂಹ ಉತ್ಸವ-ಧರ್ಮ ದೈವಗಳ ಪರ್ವಸೇವೆ

Suddi Udaya

ಶ್ರೀ ಶಿಶಿಲೇಶ್ವರ ದೇವಸ್ಥಾನದ ರಥಬೀದಿಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya
error: Content is protected !!