September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಮನೆಯ ಸಮೀಪದ ಕೆರೆಯಲ್ಲಿ ಪತ್ತೆ

ಕಳಿಯ: ದೇವಸ್ಥಾನಕ್ಕೆ ಇಂದು ಮುಂಜಾನೆ 4ಗಂಟೆಗೆ ಧನುಪೂಜೆಗೆ ಮನೆಯಿಂದ ಹೋಗಿದ್ದ ಬಾಲಕನೋರ್ವ ನಿಗೂಢವಾಗಿ ನಾಪತ್ತೆಯಾಗಿದ್ದು ಬಾಲಕನ ಮೃತದೇಹ ಮನೆಯ ಸಮೀಪದ ಕೆರೆಯಲ್ಲಿ ಪತ್ತೆಯಾಗಿದ್ದು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಘಟನೆ ವಿವರ: ಕುವೆಟ್ಟು ಗ್ರಾಮದ ಸಂಬೋಳ್ಯ ಬರಮೇಲು ಸುಬ್ರಹ್ಮಣ್ಯ ನಾಯಕ್ ಅವರ ಪುತ್ರ ಗೇರುಕಟ್ಟೆ ಪ್ರೌಢ ಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಸುಮಂತ್ (15ವ) ನಾಪತ್ತೆಯಾದ ಬಾಲಕನಾಗಿದ್ದಾನೆ. ನಾಳ ದೇವಸ್ಥಾನಕ್ಕೆ ಸುಮಂತ್ ಸೇರಿದಂತೆ ಮೂರು ಮಂದಿ ಬಾಲಕರು ಒಟ್ಟಿಗೆ ಹೋಗುತ್ತಿದ್ದು, ಇಂದು ಮುಂಜಾನೆ ಸುಮಂತ್ ಮನೆಯಿಂದ ಬರುವಾಗ ತಡವಾದ್ದರಿಂದ ಇಬ್ಬರು ಬಾಲಕರು ಆತನಿಗಾಗಿ ಕಾದು ದೇವಸ್ಥಾನಕ್ಕೆ ತೆರಳಿದ್ದರು. ಆದರೆ ಸುಮಂತ್ ಮನೆಯಿಂದ ಹೊರಟ್ಟಿದ್ದರು ದೇವಸ್ಥಾನಕ್ಕೆ ಬಂದಿರಲಿಲ್ಲ. ಇದರಿಂದ ಸಂಶಯಗೊಂಡ ಬಾಲಕರು ಆತನ ಮನೆಗೆ ಪೋನ್ ಮಾಡಿದಾಗ ಸುಮಂತ್‌ನ ಮನೆಯವರು ಆತ ದೇವಸ್ಥಾನಕ್ಕೆ ಮುಂಜಾನೆಯೇ ಹೋಗಿದ್ದಾನೆ ಎಂದು ತಿಳಿಸಿದ್ದರು. ಆದರೆ ಆತ ದೇವಸ್ಥಾನಕ್ಕೆ ಬಂದಿಲ್ಲ ಎಂದು ಬಾಲಕರು ಹೇಳಿದಾಗ ಮನೆಯವರು ಆತಂಕಗೊಂಡು ಸ್ಥಳೀಯವಾಗಿ ಮಾಹಿತಿ ನೀಡಿದರು. ಬಾಲಕ ಬರುವ ದಾರಿಯ ನಡುವೆ ಕೆರೆ ಬಳಿ ರಕ್ತದ ಕಲೆಗಳು ಸ್ಥಳೀಯರಿಗೆ ಕಂಡು ಬಂದಿದ್ದು, ಸ್ಥಳಕ್ಕೆ ಅರಣ್ಯ ಇಲಾಖೆಯವರು‌, ಪೊಲೀಸ್ ಇಲಾಖೆ , ಅಗ್ನಿ ಶಾಮಕ ದಳ ಸ್ಥಳೀಯರು ಸೇರಿ ತೀರಾ ಹುಡುಕಾಟ ನಡೆಸಿದ್ದು ಇದೀಗ ಬಾಲಕನ ಮೃತ ದೇಹ ಕೆರೆಯಲ್ಲಿ ಪತ್ತೆಯಾಗಿದೆ.

ಘಟನಾ ಸ್ಥಳಕ್ಕೆ ತಹಶೀಲ್ದಾರರು ಪೃಥ್ವಿ ಸಾನಿಕಂ, ಆರ್ ಐ ಪಾವಡಪ್ಪ, ಆಡಳಿತಾಧಿಕಾರಿ, ಬಿಒ ತಾರಕೇಸರಿ, ಶಾಲಾ ಶಿಕ್ಷಕರು, ಆಗಮಿಸಿದ್ದರು.

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್ ಸಹಯೋಗದೊಂದಿಗೆ ಕಬ್ ಬುಲ್ ಬುಲ್, ರೇಂಜರ್ ರೋವರ್, ಮಕ್ಕಳಿಗೆ ದೇಶ ಭಕ್ತಿ ಗೀತ ಗಾಯನ ಸ್ಪರ್ಧೆ

Suddi Udaya

ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಬ್ರಹ್ಮಕುಂಭಾಭಿಷೇಕ: ಸಾಯಿ ಕುಮಾರ್ ಶೆಟ್ಟಿ ನವಶಕ್ತಿ ಇವರಿಂದ ಕಾಯಾ೯ಲಯದ ಉದ್ಘಾಟನೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ವ್ಯಾಪಾರ ಮತ್ತು ವಾಣಿಜ್ಯ ಕ್ಷೇತ್ರದಲ್ಲಿ ಮಾಡಿದ ಗಣನೀಯ ಸೇವೆಯನ್ನು ಪರಿಗಣಿಸಿ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್ ಜನಾರ್ಧನರವರಿಗೆ ” ಕನ್ನಡ ರಾಜ್ಯೋತ್ಸವ ಪ್ರಶಸ್ತಿ”

Suddi Udaya

ಪದ್ಮುಂಜ ಸರಕಾರಿ ಪ್ರೌಢಶಾಲೆಗೆ ಶೇ.96.15 ಫಲಿತಾಂಶ

Suddi Udaya

ಕರಂಬಾರು ಗುತ್ತು ಸುಮಿತ್ರ ಹೆಗ್ಡೆಯವರ ಅಡಿಕೆ ತೋಟಕ್ಕೆ ಸಿಡಿಲು ಬಡಿದು ಹಾನಿ

Suddi Udaya
error: Content is protected !!