July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಾಳ ದೇವಸ್ಥಾನದ ಧನುಪೂಜೆಗೆಂದು ಮನೆಯಿಂದ ಹೊರಟ ಬಾಲಕ ಸುಮಂತ್ ನಿಗೂಢ ನಾಪತ್ತೆ: ತೋಟದ ಕೆರೆಯ ಬಳಿ ಕಂಡು ಬಂದ ರಕ್ತದ ಕಲೆಗಳು: ಮನೆಯವರಲ್ಲಿ ಹಾಗೂ ಗ್ರಾಮಸ್ಥರಲ್ಲಿ ಸೃಷ್ಟಿಯಾದ ಆತಂಕ

ಕಳಿಯ: ನಾಳ ದೇವಸ್ಥಾನಕ್ಕೆ ಇಂದು ಮುಂಜಾನೆ 4ಗಂಟೆಗೆ ಧನುಪೂಜೆಗೆ ಮನೆಯಿಂದ ಹೋಗಿದ್ದ ಬಾಲಕನೋರ್ವ ನಿಗೂಢವಾಗಿ ನಾಪತ್ತೆಯಾಗಿದ್ದು ಮನೆಯವರಲ್ಲಿ ಆತಂಕ ಸೃಷ್ಟಿಸಿದೆ. ಸ್ಥಳೀಯರು ಹಾಗೂ ಅರಣ್ಯ ಇಲಾಖೆಯವರು ಆತನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಕುವೆಟ್ಟು ಗ್ರಾಮದ ಸಂಬೋಳ್ಯ ಬರಮೇಲು ಸುಬ್ರಹ್ಮಣ್ಯ ನಾಯಕ್ ಅವರ ಪುತ್ರ ಗೇರುಕಟ್ಟೆ ಪ್ರೌಢ ಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಸುಮಂತ್ (15ವ) ನಾಪತ್ತೆಯಾದ ಬಾಲಕನಾಗಿದ್ದಾನೆ. ನಾಳ ದೇವಸ್ಥಾನಕ್ಕೆ ಸುಮಂತ್ ಸೇರಿದಂತೆ ಮೂರು ಮಂದಿ ಬಾಲಕರು ಒಟ್ಟಿಗೆ ಹೋಗುತ್ತಿದ್ದು, ಇಂದು ಮುಂಜಾನೆ ಸುಮಂತ್ ಮನೆಯಿಂದ ಬರುವಾಗ ತಡವಾದ್ದರಿಂದ ಇಬ್ಬರು ಬಾಲಕರು ಆತನಿಗಾಗಿ ಕಾದು ದೇವಸ್ಥಾನಕ್ಕೆ ತೆರಳಿದ್ದರು. ಆದರೆ ಸುಮಂತ್ ಮನೆಯಿಂದ ಹೊರಟ್ಟಿದ್ದರು ದೇವಸ್ಥಾನಕ್ಕೆ ಬಂದಿರಲಿಲ್ಲ. ಇದರಿಂದ ಸಂಶಯಗೊಂಡ ಬಾಲಕರು ಆತನ ಮನೆಗೆ ಪೋನ್ ಮಾಡಿದಾಗ ಸುಮಂತ್‌ನ ಮನೆಯವರು ಆತ ದೇವಸ್ಥಾನಕ್ಕೆ ಮುಂಜಾನೆಯೇ ಹೋಗಿದ್ದಾನೆ ಎಂದು ತಿಳಿಸಿದ್ದರು. ಆದರೆ ಆತ ದೇವಸ್ಥಾನಕ್ಕೆ ಬಂದಿಲ್ಲ ಎಂದು ಬಾಲಕರು ಹೇಳಿದಾಗ ಮನೆಯವರು ಆತಂಕಗೊಂಡು ಸ್ಥಳೀಯವಾಗಿ ಮಾಹಿತಿ ನೀಡಿದರು. ಬಾಲಕ ಬರುವ ದಾರಿಯ ನಡುವೆ ಕೆರೆ ಬಳಿ ರಕ್ತದ ಕಲೆಗಳು ಸ್ಥಳೀಯರಿಗೆ ಕಂಡು ಬಂದಿದ್ದು, ಸ್ಥಳಕ್ಕೆ ಅರಣ್ಯ ಇಲಾಖೆಯವರು‌, ಪೊಲೀಸ್ ಇಲಾಖೆ , ಅಗ್ನಿ ಶಾಮಕ ದಳ ಸ್ಥಳೀಯರು ಸೇರಿದ್ದು ಹುಡುಕಾಟ ನಡೆಸುತ್ತಿದ್ದಾರೆ. ಹಾಗೂ ಬೆರಳಚ್ಚು ತಜ್ಞರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಮಚ್ಚಿನ ಪರಿಸರದಲ್ಲಿ ಚಿರತೆ ಓಡಾಟ ಇರುವುದರಿಂದ ಬಾಲಕ ನಿಗೂಢವಾಗಿ ನಾಪತ್ತೆಯಾಗಿರುವುದು ಗ್ರಾಮಸ್ಥರಲ್ಲಿ ಹಾಗೂ ಮನೆಯವರಲ್ಲಿ ಆತಂಕ ಸೃಷ್ಟಿಯಾಗಿದೆ.

Related posts

ಮಾಲಾಡಿ: ಕಾರು ಮತ್ತು ಬೈಕ್ ನಡುವೆ ಅಪಘಾತ : ಬೈಕ್ ಸವಾರನಿಗೆ ಗಾಯ

Suddi Udaya

ಬೆಳ್ತಂಗಡಿ: ಕರಾವಳಿ ವಿಕಿಮೀಡಿಯನ್ಸ್ ಯೂಸರ್ ಗ್ರೂಪ್ ಮಂಗಳೂರು ,ವಾಣಿ ಪ.ಪೂ. ಕಾಲೇಜು ಬೆಳ್ತಂಗಡಿ ಸಿಐಎಸ್‌ಎ2ಕೆ ಬೆಂಗಳೂರು ಸಂಸ್ಥೆಗಳ ಸಹಯೋಗದಲ್ಲಿ ತುಳು ಭಾಷೆಯ ಮೊದಲ ಸಂಶೋಧನಾತ್ಮಕ ಸಾಕ್ಷ್ಯಚಿತ್ರ ಪುರ್ಸ ಕಟ್ಟುನ ಇನಿ-ಕೋಡೆ-ಎಲ್ಲೆ ಬಿಡುಗಡೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಕೆನರಾ ಬ್ಯಾಂಕಿನ ಡಿಜಿಎಮ್ , ಮಂಗಳೂರು ರೀಜಿನಲ್ ಮೆನೇಜರ್ ಹಾಗೂ ರುಡ್ ಸೆಟ್ ಅಧಿಕಾರಿಗಳು ಭೇಟಿ: ದೇವರಿಗೆ ರಂಗಪೂಜೆ ಸೇವೆ

Suddi Udaya

ಮುಕ್ಕ ಶ್ರೀನಿವಾಸ್ ಯೂನಿವರ್ಸಿಟಿ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯಲ್ಲಿ ‘ಟೆಕ್ ಯುವ – 25’

Suddi Udaya

ನಡ: ಪ್ರಗತಿಪರ ಕೃಷಿಕ ಫ್ರಾನ್ಸಿಸ್ ಮೊರಾಸ್ ಹೃದಯಾಘಾತದಿಂದ ನಿಧನ

Suddi Udaya

ಬಳಂಜ ಜ್ಯೋತಿ ಯುವತಿ ಮಂಡಲದ ಉದ್ಘಾಟನಾ ಸಮಾರಂಭ

Suddi Udaya
error: Content is protected !!