ಮಡಂತ್ಯಾರು : ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ ನೇತ್ರಾವತಿ ವಲಯ ಇದರ ವತಿಯಿಂದ ಶ್ರೀ ವಿಶ್ವಕರ್ಮ ಸಭಾಭವನ ಬಸವನಗುಡಿ ಮಡಂತ್ಯಾರು ಇಲ್ಲಿ ಉಚಿತ ಯೋಗ ಶಿಕ್ಷಣ ಶಿಬಿರವು ನಡೆಯುತ್ತಿದ್ದು, ಸಮಿತಿಯ ವತಿಯಿಂದ ಮಾತೃವಂದನ, ಮಾತೃಧ್ಯಾನ ಮತ್ತು ಮಾತೃ ಭೋಜನ ಕಾರ್ಯಕ್ರಮವು ಜ. 11 ರಂದು ಜರಗಿತು.
ಮುಖ್ಯ ಅತಿಥಿಯಾಗಿ ಪ್ರಾಂತ ಪ್ರಶಿಕ್ಷಣ ಪ್ರಮುಖರಾದ ಲಕ್ಷ್ಮೀನಾರಾಯಣ, ಪಾರೆಂಕಿಯ ನಿವೃತ್ತ ಅಂಗನವಾಡಿ ಶಿಕ್ಷಕಿ ಸುಶೀಲ ಮತ್ತು ಅಧ್ಯಕ್ಷರಾಗಿ ಬೆಳ್ತಂಗಡಿ ಶಾಖೆಯ ಶಿಕ್ಷಕಿ ಪುಷ್ಪ ಭಾಗವಹಿಸಿದರು.
ಕಾರ್ಯಕ್ರಮದಲ್ಲಿ ಶಿಕ್ಷಕರುಗಳಾದ ಗಣೇಶ್ , ಸುಕೇಶ್ ,ಸತೀಶ್ ಉಪಸ್ಥಿತರಿದ್ದರು. ಸ್ಥಳೀಯ ಶಾಖೆಗಳಾದ ಪುಂಜಾಲಕಟ್ಟೆ, ಬೆಳ್ತಂಗಡಿ, ಗುರುವಾಯನಕೆರೆ ಮತ್ತು ಕಳಿಯ ಶಾಖೆಯ ಯೋಗ ಬಂಧುಗಳು ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಅಮಿತಾ ನಿರೂಪಿಸಿ, ಮಮತಾ ಸ್ವಾಗತಿಸಿ, ಭವಾನಿ ವರದಿ ವಾಚಿಸಿ, ಯೋಗ ಬಂಧುಗಳು ತಮ್ಮ ಅನಿಸಿಕೆಯನ್ನು ಹಂಚಿಕೊಂಡು, ಭಾರತಿ ವಂದಿಸಿದರು.











