July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಮಡಂತ್ಯಾರಿನಲ್ಲಿ ಉಚಿತ ಯೋಗ ಶಿಕ್ಷಣ ಶಿಬಿರ

ಮಡಂತ್ಯಾರು : ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ ನೇತ್ರಾವತಿ ವಲಯ ಇದರ ವತಿಯಿಂದ ಶ್ರೀ ವಿಶ್ವಕರ್ಮ ಸಭಾಭವನ ಬಸವನಗುಡಿ ಮಡಂತ್ಯಾರು ಇಲ್ಲಿ ಉಚಿತ ಯೋಗ ಶಿಕ್ಷಣ ಶಿಬಿರವು ನಡೆಯುತ್ತಿದ್ದು, ಸಮಿತಿಯ ವತಿಯಿಂದ ಮಾತೃವಂದನ, ಮಾತೃಧ್ಯಾನ ಮತ್ತು ಮಾತೃ ಭೋಜನ ಕಾರ್ಯಕ್ರಮವು ಜ. 11 ರಂದು ಜರಗಿತು.

ಮುಖ್ಯ ಅತಿಥಿಯಾಗಿ ಪ್ರಾಂತ ಪ್ರಶಿಕ್ಷಣ ಪ್ರಮುಖರಾದ ಲಕ್ಷ್ಮೀನಾರಾಯಣ, ಪಾರೆಂಕಿಯ ನಿವೃತ್ತ ಅಂಗನವಾಡಿ ಶಿಕ್ಷಕಿ ಸುಶೀಲ ಮತ್ತು ಅಧ್ಯಕ್ಷರಾಗಿ ಬೆಳ್ತಂಗಡಿ ಶಾಖೆಯ ಶಿಕ್ಷಕಿ ಪುಷ್ಪ ಭಾಗವಹಿಸಿದರು.

ಕಾರ್ಯಕ್ರಮದಲ್ಲಿ ಶಿಕ್ಷಕರುಗಳಾದ ಗಣೇಶ್ , ಸುಕೇಶ್ ,ಸತೀಶ್ ಉಪಸ್ಥಿತರಿದ್ದರು. ಸ್ಥಳೀಯ ಶಾಖೆಗಳಾದ ಪುಂಜಾಲಕಟ್ಟೆ, ಬೆಳ್ತಂಗಡಿ, ಗುರುವಾಯನಕೆರೆ ಮತ್ತು ಕಳಿಯ ಶಾಖೆಯ ಯೋಗ ಬಂಧುಗಳು ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಅಮಿತಾ ನಿರೂಪಿಸಿ, ಮಮತಾ ಸ್ವಾಗತಿಸಿ, ಭವಾನಿ ವರದಿ ವಾಚಿಸಿ, ಯೋಗ ಬಂಧುಗಳು ತಮ್ಮ ಅನಿಸಿಕೆಯನ್ನು ಹಂಚಿಕೊಂಡು, ಭಾರತಿ ವಂದಿಸಿದರು.

Related posts

ತಣ್ಣೀರುಪಂತ : ಅಡಿಕೆ ಗೋದಾಮಿನ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು: ರೂ. 1.35ಲಕ್ಷ ಮೌಲ್ಯದ ಅಡಿಕೆ ಕಳ್ಳತನ

Suddi Udaya

ಮಲೆಬೆಟ್ಟು ಹಾ.ಉ.ಸಂ. ನಿರ್ದೇಶಕ ಪ್ರವೀಣ್ ಪೂಜಾರಿ ಬಿಜೆಪಿ ಸೇರ್ಪಡೆ

Suddi Udaya

ಕುವೆಟ್ಟು: ಶಕ್ತಿನಗರದ ಬಳಿ ಪಾದಾಚಾರಿಗೆ ಬೈಕ್ ಡಿಕ್ಕಿ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ಮಹಿಳಾ ಮೋರ್ಚಾ, ಜಿಲ್ಲಾ ಮಹಿಳಾ ಮೋರ್ಚಾದ ವತಿಯಿಂದ ನೆರಿಯ ಬಾಂಜಾರುಮಲೆಯ ಅರಣ್ಯವಾಸಿ ಜನರೊಂದಿಗೆ ಶಕ್ತಿವಂದನಾ ಕಾರ್ಯಕ್ರಮ

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ನಿರ್ದೇಶಕರಾಗಿ ಸಹಕಾರ ಭಾರತಿ ಅಭ್ಯರ್ಥಿ ಉಮೇಶ್.ಎಂ.ಕೆ ಅವಿರೋಧವಾಗಿ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಬದನಾಜೆ ಶಾಲೆಗೆ ದೇಣಿಗೆ

Suddi Udaya
error: Content is protected !!