September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿ ಶ್ರೀ ಸೋಮನಾಥೇಶ್ವರಿ ಜಾತ್ರಾ ಮಹೋತ್ಸವ, ಆಮಂತ್ರಣ ದಶಮಾನೋತ್ಸವ ಸಂಭ್ರಮ: ಉದ್ಯಮಿ ಮೋಹನ್ ಕುಮಾರ್‌ರವರಿಂದ ಅಮ್ಯೂಸ್‌ಮೆಂಟ್ ಉದ್ಘಾಟನೆ

ಅಳದಂಗಡಿ: ಸತ್ಯ ಮತ್ತು ಧರ್ಮದ ಪುಣ್ಯಕ್ಷೇತ್ರ ಅಳದಂಗಡಿಯ ಜಾತ್ರಾಗರ ಮಹೋತ್ಸವ ಮತ್ತು ಆಮಂತ್ರಣ ದಶಮಾನೋತ್ಸವ ಸಂಭ್ರಮ ಅತ್ಯಂತ ಯಶಸ್ವಿಯಾಗಿ ನಡೆಯಲಿ. ಸದಾ ನಮ್ಮ ಸಹಕಾರವಿದೆ ಎಂದು ಉಜಿರೆ ಲಕ್ಷ್ಮೀ ಇಂಡಸ್ಟಿçÃಸ್ ಕನಸಿನ ಮನೆ ಮಾಲಿಕ ಮೋಹನ್ ಕುಮಾರ್ ಹೇಳಿದರು.

ಅವರು ಜ 14 ರಂದು ಅಳದಂಗಡಿ ಶ್ರೀ ಸೋಮನಾಥೇಶ್ವರಿ ಜಾತ್ರಾ ಮಹೋತ್ಸವ, ಆಮಂತ್ರಣ ದಶಮಾನೋತ್ಸವ ಸಂಭ್ರಮದ ಅಮ್ಯೂಸ್ ಮೆಂಟ್ ಉದ್ಘಾಟಿಸಿ ಮಾತನಾಡಿದರು.


ಹಿಂದಿನ ಕಾಲದಲ್ಲಿ ನಮ್ಮ ಹಿರಿಯರು ಮಕ್ಕಳನ್ನು ಜಾತ್ರೆ, ದೇವಸ್ಥಾನದ ಮತ್ತು ಧಾರ್ಮಿಕ ಕೆಲಸ ಕಾರ್ಯಗಳಿಗೆ ಕಳುಹಿಸುತ್ತಿದ್ದರು. ಇಂದು ಎಲ್ಲವೂ ಮಾಯವಾಗಿದೆ. ಮಕ್ಕಳಿಗೆ ನಮ್ಮ ನೆಲದ ಮೌಲ್ಯಗಳನ್ನು ತಿಳಿಸುವ ಕೆಲಸವಾಗಬೇಕಿದೆ ಎಂದರು.

ಈ ಸಂದರ್ಭದಲ್ಲಿ ಅಳದಂಗಡಿ ಅರಮನೆಯ ಡಾ.ಪ್ರೊಸ್ಟಿಲ್ ಅಜಿಲ, ಬೆಳ್ತಂಗಡಿ ಲಯನ್ಸ್ ಕ್ಲಬ್‌ನ ನಿಕಟ ಪೂರ್ವಾಧ್ಯಕ್ಷ ದೇವದಾಸ್ ಶೆಟ್ಟಿ ಬದ್ಯಾರು, ಅಳದಂಗಡಿ ಸೊಸೈಟಿ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ, ಉಪಾಧ್ಯಕ್ಷ ಜನಾರ್ಧನ ಪೂಜಾರಿ, ಹಿರಿಯರಾದ ಸದಾನಂದ ಪೂಜಾರಿ ಉಂಗಿಲಬೈಲು, ಶಿರ್ಲಾಲು ಸೊಸೈಟಿ ಅಧ್ಯಕ್ಷ ಸುಧೀರ್ ಆರ್ ಸುವರ್ಣ, ಉದ್ಯಮಿ ನಿತ್ಯಾನಂದ ನಾವರ, ಪ್ರಮುಖರಾದ ಶೇಖರ್ ನಾವರ, ಚಂದ್ರಶೇಖರ ಅಳದಂಗಡಿ, ಧರ್ಣಪ್ಪ ಪೂಜಾರಿ, ಪ್ರಜ್ವಲ್ ಜೈನ್, ಸುಪ್ರಿತ್ ಜೈನ್, ಆನಂದ ಪೂಜಾರಿ, ಪ್ರಭಾಕರ ಪೂಜಾರಿ, ಸುಂದರ ಶೆಟ್ಟಿ ಸುಲ್ಕೇರಿ ಹಾಗೂ ಇತರರು ಉಪಸ್ಥಿತರಿದ್ದರು.
ಆಮಂತ್ರಣ ಪರಿವಾರದ ಸಂಚಾಲಕ ವಿಜಯ್ ಜೈನ್ ನಾವರ ಸ್ವಾಗತಿಸಿ, ವಂದಿಸಿದರು.

Related posts

ಗುರುವಾಯನಕೆರೆ ಶಾಲೆಯಲ್ಲಿ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ

Suddi Udaya

ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆದ್ದು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾದ ಲಾಯಿಲ ಚಂದ್ರಿಕಾ ರಿಗೆ ಶಾಸಕ ಹರೀಶ್ ಪೂಂಜರಿಂದ ಸನ್ಮಾನ

Suddi Udaya

ಉದ್ಯೋಗ ಖಾತರಿ ಯೋಜನೆಯಡಿ ಮಾನವ ದಿನಗಳನ್ನು ಸೃಜಿಸಿ ತಾಲೂಕಿನಲ್ಲಿ ಪ್ರಥಮ ಸ್ಥಾನ ಪಡೆದ ಬಂದಾರು ಗ್ರಾಮ ಪಂಚಾಯತ್

Suddi Udaya

ಗುರುವಾಯನಕೆರೆ ಮೆಡೆಕ್ಸ್ ಪಾಲಿಕ್ಲಿನಿಕ್ಸ್ ನಲ್ಲಿ ಖಾಸಗಿ ಬಸ್ ನೌಕರರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಗುರುವಾಯನಕೆರೆ ಶ್ರೀ ಕ್ಷೇ.ಧ.ಗ್ರಾ.ಯೋಜನೆಯಿಂದ ಸಹಾಯಧನ ಹಸ್ತಾಂತರ

Suddi Udaya
error: Content is protected !!