July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಕ್ಸೆಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಹುಟ್ಟೂರ ಸಮ್ಮಾನ

ಬೆಳ್ತಂಗಡಿ: ಎಕ್ಸೆಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ರವರಿಗೆ ಶೈಕ್ಷಣಿಕ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಗುರುತಿಸಿ ಶ್ರೀ ರಾಮಾಂಜನೇಯ ದೇವಸ್ಥಾನ ಆಂಜನೇಯ ಬೆಟ್ಟ ಕಾನರ್ಪ ಕಡಿರುದ್ಯಾವರದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

ಶಿಕ್ಷಣ ಕ್ಷೇತ್ರದಲ್ಲಿ, ವಿಶೇಷವಾಗಿ ಬೆಳ್ತಂಗಡಿ ಪ್ರದೇಶದಲ್ಲಿ, ಎಕ್ಸೆಲ್ ಪದವಿ ಪೂರ್ವ ಕಾಲೇಜು ಸ್ಥಾಪಿಸಿ, ಗ್ರಾಮೀಣ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದ್ದು ಬಡತನದಲ್ಲಿ ಬೆಳೆದು ಬಂದ ಇವರು, ಶಿಕ್ಷಣದ ಮೂಲಕ ಕ್ರಾಂತಿ ಮಾಡುವ ಕನಸು ಕಂಡಿದ್ದು, ಇವರ ಸೇವೆಯನ್ನು ಗುರುತಿಸಿ ವಿಜಯರತ್ನ ಪ್ರಶಸ್ತಿಯನ್ನು ಪಡೆದಿದ್ದಾರೆ.

ಈ ಸಂದರ್ಭದಲ್ಲಿ ಶ್ರೀಧರ ಬಿಡೆ, ಪಿತಾಂಬರ ಹೇರಾಜೆ, ಬಾಬು ಪೂಜಾರಿ ಕೂಳೂರು, ಫಿಲೋಮಿನಾ ಸಿ.ಜೆ, ವಿಶ್ವನಾಥ ಶೆಟ್ಟಿ ಮುಂಡಾಜೆ, ಬಿ.ಕೆ ಗೋವಿಂದ ದುಂಬೆಟ್ಟು, ರಾಜೇಶ್ ಗೌಡ ಹೇಡ್ಯ, ಕಿಶೋರ್ ಕುಮಾರ್, ಕಿರಣ್ ಕುಮಾರ್ ಉಪಸ್ಥಿತರಿದ್ದರು.

Related posts

ನೆರಿಯ ಸಂತ ತೋಮಸ್ ಅನುದಾನಿತ ಪ್ರೌಢಶಾಲೆಯ ಕಚೇರಿ ಸಹಾಯಕ ಧರ್ಣಪ್ಪ ಪೂಜಾರಿ ಸೇವಾ ನಿವೃತ್ತಿ: ಬಿಳ್ಕೋಡುಗೆ ಸಮಾರಂಭ

Suddi Udaya

ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ

Suddi Udaya

ಎಸ್.ಎಸ್.ಎಲ್.ಸಿ ವಾರ್ಷಿಕ ಫಲಿತಾಂಶ: ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ. 97

Suddi Udaya

ಮುಂಡೂರು ಸಾರ್ವಜನಿಕ ಶ್ರೀ ಗಣೇಶೋತ್ಸವ : ಧಾರ್ಮಿಕ ಸಭೆ ಮತ್ತು ಭಜನಾ ಕಾರ್ಯಕ್ರಮ

Suddi Udaya

ಉಜಿರೆ: ಸ್ಕೂಟರ್ ನಿಯಂತ್ರಣ ತಪ್ಪಿ ಬಿದ್ದು ಗಾಯಗೊಂಡಿದ್ದ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಜೀವ ವಿಮೆ ಕಂಪನಿ ಎಸ್ ಬಿಐ ಲೈಫ್ ನ 1095ನೇ ಶಾಖೆ ಮಾರ್ಚ್ 2ನೇ ವಾರ ಶುಭಾರಂಭ

Suddi Udaya
error: Content is protected !!