July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಚಾರ್ಮಾಡಿ ಗ್ರಾಮ ಪಂಚಾಯತ್‌ನಲ್ಲಿ ಮಕ್ಕಳ ಗ್ರಾಮ ಸಭೆ

ಚಾರ್ಮಾಡಿ: ಚಾರ್ಮಾಡಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಸರಕಾರಿ ಪ್ರೌಢಶಾಲೆ ಕಕ್ಕಿಂಜೆಯಲ್ಲಿ ಜ.14 ರಂದು ಚಾರ್ಮಾಡಿ ಗ್ರಾಮ ಪಂಚಾಯತಿ ವತಿಯಿಂದ ಮಕ್ಕಳ ಗ್ರಾಮ ಸಭೆ ಯಶಸ್ವಿಯಾಗಿ ನಡೆಯಿತು. ಗ್ರಾಮ ಪಂಚಾಯತ್ ಅಧ್ಯಕ್ಷೆ ಶಾರದ ಅವರ ಮಾರ್ಗದರ್ಶನದಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಅವರು ಸಭೆಯನ್ನು ನಿರ್ವಹಿಸಿದರು. ಪಂಚಾಯತ್ ಸದಸ್ಯ ಅಬ್ದುಲ್ ರಹಿಮಾನ್ ಉಪಸ್ಥಿತರಿದ್ದರು.

ಚಾರ್ಮಾಡಿ, ಅಣಿಯೂರು, ಕಕ್ಕಿಂಜೆ, ತೋಟತ್ತಾಡಿ, ಪೆರಿಯಡ್ಕ ಹಾಗೂ ಕಕ್ಕಿಂಜೆ ಸರಕಾರಿ ಪ್ರೌಢಶಾಲೆಗಳ ನೂರಕ್ಕೂ ಅಧಿಕ ವಿದ್ಯಾರ್ಥಿಗಳು ಸಭೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದರು. ಮಕ್ಕಳ ಹಕ್ಕುಗಳು ಹಾಗೂ ಪೋಕ್ಸೋ ಕಾಯಿದೆ ಕುರಿತು ಮಂಗಳೂರಿನ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಯಶೋದ ಅವರು ಮಾಹಿತಿ ನೀಡಿದರು. ಮಕ್ಕಳ ಸುರಕ್ಷತೆ, ಮಕ್ಕಳ ಹಕ್ಕುಗಳ ಕ್ಲಬ್, ಪಂಚಾಯತಿಯಿಂದ ಮಕ್ಕಳಿಗೆ ದೊರೆಯುವ ಸವಲತ್ತುಗಳು ಕುರಿತು ವಿವರಿಸಲಾಯಿತು. ವಿವಿಧ ಶಾಲೆಗಳ ವಿದ್ಯಾರ್ಥಿಗಳ ಅಹವಾಲುಗಳನ್ನು ಚರ್ಚಿಸಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಂದ ಸೂಕ್ತ ಸ್ಪಂದನೆ ದೊರಕುವಂತೆ ಸಂಪನ್ಮೂಲ ವ್ಯಕ್ತಿ ವಿನೋದ್ ನೆರವೇರಿಸಿದರು.

ಸಭೆಯಲ್ಲಿ ಮುಖ್ಯವಾಗಿ ಶಾಲಾ ಕಟ್ಟಡಗಳು ಹಾಗೂ ಮೈದಾನದೊಳಗಿನ ಅನಧಿಕೃತ ಅತಿಕ್ರಮಣ, ಕಂಪೌಂಡ್ ನಿರ್ಮಾಣ, ಶಾಲಾ ಸೌಂದರೀಕರಣ, ಬೀದಿನಾಯಿಗಳಿಂದ ರಕ್ಷಣೆ, ಮನೆಗಳಲ್ಲಿ ವಿದ್ಯುತ್ ಸೌಲಭ್ಯ ಇಲ್ಲದೆ ಓದಲು ಎದುರಾಗುವ ಸಮಸ್ಯೆ, ಶಾಲೆಗಳಿಗೆ ಕಸ ವಿಲೇವಾರಿ ವಾಹನ ಬಾರದಿರುವುದು, ಬ್ಯಾಂಡ್ ಸೆಟ್ ಹಾಗೂ ಸ್ಕೌಟ್ಸ್–ಗೈಡ್ಸ್ ಸಮವಸ್ತ್ರ ಒದಗಿಸುವುದು, ಶೌಚಾಲಯಕ್ಕೆ ಇನ್ಸಿನರೇಟರ್ ವ್ಯವಸ್ಥೆ, ರಸ್ತೆ ರಿಪೇರಿ, ಶಾಲೆಗೆ ಗೈರು ಹಾಜರಾಗುತ್ತಿರುವ ಮಕ್ಕಳ ಸಮಸ್ಯೆ, ಶಾಲಾ ಸಮೀಪದ ಅಂಗಡಿಗಳಲ್ಲಿ ಮಾದಕ ವಸ್ತು ಮಾರಾಟ ನಿಷೇಧಿಸುವ ಕುರಿತು ವಿದ್ಯಾರ್ಥಿಗಳು ತಮ್ಮ ದೂರುಗಳನ್ನು ಸಲ್ಲಿಸಿದರು.

ಕೆಲವು ಸಮಸ್ಯೆಗಳಿಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ತಕ್ಷಣ ಸ್ಪಂದಿಸಿದ್ದು, ಉಳಿದ ಬೇಡಿಕೆಗಳಿಗೆ ಹಂತಹಂತವಾಗಿ ಪರಿಹಾರ ಒದಗಿಸುವುದಾಗಿ ಭರವಸೆ ನೀಡಿದರು. ಸಭೆಯಲ್ಲಿ ವಿವಿಧ ಅಂಗನವಾಡಿ ಕೇಂದ್ರಗಳ ಕಾರ್ಯಕರ್ತೆಯರು ಭಾಗವಹಿಸಿದ್ದರು.

ಸರಕಾರಿ ಪ್ರೌಢಶಾಲೆ ಕಕ್ಕಿಂಜೆಯ ಶಾಲಾ ನಾಯಕಿ ಕುಮಾರಿ ನಿಕಿತ ಅಧ್ಯಕ್ಷೀಯ ಭಾಷಣ ಮಾಡಿದರು. ಸರಕಾರಿ ಪ್ರೌಢಶಾಲೆ ಕಕ್ಕಿಂಜೆಯ ಮುಖ್ಯ ಶಿಕ್ಷಕರಾದ ಶಂಭು ಶಂಕರ್ ವಂದಿಸಿದರು. ಸಭೆಯ ಯಶಸ್ಸಿಗೆ ಗ್ರಂಥ ಪಾಲಕಿ ಶ್ರೀಮತಿ ಜ್ಯೋತಿ, ಲೆಕ್ಕ ಪರಿಶೋಧಕರಾದ ಸಂಜೀವ, ಗ್ರಾಮ ಪಂಚಾಯತಿ ಸಿಬ್ಬಂದಿ ವರ್ಗ ಹಾಗೂ ಶಿಕ್ಷಕರು ಸಹಕರಿಸಿದರು.

Related posts

ಮುಂಡಾಜೆ ಬಂಟರ ಗ್ರಾಮ ಸಮಿತಿಯಿಂದ ಆಟಿದ ಕೂಟ

Suddi Udaya

ಧರ್ಮಸ್ಥಳ: ನೂತನವಾಗಿ ಪ್ರಾರಂಭಗೊಂಡ ಶ್ರೀ ಶಿವಶಕ್ತಿ ಅಯ್ಯಂಗಾರ್ ಬೇಕರಿಗೆ ಬಿಜೆಪಿ ರಾಜ್ಯ ಕಾರ್ಯದರ್ಶಿ ಬ್ರಿಜೇಶ್ ಚೌಟ ಭೇಟಿ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಚಿಂತನಾ ದಿನಾಚರಣೆ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಎಳೆನೀರು ತುಂಬಿದ ಪಿಕಪ್ ವಾಹನ ಪಲ್ಟಿ

Suddi Udaya

ಬೆಳಾಲು: ಅಕ್ರಮ ಕೋಳಿ ಅಂಕದ ಮೇಲೆ ಧರ್ಮಸ್ಥಳ ಪೊಲೀಸರ ದಾಳಿ

Suddi Udaya
error: Content is protected !!