July 23, 2026
ಅಪರಾಧ ಸುದ್ದಿ

ಚೂಪಾದ ಆಯುಧಗಳಿಂದ ಆಗಿರುವ ಗಾಯ ಅಲ್ಲ ಓಡಿಲ್ನಾಳ ಸಂಬೋಳ್ಯದ ಸುಮಂತ್‌ ಶವದ ಪರೀಕ್ಷಾ ವರದಿ: ಅಸಹಜ ಸಾವು ಪ್ರಕರಣವನ್ನು ಕೊಲೆ ಪ್ರಕರಣವಾಗಿ ಪರಿವರ್ತಿಸಿ ತನಿಖೆ ನಡೆಸಲಾಗುತ್ತಿದೆ: ದ.ಕ ಎಸ್.ಪಿ

ಬೆಳ್ತಂಗಡಿ: ಜ. 14 ರಂದು ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಓಡಿಲ್ನಾಳ ಗ್ರಾಮದ ಸಂಬೋಳ್ಯದ ಪ್ರಕರಣದಲ್ಲಿ ಮೃತ ಸುಮಂತ್‌ (15)ರವರ ಶವಪರೀಕ್ಷೆಯ ನಂತರ ಬಂದ ಪ್ರಾಥಮಿಕ ವರದಿಯ ಪ್ರಕಾರ, ಹುಡುಗನು ಕೆರೆಯಲ್ಲಿ ಮುಳುಗುವ ಸಮಯದಲ್ಲಿ ಜೀವಂತನಾಗಿದ್ದನು ಮತ್ತು ತಕ್ಷಣದ ಸಾವಿನ ಕಾರಣ ಮುಳುಗು ಸಾವಾಗಿರುತ್ತದೆ ಎಂದು ಬಂದಿದೆ ಎಂದು ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹೇಳಿಕೆ ನೀಡಿದ್ದಾರೆ.

ಪ್ರಾಥಮಿಕ ವರದಿ ತಲೆಯ ಮೇಲಿನ ಗಾಯಗಳು ಮಂದ ಬಲದ ಗಾಯ (Blunt injury) ಉಂಟಾಗಿವೆ ಮತ್ತು ಯಾವುದೇ ಚೂಪಾದ (Sharp) ಆಯುಧಗಳಿಂದ ಆಗಿರುವ ಗಾಯ ಅಲ್ಲ ಎಂದು ತಿಳಿದುಬಂದಿರುತ್ತದೆ. ಆದರೆ ತಲೆಯ ಮೇಲಿನ ಗಾಯಗಳ ಬಗ್ಗೆ ಸಮರ್ಪಕವಾದ ವಿವರಣೆ ದೊರಕಿಲ್ಲ. ಆದ್ದರಿಂದ ಸಮಗ್ರ ಹಾಗೂ ಸೂಕ್ಷ್ಮ ತನಿಖೆ ನಡೆಸುವ ಉದ್ದೇಶದಿಂದ ಈ ಅಸಹಜ ಸಾವು ಪ್ರಕರಣವನ್ನು ಕೊಲೆ ಪ್ರಕರಣವಾಗಿ ಪರಿವರ್ತಿಸಿ ತನಿಖೆ ನಡೆಸಲಾಗುತ್ತಿದೆ . ಈ ಪ್ರಕರಣದ ಸಮಗ್ರ ತನಿಖೆಗಾಗಿ ಬೆಳ್ತಂಗಡಿ ಡಿಎಸ್‌ಪಿ ರವರ ನೇತೃತ್ವದಲ್ಲಿ ನಾಲ್ಕು ತಂಡಗಳನ್ನು ರಚಿಸಲಾಗಿದೆ.ಎಂದು ತಿಳಿಸಿದ್ದಾರೆ.

Related posts

ಧರ್ಮಸ್ಥಳ ಆನೆ ಮಾವುತ ನಾರಾಯಣ ಮತ್ತು ಯಮುನಾ ಕೊಲೆ ಪ್ರಕರಣ ಎಸ್‌ಐಟಿ ಗೆ ದೂರು ನೀಡಲು ಬಂದ ಆನೆ ಮಾವುತನ ಮಕ್ಕಳು

Suddi Udaya

ಮದ್ದಡ್ಕ: ಅಬಕಾರಿ ಅಧಿಕಾರಿಗಳ ದಾಳಿ: 250 ಗ್ರಾಂ ಗಾಂಜಾ ಹಾಗೂ 2 ಮೊಬೈಲ್‌ಗಳು ವಶ: ಆರೋಪಿ ಪರಾರಿ

Suddi Udaya

ತುಮಕೂರು ಬೆಳ್ತಂಗಡಿಯ ಮೂವರ ಕೊಲೆ ಪ್ರಕರಣ; 7 ದಿನದ ಬಳಿಕ ಮನೆ ತಲುಪಿದ ಮೂವರ ಮೃತದೇಹ

Suddi Udaya

ವಾಟ್ಸಾಪ್ ಸ್ಟೇಟಸ್ ಹಾಕಿದ ವಿಚಾರದಲ್ಲಿ ಜಾತಿ ನಿಂದನೆ, ಹಲ್ಲೆ ಆರೋಪ: ಆರೋಪಿಗಳಿಬ್ಬರಿಗೆ ನ್ಯಾಯಾಂಗ ಬಂಧನ

Suddi Udaya

ಬೆಳ್ತಂಗಡಿ: ಪತ್ನಿಯನ್ನು ಕೊಂದು ಆತ್ಮಹತ್ಯೆ ಎಂದು ಬಿಂಬಿಸಿದ ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್

Suddi Udaya

ತೋಟಾತ್ತಾಡಿ:ಜುಗಾರಿ ಅಡ್ಡೆಗೆ ಪೊಲೀಸರ ದಾಳಿ

Suddi Udaya
error: Content is protected !!