September 6, 2026
ಅಪರಾಧ ಸುದ್ದಿ

ಚೂಪಾದ ಆಯುಧಗಳಿಂದ ಆಗಿರುವ ಗಾಯ ಅಲ್ಲ ಓಡಿಲ್ನಾಳ ಸಂಬೋಳ್ಯದ ಸುಮಂತ್‌ ಶವದ ಪರೀಕ್ಷಾ ವರದಿ: ಅಸಹಜ ಸಾವು ಪ್ರಕರಣವನ್ನು ಕೊಲೆ ಪ್ರಕರಣವಾಗಿ ಪರಿವರ್ತಿಸಿ ತನಿಖೆ ನಡೆಸಲಾಗುತ್ತಿದೆ: ದ.ಕ ಎಸ್.ಪಿ

ಬೆಳ್ತಂಗಡಿ: ಜ. 14 ರಂದು ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಓಡಿಲ್ನಾಳ ಗ್ರಾಮದ ಸಂಬೋಳ್ಯದ ಪ್ರಕರಣದಲ್ಲಿ ಮೃತ ಸುಮಂತ್‌ (15)ರವರ ಶವಪರೀಕ್ಷೆಯ ನಂತರ ಬಂದ ಪ್ರಾಥಮಿಕ ವರದಿಯ ಪ್ರಕಾರ, ಹುಡುಗನು ಕೆರೆಯಲ್ಲಿ ಮುಳುಗುವ ಸಮಯದಲ್ಲಿ ಜೀವಂತನಾಗಿದ್ದನು ಮತ್ತು ತಕ್ಷಣದ ಸಾವಿನ ಕಾರಣ ಮುಳುಗು ಸಾವಾಗಿರುತ್ತದೆ ಎಂದು ಬಂದಿದೆ ಎಂದು ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹೇಳಿಕೆ ನೀಡಿದ್ದಾರೆ.

ಪ್ರಾಥಮಿಕ ವರದಿ ತಲೆಯ ಮೇಲಿನ ಗಾಯಗಳು ಮಂದ ಬಲದ ಗಾಯ (Blunt injury) ಉಂಟಾಗಿವೆ ಮತ್ತು ಯಾವುದೇ ಚೂಪಾದ (Sharp) ಆಯುಧಗಳಿಂದ ಆಗಿರುವ ಗಾಯ ಅಲ್ಲ ಎಂದು ತಿಳಿದುಬಂದಿರುತ್ತದೆ. ಆದರೆ ತಲೆಯ ಮೇಲಿನ ಗಾಯಗಳ ಬಗ್ಗೆ ಸಮರ್ಪಕವಾದ ವಿವರಣೆ ದೊರಕಿಲ್ಲ. ಆದ್ದರಿಂದ ಸಮಗ್ರ ಹಾಗೂ ಸೂಕ್ಷ್ಮ ತನಿಖೆ ನಡೆಸುವ ಉದ್ದೇಶದಿಂದ ಈ ಅಸಹಜ ಸಾವು ಪ್ರಕರಣವನ್ನು ಕೊಲೆ ಪ್ರಕರಣವಾಗಿ ಪರಿವರ್ತಿಸಿ ತನಿಖೆ ನಡೆಸಲಾಗುತ್ತಿದೆ . ಈ ಪ್ರಕರಣದ ಸಮಗ್ರ ತನಿಖೆಗಾಗಿ ಬೆಳ್ತಂಗಡಿ ಡಿಎಸ್‌ಪಿ ರವರ ನೇತೃತ್ವದಲ್ಲಿ ನಾಲ್ಕು ತಂಡಗಳನ್ನು ರಚಿಸಲಾಗಿದೆ.ಎಂದು ತಿಳಿಸಿದ್ದಾರೆ.

Related posts

ಪುನೀತ್ ಕೆರೆಹಳ್ಳಿಯನ್ನು ಬಿಡುಗಡೆ ಮಾಡಿದ ಬೆಳ್ತಂಗಡಿ ಪೊಲೀಸರು

Suddi Udaya

ತ್ಯಾಜ್ಯಗಳ ಡಂಪಿಂಗ್ ಯಾರ್ಡ್ ಆಗುತ್ತಿರುವ ಕೈಕಂಬ ಸೇತುವೆ…!!!

Suddi Udaya

ಪುಂಜಾಲಕಟ್ಟೆ : ನಯನಾಡು ಸಮೀಪ ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಪಿಕಫ್ ಚಾಲಕ ಸತೀಶ್ ಕುಲಾಲ್ ನೇಣು ಬಿಗಿದು ಆತ್ಮಹತ್ಯೆ

Suddi Udaya

ಹಣವನ್ನು ದ್ವಿಗುಣ ಮಾಡಿಕೊಡುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿಗಳು- ಮಹಿಳೆಗೆ ರೂ. 20. 29 ಲಕ್ಷಕ್ಕೂ ಮಿಕ್ಕಿ ವಂಚನೆ

Suddi Udaya

ನಾರಾವಿ ಅರಸು ಕಟ್ಟೆಯಲ್ಲಿ ಗೂಡ್ಸ್ ಟೆಂಪೋ ಗೆ ಬೈಕ್ ಡಿಕ್ಕಿ : ಬೈಕ್ ಸವಾರ ಜೋಕಿ ರೋಡ್ರಿಗಸ್‌ ಸ್ಥಳದಲ್ಲೇ ಸಾವು

Suddi Udaya
error: Content is protected !!