25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ತುಳು ಹಾಗೂ ಜವಾರಿ ಭಾಷೆಯಲ್ಲಿ ಹಾಲಿವುಡ್‌ ಸಿನಿಮಾಗಳ ವೈಭವ:ಕನ್ನಡಿಗರ ‘ಟಾಕೀಸ್’ ಆ್ಯಪ್ ಓಟಿಟಿಯಿಂದ ಹೊಸ ಇತಿಹಾಸ

ಡಿಜಿಟಲ್‌ ಮನೋರಂಜನೆಯ ಹೊಸ ಅಧ್ಯಾಯವನ್ನು ಟಾಕೀಸ್ ಆ್ಯಪ್ ಓಟಿಟಿ ಬರೆದಿದೆ. ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಹಾಲಿವುಡ್‌ ಸಿನಿಮಾಗಳು ತುಳು ಭಾಷೆಯಲ್ಲಿ ಡಬ್‌ ಆಗಿ ಪ್ರೇಕ್ಷಕರಿಗೆ ಲಭ್ಯವಾಗುತ್ತಿದ್ದು, ಜೊತೆಗೆ ಉತ್ತರ ಕರ್ನಾಟಕದ ಜವಾರಿ ಭಾಷೆಯಲ್ಲೂ ಹಾಲಿವುಡ್‌ ಚಿತ್ರಗಳನ್ನು ಪ್ರಸಾರ ಮಾಡುವ ಮಹತ್ವದ ಪ್ರಯತ್ನ ಪ್ರಾರಂಭವಾಗಿದೆ. ಪ್ರಾದೇಶಿಕ ಭಾಷೆಗಳ ಗೌರವ ಮತ್ತು ವ್ಯಾಪ್ತಿಯನ್ನು ವಿಸ್ತರಿಸುವ ಈ ಕಾರ್ಯವನ್ನು ಟಾಕೀಸ್ ಆ್ಯಪ್ – ಸೋನಿ ಪಿಕ್ಚರ್ಸ್ ಫಿಲ್ಮಸ್ ಅವರ ಸಹಯೋಗದಲ್ಲಿ ಯಶಸ್ವಿಯಾಗಿ ಮುನ್ನಡೆಸುತ್ತಿದೆ. ತಮ್ಮ ಪ್ರಾದೇಶಿಕ ಭಾಷೆಯಲ್ಲಿ ಸಿನಿಮಾ ನೋಡಿ ಆನಂದಿಸಬೇಕೆನ್ನುವ ವೀಕ್ಷಕರಿಗೆ ಇದೊಂದು ಸಿಹಿ‌ ಸುದ್ದಿ ಎಂಬುದು ಸಂಸ್ಥೆಯ ಅನಿಸಿಕೆ.

ಇದು ಭಾರತದಲ್ಲಿ ಆಮೇಜಾನ್ ಪ್ರೈಮ್, ನೆಟ್ ಫ್ಲಿಕ್ಸ್, ಜೀಯೋ ಹಾಟ್ ಸ್ಟಾರ್ ನಂತರ ನಾಲ್ಕನೇ ಒಟಿಟಿಯಾಗಿ ಹಾಲಿವುಡ್‌ ಚಿತ್ರಗಳನ್ನು ಸ್ಥಳೀಯ ಭಾಷೆಯಲ್ಲಿ ಪ್ರದರ್ಶಿಸುವ ವೇದಿಕೆಯಾಗಿ ಟಾಕೀಸ್ ಆ್ಯಪ್ ಹೆಸರಾಗಿದೆ. ವಿಶೇಷವೇನೆಂದರೆ ಪ್ರಥಮ ಬಾರಿಗೆ ತುಳು ಮತ್ತು ಜವಾರಿ ಭಾಷೆಗಳಲ್ಲಿ ಪ್ರಸಾರವಾಗುತ್ತಿದೆ. ಈ ಪ್ರಯತ್ನಕ್ಕೆ ತುಳುವಿನಲ್ಲಿ ಅಸ್ತ್ರ ಪ್ರೋಡಕ್ಷನ್ ಹಾಗೂ ಸಿಟಡೆಲ್ ಡೆವಲಪರ್ಸ್ ಪ್ರಾಯೋಜಕರಾಗಿ ಜೊತೆಯಾದರೆ, ಜವಾರಿ ಭಾಷೆಗೆ ಮಂಗಳಮ್ ಪೈಪ್ಸ್ ಜೊತೆಯಾಗಿದ್ದಾರೆ. ಸ್ಪೈಡರ್ ಮ್ಯಾನ್, ಗಾಡ್ಜಿಲ್ಲ, ಕರಾಟೆ ಕಿಡ್, ಅನಕೊಂಡ, ಮೆನ್ ಇನ್ ಬ್ಲಾಕ್ ಸೇರಿದಂತೆ ಹಲವು ಸಿನಿಮಾಗಳು ದೇಸಿ ಭಾಷೆಯಲ್ಲಿ ಲಭ್ಯವಾಗಲಿದೆ.

ಹ್ಯಾಟ್ರಿಕ್ ಹೀರೋ ಡಾ. ಶಿವರಾಜ್ ಕುಮಾರ್ ಅವರಿಂದ ಲೋಕಾರ್ಪಣೆಗೊಂಡ ಟಾಕೀಸ್ ಆ್ಯಪ್ ಕರಾವಳಿಯ, ಕನ್ನಡದ ಮತ್ತು ಇತರೆ ಪ್ರಾದೇಶಿಕ ಕಲಾವಿದರಿಗೊಂದು ದೊಡ್ಡ ಡಿಜಿಟಲ್ ವೇದಿಕೆಯಾಗಿ ಅವಕಾಶ ಕಲ್ಪಿಸಿದೆ. ಸಿನಿಮಾಗಳು, ವೆಬ್‌ ಸೀರಿಸ್‌, ಕಿರುಚಿತ್ರಗಳು, ಕಾರ್ಟೂನ್ ಶೋಗಳು, ಕಾಮಿಡಿ, ಡ್ರಾಮಾ ರಿಯಾಲಿಟಿ ಶೋಗಳು ಮತ್ತು ಟಾಕೀಸ್ ಕಿಚನ್ ಮುಂತಾದ ವಿಭಿನ್ನ ಕಾರ್ಯಕ್ರಮಗಳ ಜತೆಗೆ ಈಗ ವಿಶ್ವ ಸಿನಿಮಾವನ್ನು ‘ಸ್ವಂತ ಭಾಷೆಯಲ್ಲಿ’ ನೋಡಬಹುದಾದ ವೇದಿಕೆ ಒದಗಿಸಿದೆ ಟಾಕೀಸ್ ಆ್ಯಪ್.ಪ್ರಾದೇಶಿಕ ಭಾಷೆಗಳ ವೈಭವವನ್ನು ಜಾಗತಿಕ ತಾಣಕ್ಕೆ ತಲುಪಿಸುವಲ್ಲಿ ಇದು ಕೇವಲ ತಂತ್ರಜ್ಞಾನ ಪ್ರಗತಿ ಅಲ್ಲ, ಸಂಸ್ಕೃತಿ ಸಂರಕ್ಷಣೆಯ ಮೌಲ್ಯಯುತ ಹೆಜ್ಜೆ. “ಭಾಷೆ ಬದುಕಿದಾಗ ಸಂಸ್ಕೃತಿ ಬಾಳುತ್ತದೆ” ಎಂಬ ನಂಬಿಕೆಗೆ ಟಾಕೀಸ್ ಆ್ಯಪ್ ಪ್ರಾಯೋಗಿಕ ಸಾಕ್ಷಿಯಾಗಿದೆ.

Related posts

ಬೋಂಟ್ರೊಟ್ಟುಗುತ್ತು, ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ಸೇವಾ ಟ್ರಸ್ಟ್ ಮತ್ತು ಕಲಶಾಭಿಷೇಕ ಸಮಿತಿ ಮಹಾ ಚಂಡಿಕಾಯಾಗ ಮತ್ತು ದೈವಗಳ ಪುನರ್ ಪ್ರತಿಷ್ಠ ಕಲಶಾಭಿಷೇಕ ಮತ್ತು ನೇಮೋತ್ಸವ ಅಂಗವಾಗಿ ಕ್ಷೇತ್ರದಲ್ಲಿ ಚಪ್ಪರ ಮುಹೂರ್ತ

Suddi Udaya

ಕಕ್ಕಿಂಜೆ ಇಷ್ಟ ದೇವತಾ ಬೆಟ್ಟ ಶ್ರೀ ಇಷ್ಟ ದೇವತಾ ಇದರ ಪ್ರತಿಷ್ಠಾಪನೆಯ ವಿಜ್ಞಾಪನ ಪತ್ರ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ಮಕ್ಕಳ ಆರೋಗ್ಯ ತಪಾಸಣೆ

Suddi Udaya

ಪಾಸ್ಕ ಹಬ್ಬದ ಅಂಗವಾಗಿ ಹನ್ನೆರಡು ಜನ ಶಿಷ್ಯರ ಕಾಲುಗಳನ್ನು ತೊಳೆದ ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಲಾರೆನ್ಸ್

Suddi Udaya

ಹಲವು ಸಮಯದ ಹಿಂದೆ ಮನೆ ತೊರೆದಿದ್ದ ಕಾಯರ್ತಡ್ಕ ಮಾಣಿಂಗೇರಿ ರಾಜು ಅವರ ಶವ ಪುದುವೆಟ್ಟು ಪದವು ಬಸ್ಸ್ಟ್ಯಾಂಡ್ ಬಳಿಯ ಕಾಡಿನಲ್ಲಿ ಪತ್ತೆ

Suddi Udaya

ಜೂನ್ 7: ರಾಷ್ಟ್ರೀಯ ತುಳು ಗುಡಿಗಾರ ಸಂಘ ದಕ್ಷಿಣ ಕನ್ನಡ-ಉಡುಪಿ ಇವರ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya
error: Content is protected !!