26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಯನಾಡು: ಅರೆಪ್ರಜ್ಞಾ ಸ್ಥಿತಿಯಲ್ಲಿ ಒಂದುವರೆ ವರ್ಷದ ಚಿರತೆ ಪತ್ತೆ

ವೇಣೂರು: ವೇಣೂರು ವಲಯ ಅರಣ್ಯ ಇಲಾಖೆಯ ವ್ಯಾಪ್ತಿಯ ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದ ನೈನಾಡು ಸಮೀಪದ ಪಿಲಾತಬೆಟ್ಟು ನಿನ್ಯಾರು ಎಂಬಲ್ಲಿ ಒಂದುವರೆ ವರ್ಷದ ಚಿರತೆಯೊಂದು ಸೆರೆಯಾದ ಬಗ್ಗೆ ಜ.15 ರಂದು ವರದಿಯಾಗಿದೆ.

ಅರೆಪ್ರಜ್ಞಾ ಸ್ಥಿತಿಯಲ್ಲಿ ನಿನ್ಯಾರು ಪರಿಸರದ ಖಾಸಗಿ ಜಮೀನಿನ ರಬ್ಬರ್ ತೋಟದಲ್ಲಿ ಚಿರತೆ ಪತ್ತೆಯಾಗಿದೆ. ಎಲ್ಲಿಂದಲೋ ಉರುಳಿಗೆ ಬಿದ್ದಿದ್ದ ಚಿರತೆ ಅರಪ್ರಜ್ಞಾ ಸ್ಥಿತಿಯಲ್ಲಿ ಅಲ್ಲಿ ಬಿದ್ದಿತ್ತು. ಮಂಗಳೂರು ವೃತ್ತದ ವನ್ಯಜೀವಿ ಪಶುವೈದ್ಯ ಡಾ.ಯಶಸ್ವಿ ನಾರಾವಿ ಆಗಮಿಸಿ ಅರವಳಿಕೆ ಮದ್ದು ನೀಡಿ ಸಿಕ್ಕಿಹಾಕಿಕೊಂಡಿದ ಉರುಳನ್ನು ತೆಗೆದು ಬಳಿಕ ಸುರಕ್ಷಿತವಾಗಿ ಕಾಡಿಗೆ ಬಿಡಲಾಗಿದೆ.

ಮೂಡಬಿದರೆ ಎಸಿಎಫ್ ಶ್ರೀಧರ್.ಪಿ ಮಾರ್ಗದರ್ಶನದಲ್ಲಿ ವೇಣೂರು ವಲಯ ಅರಣ್ಯಾಧಿಕಾರಿ ಭರತ್.ಯು.ಜಿ ನೇತೃತ್ವದ ಡಿ.ಆರ್.ಡಿ.ಒ ಅಶ್ವಿತ್ ಗಟ್ಟಿ ಮತ್ತು ಸುನಿಲ್ ಕುಮಾರ್, ಗಸ್ತು ಅರಣ್ಯ ಪಾಲಕ ಸುರೇಶ್ ಮತ್ತು ದಿವಕರ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

ಅರಣ್ಯ ಇಲಾಖೆ ಯ ಅಧಿಕಾರಿಗಳು ಸ್ಥಳೀಯರ ಸಹಕಾರದೊಂದಿಗೆ ಚಿರತೆ ಹಿಡಿಯುವ ಬೋನನ್ನು ಸ್ನೇಹಗಿರಿ ಪರಿಸರದ ವ್ಯಾಪ್ತಿಯಲ್ಲಿ ಅಳವಡಿಸಲಾಗಿತ್ತು. ಸ್ನೇಹಗಿರಿಯಲ್ಲಿ ಬೋನು ಅಳವಡಿಸಲು ನೈನಾಡು ಶ್ರೀ ರಾಮ ಯುವಕ ಸಂಘದ ಸದಸ್ಯರುಗಳು ಸಹಕಾರ ನೀಡಿದ್ದರು.

ನೈನಾಡು, ಹೊಸಪಟ್ಣ ವ್ಯಾಪ್ತಿಯಲ್ಲಿ ಚಿರತೆಯ ಓಡಾಡುವಿಕೆ ದಿನನಿತ್ಯ ಕಂಡು ಬರುತ್ತಿದೆ. ಜ.೧೪ ರಾತ್ರಿ ಹೊಸಪಟ್ಣ ಪರಾರಿ ಸುರೇಶ್ ಪೂಜಾರಿಯವರ ಮನೆಯ ಕೋಳಿಯನ್ನು ಹೊತ್ತೊಯ್ದಿದ್ದು, ನಂತರ ಹೊಸಪಟ್ಣ ದೊಡ್ಯಾರು ಸಮೀಪ ಚಿರತೆಯ ಕೂಗು ಇಡೀ ರಾತ್ರಿ ಕೇಳುತ್ತಲೇ ಇತ್ತು ಎಂದು ಊರ ಕೃಷಿಕರು ತಿಳಿಸಿದ್ದಾರೆ. ಇದರಿಂದ ಕೃಷಿಕರಿಗೆ ಹಾಗೂ ಶಾಲಾ ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು ತುಂಬಾ ಆತಂಕಕ್ಕೀಡಾಗಿದ್ದಾರೆ. ಇದೀಗ ಹೊಸಪಟ್ಣದ ದೊಡ್ಯಾರು ಸಮೀಪ ಬೋನು ಅಳವಡಿಸುವಂತೆ ನಾಗರಿಕರು ತಿಳಿಸಿದ್ದಾರೆ.

Related posts

ಕೋಲ್ಕತ್ತಾದ ಮೆಡಿಕಲ್ ವಿದ್ಯಾರ್ಥಿನಿಯ ಹತ್ಯೆ ಖಂಡಿಸಿ ಉಜಿರೆಯಲ್ಲಿ ಎನ್ ಎಸ್ ಯು ಐ ಹಾಗೂ ಸರ್ವ ಕಾಲೇಜು ವಿದ್ಯಾರ್ಥಿ ಸಂಘದಿಂದ ಪ್ರತಿಭಟನೆ

Suddi Udaya

ಉಜಿರೆ ಅಮೃತ್‌ ಸಿಲ್ಕ್ ನಲ್ಲಿ ಮನ್ಸೂನ್ (ಆಷಾಢ) ಸೇಲ್ಸ್: ಪ್ರತಿ ಖರೀದಿಯ ಮೇಲೆ ಶೇ.10 ರಿಂದ 50 ರಷ್ಟು ಡಿಸ್ಕೌಂಟ್

Suddi Udaya

ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಕು. ಸೌಜನ್ಯ ಅತ್ಯಾಚಾರ‌ ಹಾಗೂ ಕೊಲೆ ಪ್ರಕರಣದ ಮರು ತನಿಖೆಗೆ ತಾಲೂಕು ಒಕ್ಕಲಿಗ ಗೌಡರ ಸಂಘ ಉಜಿರೆ ಆಗ್ರಹ

Suddi Udaya

ವಾಣಿ ಪದವಿಪೂರ್ವ ಕಾಲೇಜಿನಲ್ಲಿ ರಸ್ತೆ ಸುರಕ್ಷತಾ ನಿಯಮಗಳ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಉಜಿರೆ ಶೀತಲ್ ಗಾರ್ಡನ್ ನಲ್ಲಿ ಸುಸಜ್ಜಿತವಾದ ವಿಜಯ ಸಭಾಭವನ ಉದ್ಘಾಟನೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ದೊಂಡೊಲೆಯ ವಿಕಲಚೇತನ ಕುಟುಂಬಕ್ಕೆ ಸಹಾಯಹಸ್ತ : ಅರ್ಹರ ಸೇವೆಗೆ ಬೆಳ್ತಂಗಡಿ ಲಯನ್ಸ್ ತೆರೆದುಕೊಂಡಿದೆ-ವಲಯಾಧ್ಯಕ್ಷ ದಿನೇಶ್

Suddi Udaya
error: Content is protected !!