July 23, 2026
ಪ್ರಮುಖ ಸುದ್ದಿಬೆಳ್ತಂಗಡಿವರದಿ

ಪಡ್ಡಂದಡ್ಕ ಕಟ್ಟೆ: ಪುನಃ ಪ್ರತಿಷ್ಠಾ ಕಲಶಾಭಿಷೇಕ, ದೊಂಪದಬಲಿ ನೇಮೋತ್ಸವ

ವೇಣೂರು: ಐದು ಗ್ರಾಮಗಳಿಗೆ ಸಂಬಂಧಿಸಿದ ಶ್ರೀ ದೈವ, ಶ್ರೀ ಕೊಡಮಣಿತ್ತಾಯ ಹಾಗೂ ಪರಿವಾರ ಸಾನಿಧ್ಯ ಪಡ್ಡಂದಡ್ಕದ ಗಡುಸ್ಥಳ ಕಟ್ಟೆಯಲ್ಲಿ ಪುನಃ ಪ್ರತಿಷ್ಠಾ ಕಲಶಾಭಿಷೇಕ, ಪರ್ವಸೇವೆ ಹಾಗೂ ದೊಂಪದಬಲಿ ನೇಮೋತ್ಸವವು ವೇ.ಮೂ. ಮಾರೂರು ಖಂಡಿಗದ ರಾಮದಾಸ ಅಸ್ರಣ್ಣರ ಪೌರೋಹಿತ್ಯದಲ್ಲಿ ವಿಜ್ರಂಭನೆಯಿಂದ ಜರಗಿತು.

ಪೆರಿಂಜೆ ರಾಜ್ಯಗುತ್ತು, ಕರಿಮಣೇಲು ಮಾಗಣೆಗುತ್ತು, ಬಡಕೋಡಿ ಗುತ್ತು, ಪಡ್ಯೋಡಿಗುತ್ತು, ಮೂಡುಕೋಡಿಗುತ್ತು ಜೀಣೋದ್ದಾರ ಸಮಿತಿಯ ಅಧ್ಯಕ್ಷರಾದ ಜಿನರಾಜ್ ಜೈನ್ ಪದ್ಮಾಂಬ ಹಾಗೂ ಐದು ಗ್ರಾಮಗಳ ಬರ್ಕೆಯವರು ಉಪಸ್ಥಿತಿಯಲ್ಲಿ ಬೆಳಿಗ್ಗೆ ಧರ್ಮದೈವಗಳ ಪ್ರತಿಷ್ಠೆ, ಕಲಶಾಭಿಷೇಕ, ಪರ್ವಸೇವೆ ನಡೆಯಿತು.

ಸಂಜೆ ನವಕ ಕಲಶಾಭಿಷೇಕ, ವಿವಿಧ ಗುತ್ತುಗಳಿಂದ ಭಂಡಾರ ಬಂದು ಶ್ರೀ ದೈವ, ಶ್ರೀ ಕೊಡಮಣಿತ್ತಾಯ, ಶ್ರೀ ಕಲ್ಕುಡ ಕಲ್ಲುರ್ಟಿ, ಕಾಳಮ್ಮ ದೈವಗಳ ಬಲಿ ನೇಮ ನಡೆಯಿತು. ವಿವಿಧ ಗ್ರಾಮಗಳ ಸಾವಿರಾರು ಭಕ್ತರು ಆಗಮಿಸಿ ಗಂಧಪ್ರಸಾದ ಸ್ವೀಕರಿಸಿದರು. ಸಾಯಂಕಾಲ ಸಾರ್ವಜಕರಿಗೆ ಉಪಹಾರ ಹಾಗೂ ಅನ್ನ ಸಂತರ್ಪಣೆಯ ವ್ಯವಸ್ಥೆ ಕಲ್ಪಿಸಲಾಗಿತ್ತು.

Related posts

ನೀಟ್ ಪರೀಕ್ಷೆ ಅಕ್ರಮ, ರಾಷ್ಟ್ರೀಯ ಯುವ ಕಾಂಗ್ರೆಸ್ ನಿಂದ ದೆಹಲಿಯಲ್ಲಿ ಸಂಸತ್ ಮುತ್ತಿಗೆ : ದೆಹಲಿ ಪ್ರತಿಭಟನೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

Suddi Udaya

ಬೆಳ್ತಂಗಡಿ: ನಾಳೆ (ಫೆ.26) ವಿದ್ಯುತ್ ನಿಲುಗಡೆ

Suddi Udaya

ಉಜಿರೆ ಎಸ್.ಡಿ.ಎಂ. ಯಕ್ಷಗಾನ ಕಲಾಕೇಂದ್ರದ ವಿದ್ಯಾರ್ಥಿಗಳಿಂದ ಕಾಸರಗೋಡು ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದ ಸಾಂಸ್ಕೃತಿಕ ಭವನಕ್ಕೆ ಭೇಟಿ

Suddi Udaya

ಗುರುವಾಯನಕೆರೆ: ನಿವೃತ್ತ ಕೆ.ಎಸ್.ಆರ್.ಟಿ.ಸಿ ಟ್ರಾಫಿಕ್ ಕಂಟ್ರೋಲರ್ ಕೃಷ್ಣ ಕಾಮತ್ ನಿಧನ

Suddi Udaya

ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ವತಿಯಿಂದ ಉಡುಪಿಯಲ್ಲಿ ಜಿಲ್ಲಾ ಮಟ್ಟದ ನೈತಿಕ ಶಿಕ್ಷಣ ಸ್ಪರ್ಧೆ ಉದ್ಘಾಟನೆ

Suddi Udaya

ಬೆಳ್ತಂಗಡಿ: ಜ್ಯೋತಿ ಆಸ್ಪತ್ರೆಯ ವೆಬ್‌ಸೈಟ್ ಬಿಡುಗಡೆ

Suddi Udaya
error: Content is protected !!