25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಮಾಜಿ ಶಾಸಕ ದಿ.ಕೆ ವಸಂತ ಬಂಗೇರರವರ 80ನೇ ವರ್ಷದ ಹುಟ್ಟುಹಬ್ಬ: ಬಿನುತಾ ಬಂಗೇರರವರ ಸಾರಥ್ಯದಲ್ಲಿ,ಬಂಗೇರ ಬ್ರಿಗೇಡ್ ವತಿಯಿಂದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿ

ಬೆಳ್ತಂಗಡಿ: ಬೆಳ್ತಂಗಡಿ ಮಾಜಿ ಶಾಸಕ ದಿ.ಕೆ ವಸಂತ ಬಂಗೇರರವರ 80ನೇ ವರ್ಷದ ಹುಟ್ಟುಹಬ್ಬ ಪ್ರಯುಕ್ತ ಬಂಗೇರ ಬ್ರಿಗೆಡ್ ಅಧ್ಯಕ್ಷೆ ಬಿನುತಾ ಬಂಗೇರರವರ ಸಾರಥ್ಯದಲ್ಲಿ, ಬಂಗೇರ ಬ್ರಿಗೇಡ್ ವತಿಯಿಂದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿಯ ಉದ್ಘಾಟನಾ ಸಮಾರಂಭವು ಜ 15 ರಂದು ಮದ್ದಡ್ಕ ಬಂಡಿಮಠ ಮೈದಾನದಲ್ಲಿ ನಡೆಯಿತು.

ಕಬಡ್ಡಿ ಪಂದ್ಯಕೂಟದ ಉದ್ಘಾಟನೆಯನ್ನು ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಆರಿಕೋಡಿ ದೀಪ ಪ್ರಜ್ವಲನೆ ಮೂಲಕ ನೆರವೇರಿಸಿ ಶುಭಕೋರಿದರು.

ಕ್ರೀಡಾಂಗಣ ಉದ್ಘಾಟನೆಯನ್ನು ಮಹಿಳಾ ಬಿಲ್ಲವ ವೇದಿಕೆಯ ಸ್ಥಾಪಕಾಧ್ಯಕ್ಷೆ ಸುಜಿತಾ ವಿ ಬಂಗೇರ ನೇರವೇರಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಬಂಗೇರ ಬ್ರಿಗೇಡ್ ಗೌರವಾಧ್ಯಕ್ಷೆ ಪ್ರೀತಿತಾ ಧರ್ಮವಿಜೇತ್ ವಹಿಸಿದ್ದರು.

ವೇದಿಕೆಯಲ್ಲಿ ಶ್ರೀ ನಾರಾಯಣ ಗುರು ವಿಚಾರ ವೇದಿಕೆಯ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್, ಅಮೆಚೂರು ಕಬಡ್ಡಿ ಅಸೊಶಿಯೇಶನ್ ಅಧ್ಯಕ್ಷ ರಂಜನ್ ಜಿ ಗೌಡ, ಆರ್ಯ- ಈಡಿಗ ಮಹಾ ಸಂಸ್ಥಾನ ಸೋಲೂರು ಪ್ರ.ಕಾರ್ಯದರ್ಶಿ ಧರ್ಮ ವಿಜೇತ್, ಬೆಂಗಳೂರು ವಿ.ಪಿ ಇನ್ವೆಸ್ಟ್ಮೆಮೆಂಟ್ ಸಂಜೀವ್ ಕಣೆಕಲ್, ಓಡೀಲು ದೇವಸ್ಥಾನದ ಪ್ರಧಾನ ಆರ್ಚಕ ರಾಘವೇಂದ್ರ ಭಟ್, ಬೆಳ್ತಂಗಡಿ ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಎಂ.ಕೆ ಪ್ರಸಾದ್, ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆ ಸುಮತಿ, ಕಾರ್ಯದರ್ಶಿ ಶಾಂಭವಿ ಬಂಗೇರ,ನ್ಯಾಯವಾದಿ ಕೇಶವ ಬೆಳಾಲು, ಸುರೇಶ್ ಪೂಜಾರಿ,ವೃಷಭ ಆರಿಗ, ಪ್ರಭಾಕರ ನಾರಾವಿ,ಬಂಗೇರ ಬ್ರಿಗೇಡ್ ಪ್ರಮುಖರಾದ ಕೆ.ಸಲೀಮ್, ರಾಕೇಶ್ ಕುಮಾರ್ ಮೂಡುಕೋಡಿ, ಅನೂಪ್ ಎಂ ಬಂಗೇರ, ಗುರುದೇವ ಕಾಲೇಜಿನ ಪ್ರಾಂಶುಪಾಲರಾದ ಸವಿತಾ, ಸುಕೇಶ್ ಕುಮಾರ್,ಉಪ ಪ್ರಾಂಶುಪಾಲರಾದ ಶಮಿಯುಲ್ಲ ಉಪಸ್ಥಿತರಿದ್ದರು.

ಸೇಕ್ರೆಡ್ ಹಾರ್ಟ್ ಕಾಲೇಜಿನ ವಿದ್ಯಾರ್ಥಿ ಪೂರ್ವಿ ದಿ.ವಸಂತ ಬಂಗೇರರವರ ಅನಿಸಿಕೆ ವ್ಯಕ್ತಪಡಿಸಿದರು.

ಗುರುದೇವ ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥನೆಗೈದರು, ಬಂಗೇರ ಬ್ರಿಗೇಡ್ ಕೋಶಾಧಿಕಾರಿ ರಾಜಶ್ರೀ ರಮಣ್ ಸ್ವಾಗತಿಸಿದರು. ಶಿಕ್ಷಕ ಅಜಿತ್ ಕೊಕ್ರಾಡಿ ಕಾರ್ಯಕ್ರಮ ನಿರೂಪಿಸಿದರು.

Related posts

ಶಿವರಾತ್ರಿ: ಧರ್ಮಸ್ಥಳದಲ್ಲಿ ಪಾದಯಾತ್ರಿಗಳಿಗಾಗಿ ಸ್ವಾಗತ ಕಾರ್ಯಾಲಯ ಉದ್ಘಾಟನೆ

Suddi Udaya

ಆರಂಬೋಡಿ : ಬಡ ಕುಟುಂಬಕ್ಕೆ ಶೌಚಾಲಯ ನಿರ್ಮಿಸಿಕೊಟ್ಟ ಕಿರಣ್ ಕುಮಾರ್ ಮಂಜಿಲ: ಗ್ರಾಮಸ್ಥರಿಂದ ಮೆಚ್ಚುಗೆ

Suddi Udaya

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ: ರೂ. 2. 43 ಲಕ್ಷ ನಿವ್ವಳ ಲಾಭ.

Suddi Udaya

ಕಕ್ಕಿಂಜೆಯ ವೃದ್ಧ ದಂಪತಿಗಳ ಕೊಲೆ ಪ್ರಕರಣ: ಆರೋಪಿ ಗದಗದ ರಾಜುಗೆ ಜೀವಾವಧಿ ಶಿಕ್ಷೆ ಪ್ರಕಟ

Suddi Udaya

ಬೆಳ್ತಂಗಡಿ: ಪೌರಕಾರ್ಮಿಕರ ದಿನಾಚರಣೆಯ ಅಂಗವಾಗಿ ಬೆಳ್ತಂಗಡಿ ಪ.ಪಂ. ಖಾಯಂ ಪೌರಕಾರ್ಮಿಕರಿಗೆ ಸನ್ಮಾನ

Suddi Udaya

ಪುತ್ತಿಲ‌ ಗ್ರಾಮದ ಪಲ್ಕೆ ಎಂಬಲ್ಲಿ ಕಾಯಾ೯ಚರಿಸುತ್ತಿದ್ದ ಆಕ್ರಮ‌ ಕಾಸಾಯಿಖಾನೆಗೆ ಪೊಲೀಸರು ದಾಳಿ: ಆರೋಪಿಗಳು ಪರಾರಿ, ಜಾನುವಾರು ಹಾಗೂ ಸೋತ್ತುಗಳ ವಶ

Suddi Udaya
error: Content is protected !!