28.1 C
ಪುತ್ತೂರು, ಬೆಳ್ತಂಗಡಿ
September 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲದಲ್ಲಿ ಎಸ್.ಎಂ.ಇ.ಗ್ರೂಪ್ಸ್ ನ ಸಹ ಸಂಸ್ಥೆ “ಯುನಿಕ್ ಎಂಟರ್‌ಪ್ರೈಸಸ್” ಶುಭಾರಂಭ

ಬೆಳ್ತಂಗಡಿ: ಇಲ್ಲಿಯ ಲಾಯಿಲದಲ್ಲಿರುವ ನೂರೂಲ್‌ಹುದಾ ಕಟ್ಟಡದಲ್ಲಿ ಎಸ್.ಎಂ.ಇ.ಗ್ರೂಪ್ಸ್ ನೂತನವಾಗಿ ಆರಂಭಿಸಿದ ಸಹ ಸಂಸ್ಥೆ “ಯುನಿಕ್ ಎಂಟರ್‌ಪ್ರೈಸಸ್” ಕಂಪ್ಯೂಟರ್ಸ್, ವಾಟರ್ ಪ್ಯೂರಿಫಯರ್, ‌ಸೆಕ್ಯೂರಿಟಿ ಸಿಸ್ಟಮ್ ಜ.15ರಂದು ಶುಭಾರಂಭಗೊಂಡಿತು.

ಸಹ ಸಂಸ್ಥೆಯ ಉದ್ಘಾಟನೆಯನ್ನು ಲಾಯಿಲ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಜಯಂತಿ ಎಂ.ಕೆ, ಉದ್ಘಾಟಿಸಿದರು. ಶ್ರೀಮತಿ ಮತ್ತು ಪ್ರೇಮ ರಾಜಪ್ಪ ಗೌಡ, ಶ್ರೀಮತಿ ಮತ್ತು ಶ್ರೀ ಜಯಲಕ್ಷ್ಮಿ ರಾಜಣ್ಣ ಬೆಂಗಳೂರು ಇವರು ದೀಪ ಪ್ರಜ್ವಲನೆಗೊಳಿಸಿದರು.

ನಾಳ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಕ್ಷೇತ್ರದ ಪ್ರಧಾನ ಅರ್ಚಕ ವೇದಮೂರ್ತಿ ರಾಘವೇಂದ್ರ ಅಸ್ರಣ್ಣರು ಆಗಮಿಸಿ ನೂತನ ಸಂಸ್ಥೆಗೆ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾದ ಲಾಯಿಲ ನೂರುಲ್ ಹುದಾ ಮಸೀದಿಯ ಧರ್ಮಗುರು ಉಬೈದುಲ್ಲಾ ಸಖಾಫಿ ಮುಈನಿ ಎಂ.ಎ, ಫಾ| ಪೌಲ್ ಒಸಿಡಿ, ಕಾರ್ಮೆಲ್ ಸದನ ಲಾಯಿಲ, ಲಾಯಿಲ ನೂರುಲ್ ಹುದಾ ಜುಮ್ಮಾ ಮಸೀದಿ ಅಧ್ಯಕ್ಷ ಅಬ್ದುಲ್ ಹನೀಫ್, ಬೆಳ್ಳಾರೆ
ಸ್ನೇಹ ಇಲೆಕ್ಟಿಕಲ್ಸ್ ಮಾಲಕ ಹೊನ್ನಪ್ಪ, ನಿವೃತ್ತ ಗ್ರಾಮ ಲೆಕ್ಕಾಧಿಕಾರಿ ಎಚ್. ಕೃಷ್ಣಯ್ಯ ಇಡ್ಯಾ, ಬೆಳ್ತಂಗಡಿ ಜೆಸಿಐ ಅಧ್ಯಕ್ಷ
ಜಿತೇಶ್ ಕುಮಾರ್ ಭಾಗವಹಿಸಿದರು.

ಈ ಸಂದರ್ಭದಲ್ಲಿ ಲಾಯಿಲ ಗ್ರಾಮ ಪಂಚಾಯತ್ ಸದಸ್ಯರುಗಳಾದ ಅರವಿಂದ, ಗಣೇಶ್, ನಿವೃತ್ತ ಶಿಕ್ಷಕ ಸುರೇಶ್, ವ್ಯವಸ್ಥಾಪಕ ನಿರ್ದೇಶಕ ಅವಿನಾಶ್ ಎ.ಆರ್. ರವರ ಮನೆಯವರು, ಬಂಧು ಮಿತ್ರರು ಉಪಸ್ಥಿತರಿದ್ದರು.

ಎಸ್.ಎಂ.ಎಸ್ ಗ್ರೂಪ್ಸ್ ನ ವ್ಯವಸ್ಥಾಪಕ ನಿರ್ದೇಶಕ ಅವಿನಾಶ್ ಎ.ಆರ್. ರವರು ಬಂದಂತಹ ಅತಿಥಿ ಗಣ್ಯರನ್ನು ಸ್ವಾಗತಿಸಿ ಸತ್ಕರಿಸಿದರು.

Related posts

ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆ ಮತ್ತು ಲೋಕಾರ್ಪಣೆ : ಲಾಯಿಲ ವಿಶ್ವಕರ್ಮ ಸಭಾಭವನದಲ್ಲಿ ಭಜನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಖಾಸಗಿ ಬಸ್ ನಿಲ್ದಾಣದ ಸಮೀಪ ಮರಣಬಾವಿಯನ್ನು ನಾಚಿಸುವಂತೆ ಗುಂಡಿಗಳ ನಿರ್ಮಾಣ

Suddi Udaya

ಬಂದಾರು ಗ್ರಾ.ಪಂ. ನಲ್ಲಿ ಸಾಮಾಜಿಕ ಭದ್ರತಾ ಯೋಜನೆಗಳ ಸಂಪೂರ್ಣತಾ ಅಭಿಯಾನ ಕಾರ್ಯಕ್ರಮ

Suddi Udaya

ಶಿಶಿಲದಿಂದ ಪೇರಿಕೆ ಹೋಗುವ ರಸ್ತೆಯಲ್ಲಿ ಬೃಹತ್ ಗಾತ್ರದ ಮರವೊಂದು ವಿದ್ಯುತ್ ಕಂಬಗಳ ಮೇಲೆ ಬಿದ್ದಿದ್ದು, ಸಂಚಾರಕ್ಕೆ ತೊಂದರೆ

Suddi Udaya

ಕೊಕ್ಕಡ: ಹಳ್ಳಿಂಗೇರಿ ನಿವಾಸಿ ದಿನೇಶ್ ನಿಧನ

Suddi Udaya

ಉಜಿರೆ: ಶಿವಪ್ಪ ಪೂಜಾರಿ ಅನಾರೋಗ್ಯದಿಂದ ನಿಧನ

Suddi Udaya
error: Content is protected !!