ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಾಮರಸ್ಯದ ಸಂಕ್ರಾಂತಿಗೆ ವೇಣೂರಿನಲ್ಲಿ ಚಾಲನೆ: ಪರಿಶಿಷ್ಟ ಜಾತಿ ಕುಟುಂಬಿಕರೊಂದಿಗೆ ಸಂಕ್ರಾಂತಿ ಆಚರಿಸಿದ ಶಾಸಕ ಹರೀಶ್ ಪೂಂಜ

ವೇಣೂರು: ನಾಡಿನೆಲ್ಲೆಡೆಲೆ ಸುಗ್ಗಿ ಹಬ್ಬವಾದ ಮಕರ ಸಂಕ್ರಾಂತಿಯ ಸಂಭ್ರಮ. ಈ ಹಬ್ಬದಲ್ಲಿ ಸಾಂಪ್ರದಾಯಿಕ ಉಡುಗೆಯನ್ನು ತೊಟ್ಟು, ತಟ್ಟೆಯಲ್ಲಿ ಎಳ್ಳು ಬೆಲ್ಲ, ಕಬ್ಬು ಅರಶಿನ ಕುಂಕುಮ ಇಟ್ಟುಕೊಂಡು ಪ್ರೀತಿ ಪಾತ್ರರಿಗೆ ಎಳ್ಳು ಬೆಲ್ಲವನ್ನು ಜೊತೆಗೆ ಪ್ರೀತಿಯನ್ನು ಹಂಚುವ ದಿನ. ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜ ಅವರು ಈ ಬಾರಿ ಬೆಳ್ತಂಗಡಿ ಕ್ಷೇತ್ರದಲ್ಲಿ ಸಂಕ್ರಾಂತಿ ಹಬ್ಬವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಿದರು.

ಬೆಳ್ತಂಗಡಿ ತಾಲೂಕಿನ ಎಲ್ಲಾ ಪರಿಶಿಷ್ಟ ಜಾತಿಯ ಬಂಧುಗಳ ಕಾಲನಿಗಳಲ್ಲಿ ಜ.೧೪ರಂದು ಸಂಕ್ರಾಂತಿ ಹಬ್ಬವನ್ನು ‘ಸಾಮರಸ್ಯದ ಸಂಕ್ರಾಂತಿ’ ಎಂಬ ವಿಶಿಷ್ಟ ಕಲ್ಪನೆಯಲ್ಲಿ ಆಚರಿಸಿದರು. ನಾರಾವಿ ಮಹಾಶಕ್ತಿಕೇಂದ್ರದ ವ್ಯಾಪ್ತಿಯ ಪ.ಜಾತಿ ಬಂಧುಗಳ ಕಾಲೋನಿಗಳಿಗೆ ತೆರಳಿದ ಶಾಸಕ ಹರೀಶ್ ಪೂಂಜ ಅವರು ಉಡುಗೊರೆ ಸಹಿತ ಸಾಮರಸ್ಯದ ಸಂಕ್ರಮಣದ ಶುಭ ಹಾರೈಸಿದರು. ಈ ಸರಣಿ ಕಾರ್ಯಕ್ರಮಕ್ಕೆ ವೇಣೂರು ಆದಿಶಕ್ತಿ ಭಜನಾ ಮಂದಿರದಲ್ಲಿ ಚಾಲನೆ ನೀಡಲಾಯಿತು.

ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ ೧೦೦ ವರ್ಷ ಆದ ಸಂಭ್ರಮದ ಪ್ರೇರಣೆ ಪಡೆದು ಸರ್ವರನ್ನೂ ಬಂಧುಭಾವದಿಂದ ಅಭಿವೃದ್ಧಿಯೆಡೆಗೆ ಜೊತೆಗೆ ಕರೆದೊಯ್ಯುವ ಸಂಕಲ್ಪದೊಂದಿಗೆ ಈ ವಿಶಿಷ್ಟ ಕಾರ್ಯಕ್ರಮ ನಡೆಸಿದರು. ಪರಿಶಿಷ್ಟ ಬಂಧುಗಳು ತಯಾರಿಸಿ ಬಡಿಸಿದ ಉಪಹಾರಾದಿ ಆತಿಥ್ಯ ಸ್ವೀಕರಿಸಲಾಯಿತು. ಕಾರ್ಯಕ್ರಮದ ಚಾಲನೆ ವೇಳೆ ಸ್ಥಳೀಯ ಹಿರಿಯರು, ಜನಪ್ರತಿನಿಧಿಗಳು ಹಾಗೂ ಕಾಲನಿ ನಿವಾಸಿಗಳು ಉಪಸ್ಥಿತರಿದ್ದರು.

Related posts

ದ.ಕ. , ಉಡುಪಿ ಜಿಲ್ಲೆಯ ವಕೀಲರ ವೇದಿಕೆ ಬೆಂಗಳೂರು ಇದರ ಕಾರ್ಯದರ್ಶಿಯಾಗಿ ಬೆಳ್ತಂಗಡಿಯ ಶೈಲಾ ರಮೇಶ್ ಆಯ್ಕೆ

Suddi Udaya

ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್ “ತನ್’ಶೀತ್ವ್” ದ‌ಅ್‌ವಾ ಕ್ಯಾಂಪ್

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಕುಟುಂಬಸ್ಥರಿಂದ ಮತ ಚಲಾವಣೆ

Suddi Udaya

ನಾರಾವಿ:”ಸನ್ನಿಧಿ” ಪ್ಯಾಲೇಸ್ ಡೊಂಕುಬೆಟ್ಟು ವೀರಮ್ಮ ಸಂಜೀವ ಸಾಲಿಯನ್ ಮತ್ತು ಮಕ್ಕಳಿಂದ ದೈಪಾಲಬೆಟ್ಟು ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಮುಖಾಯಾಮ ಮಂಟಪ ದುರಸ್ತಿಗೆ ಮರಮಟ್ಟು ಹಾಗೂ ಭಂಡಾರಕ್ಕೆ ಪಲ್ಲಕ್ಕಿ ಸಮರ್ಪಣೆ

Suddi Udaya

ಎನ್.ಎಂ.ಎಂ.ಎಸ್. ಪರೀಕ್ಷೆ: ಶಿರ್ಲಾಲು ಶಾಲೆಯ ಕೆ.ಪುಣ್ಯಶ್ರೀ ವಿದ್ಯಾರ್ಥಿ ವೇತನಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ: ಸರಕಾರಿ ಪ.ಪೂ. ಕಾಲೇಜು ಹಾಗೂ ಸರಕಾರಿ ಪ್ರೌಢಶಾಲೆಯ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya
error: Content is protected !!