22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿ ಶ್ರೀ ಸೋಮನಾಥೇಶ್ವರಿ ಜಾತ್ರಾ ಮಹೋತ್ಸವ, ಆಮಂತ್ರಣ ದಶಮಾನೋತ್ಸವ ಸಂಭ್ರಮ: ಉದ್ಯಮಿ ಮೋಹನ್ ಕುಮಾರ್‌ರವರಿಂದ ಅಮ್ಯೂಸ್‌ಮೆಂಟ್ ಉದ್ಘಾಟನೆ

ಅಳದಂಗಡಿ: ಸತ್ಯ ಮತ್ತು ಧರ್ಮದ ಪುಣ್ಯಕ್ಷೇತ್ರ ಅಳದಂಗಡಿಯ ಜಾತ್ರಾಗರ ಮಹೋತ್ಸವ ಮತ್ತು ಆಮಂತ್ರಣ ದಶಮಾನೋತ್ಸವ ಸಂಭ್ರಮ ಅತ್ಯಂತ ಯಶಸ್ವಿಯಾಗಿ ನಡೆಯಲಿ. ಸದಾ ನಮ್ಮ ಸಹಕಾರವಿದೆ ಎಂದು ಉಜಿರೆ ಲಕ್ಷ್ಮೀ ಇಂಡಸ್ಟಿçÃಸ್ ಕನಸಿನ ಮನೆ ಮಾಲಿಕ ಮೋಹನ್ ಕುಮಾರ್ ಹೇಳಿದರು.

ಅವರು ಜ 14 ರಂದು ಅಳದಂಗಡಿ ಶ್ರೀ ಸೋಮನಾಥೇಶ್ವರಿ ಜಾತ್ರಾ ಮಹೋತ್ಸವ, ಆಮಂತ್ರಣ ದಶಮಾನೋತ್ಸವ ಸಂಭ್ರಮದ ಅಮ್ಯೂಸ್ ಮೆಂಟ್ ಉದ್ಘಾಟಿಸಿ ಮಾತನಾಡಿದರು.


ಹಿಂದಿನ ಕಾಲದಲ್ಲಿ ನಮ್ಮ ಹಿರಿಯರು ಮಕ್ಕಳನ್ನು ಜಾತ್ರೆ, ದೇವಸ್ಥಾನದ ಮತ್ತು ಧಾರ್ಮಿಕ ಕೆಲಸ ಕಾರ್ಯಗಳಿಗೆ ಕಳುಹಿಸುತ್ತಿದ್ದರು. ಇಂದು ಎಲ್ಲವೂ ಮಾಯವಾಗಿದೆ. ಮಕ್ಕಳಿಗೆ ನಮ್ಮ ನೆಲದ ಮೌಲ್ಯಗಳನ್ನು ತಿಳಿಸುವ ಕೆಲಸವಾಗಬೇಕಿದೆ ಎಂದರು.

ಈ ಸಂದರ್ಭದಲ್ಲಿ ಅಳದಂಗಡಿ ಅರಮನೆಯ ಡಾ.ಪ್ರೊಸ್ಟಿಲ್ ಅಜಿಲ, ಬೆಳ್ತಂಗಡಿ ಲಯನ್ಸ್ ಕ್ಲಬ್‌ನ ನಿಕಟ ಪೂರ್ವಾಧ್ಯಕ್ಷ ದೇವದಾಸ್ ಶೆಟ್ಟಿ ಬದ್ಯಾರು, ಅಳದಂಗಡಿ ಸೊಸೈಟಿ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ, ಉಪಾಧ್ಯಕ್ಷ ಜನಾರ್ಧನ ಪೂಜಾರಿ, ಹಿರಿಯರಾದ ಸದಾನಂದ ಪೂಜಾರಿ ಉಂಗಿಲಬೈಲು, ಶಿರ್ಲಾಲು ಸೊಸೈಟಿ ಅಧ್ಯಕ್ಷ ಸುಧೀರ್ ಆರ್ ಸುವರ್ಣ, ಉದ್ಯಮಿ ನಿತ್ಯಾನಂದ ನಾವರ, ಪ್ರಮುಖರಾದ ಶೇಖರ್ ನಾವರ, ಚಂದ್ರಶೇಖರ ಅಳದಂಗಡಿ, ಧರ್ಣಪ್ಪ ಪೂಜಾರಿ, ಪ್ರಜ್ವಲ್ ಜೈನ್, ಸುಪ್ರಿತ್ ಜೈನ್, ಆನಂದ ಪೂಜಾರಿ, ಪ್ರಭಾಕರ ಪೂಜಾರಿ, ಸುಂದರ ಶೆಟ್ಟಿ ಸುಲ್ಕೇರಿ ಹಾಗೂ ಇತರರು ಉಪಸ್ಥಿತರಿದ್ದರು.
ಆಮಂತ್ರಣ ಪರಿವಾರದ ಸಂಚಾಲಕ ವಿಜಯ್ ಜೈನ್ ನಾವರ ಸ್ವಾಗತಿಸಿ, ವಂದಿಸಿದರು.

Related posts

ವಲಯ ಮಟ್ಟದ ಬಾಲಕರ ತ್ರೋಬಾಲ್ ಪಂದ್ಯಾಟ: ಬರೆಂಗಾಯ ಶಾಲಾ ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಕು| ಅದಿತಿ ಮುಗೆರೋಡಿ “ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್” ನಲ್ಲಿ ದಾಖಲೆ”

Suddi Udaya

ವೇಣೂರು ಐಟಿಐಯಲ್ಲಿ ವಾರ್ಷಿಕ ಕ್ರೀಡೋತ್ಸವ

Suddi Udaya

ತೆಂಕಾಕಾರಂದೂರು: ಹತ್ತೂರಿನ ಪ್ರೀತಿಗಿಂತ ವಾಸವಿರುವ ಊರಿನ ಪ್ರೀತಿಗೆ ಬೆಲೆ ಕಟ್ಟಲಾಗದು: ಪ.ರಾ.ಶಾಸ್ತ್ರಿ

Suddi Udaya

ಬೆಳ್ತಂಗಡಿ: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ತೋರಣ ಮುಹೂರ್ತ, ಧ್ವಜಾರೋಹಣ

Suddi Udaya

ಕಕ್ಕಿಂಜೆ: ಖ್ಯಾತ ಮೇಸ್ತ್ರಿ ಕೆಲಸಗಾರ ಮೊಯಿದಿನ್‌ಕುಂಞಿ ಮೋಣುಚ್ಚ ನಿಧನ

Suddi Udaya
error: Content is protected !!