July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ : ಯಡೂ೯ರು ಎಂಬಲ್ಲಿ ಮನೆಯೊಳಗಡೆ ಯುವಕ ಕವಚಿಬಿದ್ದ ಸ್ಥಿತಿಯಲ್ಲಿ ಪತ್ತೆ: ತಲೆಯ ಭಾಗದಿಂದ ನೆಲದಲ್ಲಿ ಹರಿದು ಹೋದ ನೆತ್ತರು

ಗುರುವಾಯನಕೆರೆ: ಇಲ್ಲಿಯ ಯಡೂ೯ರು ಎಂಬಲ್ಲಿ ಯುವಕರೋವ೯ರು ಮನೆಯೊಳಗಡೆ ಕವಚಿಬಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ತಲೆಯ ಭಾಗದಿಂದ ನೆತ್ತರು ನೆಲದಲ್ಲಿ ಹರಿದು ಹೋಗಿರುವುದು ಕಂಡು ಬಂದಿದೆ.

ಯಡೂ೯ರಿನ ದಿ. ಶ್ರೀಧರ ಭಟ್ ಮತ್ತು ಶ್ರೀಮತಿ ಗೀತಾ ದಂಪತಿ ಪುತ್ರ ಮುರಳೀಧರ ಭಟ್ (35ವ) ಮನೆಯೊಳಗೆ ಕವಚಿ ಬಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.


ಮುರಳೀಧರ ಭಟ್ ಅವರ ತಾಯಿ ಗೀತಾ ಭಟ್ ಅವರು ಕಾಲಿನ ಆಪರೇಷನ್ ಆಗಿ ತಮ್ಮ ಮಗಳ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದು, ಮನೆಯಲ್ಲಿ ಮುರಳೀಧರ ಭಟ್ ಒಬ್ಬರೇ ಇದ್ದರೆನ್ನಲಾಗಿದೆ. ಮನೆಯ ಒಳಗಿನಿಂದ ಲಾಕ್ ಮಾಡಲಾಗಿದ್ದು, ಒಳಗಡೆ ಫ್ಯಾನ್ ತಿರುಗುತ್ತಿದೆ. ಮುರಳೀಧರ ಭಟ್ ಒಬ್ಬರೇ ರಾತ್ರಿ ‌ಮನೆಯಲ್ಲಿ ಇದ್ದುದರಿಂದ ಘಟನೆ ಏನಾಗಿದೆ ಎಂಬ ಮಾಹಿತಿ ಯಾರಿಗೂ ಗೊತ್ತಾಗಿಲ್ಲ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಆದರೆ ಮನೆಗೆ ಒಳಗಿನಿಂದ ಲಾಕ್ ಹಾಕಿರುವುದರಿಂದ ಇದರ ತೆರವು ಕಾರ್ಯಾಚರಣೆ ನಡೆಸಲು ತಯಾರಿ ನಡೆಸಲಾಗುತ್ತಿದೆ.

Related posts

ವೇಣೂರು ಐಟಿಐ ಕಾಲೇಜಿನಲ್ಲಿ ಯುವ ಮತ್ತು ಭವಿಷ್ಯದ ಮತದಾರರೊಂದಿಗೆ ಬೆಳ್ತಂಗಡಿ ತಾಲೂಕು ಸ್ವೀಪ್ ಸಮಿತಿ ಸಂವಾದ

Suddi Udaya

ಮುಂಡಾಜೆ ಸೀಟು ಬಳಿ ಧರೆಗುರುಳಲು ಸಿದ್ಧಗೊಂಡ ಮರಗಳು

Suddi Udaya

ಸಂಜಯ್ ಗ್ಲೋಬಲ್ ಫೌಂಡೇಶನ್ ವತಿಯಿಂದ ಎಸ್ಸೆಸ್ಸೆಲ್ಸಿಯಲ್ಲಿ ರಾಜ್ಯಕ್ಕೆ 8ನೇ ಸ್ಥಾನ ಗಳಿಸಿದ ಕೌಶಿಕ್ ಶೆಟ್ಟಿಯವರಿಗೆ ಸನ್ಮಾನ

Suddi Udaya

ಬೆಳ್ತಂಗಡಿಯ ಬ್ಲಾಕ್ ಕಾಂಗ್ರೆಸ್, ಯುವ ಕಾಂಗ್ರೆಸ್ ವತಿಯಿಂದ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಪ್ರತಿಭಟನೆ

Suddi Udaya

ತಣ್ಣೀರುಪಂತ ಶ್ರೀ ಶಾರದಾಂಬ ಭಜನಾ ಮಂದಿರದಲ್ಲಿ ಮಕ್ಕಳ ವ್ಯಕ್ತಿತ್ವ‌ ವಿಕಸನ ಸಮಾರೋಪ ಸಮಾರಂಭ ಹಾಗೂ ಭಜನೋಚ್ಚಯ ಕಾರ್ಯಕ್ರಮ

Suddi Udaya

ರಾಜ್ಯದ ಜನತೆಗೆ ಸಮಸ್ಯೆಗಳು ಎದುರಾಗದ್ದಂತೆ ಆಡಳಿತ ನಡೆಸಬೇಕು: ಕುಶಾಲಪ್ಪ ಗೌಡ ಪೂವಾಜೆ

Suddi Udaya
error: Content is protected !!