22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ ಯಡೂ೯ರು ರಾತ್ರಿ ಮನೆಯೊಳಗಡೆ ಬಿದ್ದು ರಕ್ತಸ್ರಾವವಾಗಿ ಮುರಳಿಧರ ಭಟ್ ಮೃತ್ಯು

ಗುರುವಾಯನಕೆರೆ: ಇಲ್ಲಿಯ ಯಡೂ೯ರು ಎಂಬಲ್ಲಿ ಯುವಕರೋವ೯ರು ಮನೆಯೊಳಗಡೆ ಬಿದ್ದು ತಲೆಗೆ ಬಿದ್ದ ಏಟಿನಿಂದ ರಕ್ತಸ್ರಾವವಾಗಿ ಮೃತ ಪಟ್ಟಿರುವುದು ಜ.15ರಂದು ಬೆಳಕಿಗೆ ಬಂದಿದೆ.

ಗುರುವಾಯನಕೆರೆ ಯಡೂ೯ರಿನ ದಿ. ಶ್ರೀಧರ ಭಟ್ ಮತ್ತು ಶ್ರೀ ಮತಿ ಗೀತಾ ದಂಪತಿ ಪುತ್ರ ಮುರಳೀಧರ ಭಟ್ (35ವ) ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ.

ಮುರಳೀಧರ ಭಟ್ ಅವರ ತಾಯಿ ಗೀತಾ ಭಟ್ ಅವರು ಕಾಲಿನ ಆಪರೇಷನ್ ಆಗಿ ಗೇರುಕಟ್ಟೆ ಕುಂಠಿನಿಯ ತಮ್ಮ ಮಗಳ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದು, ಇಂದು ಯಡೂ೯ರಿನ ತನ್ನ ಮನೆಗೆ ಬಂದಾಗ ಈ ಪ್ರಕರಣ ಬೆಳಕಿಗೆ ಬಂದಿದೆ.
ಬೆಳಿಗ್ಗೆ ಗೀತಾ ಭಟ್ ಮನೆಗೆ ಬಂದಾಗ ಮನೆಯ ಬಾಗಿಲು ಒಳಗಿನಿಂದ ಲಾಕ್ ಮಾಡಲಾಗಿದ್ದು, ಮಗನನ್ನು ಕರೆದರೂ ಯಾವುದೇ ಪ್ರತಿಕ್ರಿಯೆ ಬರಲಿಲ್ಲ. ನಂತರ ಮನೆಯ ಹಿಂದಿನ ಕಿಟಿಕಿ ಮೂಲಕ ನೋಡಿದಾಗ ಮುರಳಿ ಕವಚಿಬಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ತಲೆಯ ಭಾಗದಿಂದ ರಕ್ತ ಹರಿದು ಹೋಗಿರುವುದು ಕಂಡು ಬಂದಿದೆ. ಕೂಡಲೇ ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡಿ, ಬಳಿಕ ಮನೆಯ ಹಿಂದಿನ ಬಾಗಿಲನನ್ನು ತೆರೆದು ನೋಡಿದಾಗ ಮುರಳಿ ಮೃತಪಟ್ಟಿರುವುದು ದೃಢಪಟ್ಟಿದೆ.
ಮುರಳೀಧರ ಭಟ್ ಧರ್ಮಸ್ಥಳದ ಹೋಟೆಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದು, ಮನೆಯಲ್ಲಿ ಒಬ್ಬರೇ ಇದ್ದರು.

ಅವರ ಸಾವಿಗೆ ಸ್ವಷ್ಟ ಕಾರಣ ಗೊತ್ತಾಗಿಲ್ಲ. ಆದರೆ ರಾತ್ರಿ ‌ಮನೆಯಲ್ಲಿ ಬಿದ್ದು ತಲೆಗೆ ಬಿದ್ದ ಏಟಿನಿಂದ ರಕ್ತಸ್ರಾವವಾಗಿ ಸ್ಥಳದಲ್ಲೇ ಅವರು ಎರಡು ದಿನಗಳ ಹಿಂದೆ ಮೃತಪಟ್ಟಿರಬಹುದೆಂದು ಸಂಶಯಿಸಲಾಗಿದೆ. ಬೆಳ್ತಂಗಡಿ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು , ತನಿಖೆ ನಡೆಸುತ್ತಿದ್ದಾರೆ

Related posts

ಬೆಳ್ತಂಗಡಿ ರಾಜ್ಯ ಹೆದ್ದಾರಿಯಲ್ಲಿ ರಾಜ ಕೇಸರಿ ಸಂಘಟನೆಯಿಂದ ಸ್ವಚ್ಛತಾ ಕಾರ್ಯ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಕಾಡಾನೆ ಪ್ರತ್ಯಕ್ಷ

Suddi Udaya

ತಣ್ಣೀರುಪಂತ ಗ್ರಾ.ಪಂ. ವ್ಯಾಪ್ತಿಯಲ್ಲಿ ಕೂಸಿನ ಮನೆ ಶಿಶು ಪಾಲನಾ ಕೇಂದ್ರ ಉದ್ಘಾಟನೆ

Suddi Udaya

ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸ್ವಾತಂತ್ರೋತ್ಸವದ ಪ್ರಯುಕ್ತ ತಿರಂಗ ಯಾತ್ರೆ ಪಂಜಿನ ಮೆರವಣಿಗೆ

Suddi Udaya

ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿ ಸ್ವಾಮಿಗೆ ಪಾದಾಭಿಷೇಕ

Suddi Udaya

ತೋಟತ್ತಾಡಿ ಚರ್ಚ್ ನಲ್ಲಿ ಯುವಕರಿಂದ ತಯಾರಿಸಲ್ಪಟ್ಟ ೨೨ ಅಡಿ ಎತ್ತರದ ಕ್ರಿಸ್‌ಮಸ್ ನಕ್ಷತ್ರ

Suddi Udaya
error: Content is protected !!