23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಚಾರ್ಮಾಡಿ ಗ್ರಾಮ ಪಂಚಾಯತ್‌ನಲ್ಲಿ ಮಕ್ಕಳ ಗ್ರಾಮ ಸಭೆ

ಚಾರ್ಮಾಡಿ: ಚಾರ್ಮಾಡಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಸರಕಾರಿ ಪ್ರೌಢಶಾಲೆ ಕಕ್ಕಿಂಜೆಯಲ್ಲಿ ಜ.14 ರಂದು ಚಾರ್ಮಾಡಿ ಗ್ರಾಮ ಪಂಚಾಯತಿ ವತಿಯಿಂದ ಮಕ್ಕಳ ಗ್ರಾಮ ಸಭೆ ಯಶಸ್ವಿಯಾಗಿ ನಡೆಯಿತು. ಗ್ರಾಮ ಪಂಚಾಯತ್ ಅಧ್ಯಕ್ಷೆ ಶಾರದ ಅವರ ಮಾರ್ಗದರ್ಶನದಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಅವರು ಸಭೆಯನ್ನು ನಿರ್ವಹಿಸಿದರು. ಪಂಚಾಯತ್ ಸದಸ್ಯ ಅಬ್ದುಲ್ ರಹಿಮಾನ್ ಉಪಸ್ಥಿತರಿದ್ದರು.

ಚಾರ್ಮಾಡಿ, ಅಣಿಯೂರು, ಕಕ್ಕಿಂಜೆ, ತೋಟತ್ತಾಡಿ, ಪೆರಿಯಡ್ಕ ಹಾಗೂ ಕಕ್ಕಿಂಜೆ ಸರಕಾರಿ ಪ್ರೌಢಶಾಲೆಗಳ ನೂರಕ್ಕೂ ಅಧಿಕ ವಿದ್ಯಾರ್ಥಿಗಳು ಸಭೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದರು. ಮಕ್ಕಳ ಹಕ್ಕುಗಳು ಹಾಗೂ ಪೋಕ್ಸೋ ಕಾಯಿದೆ ಕುರಿತು ಮಂಗಳೂರಿನ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಯಶೋದ ಅವರು ಮಾಹಿತಿ ನೀಡಿದರು. ಮಕ್ಕಳ ಸುರಕ್ಷತೆ, ಮಕ್ಕಳ ಹಕ್ಕುಗಳ ಕ್ಲಬ್, ಪಂಚಾಯತಿಯಿಂದ ಮಕ್ಕಳಿಗೆ ದೊರೆಯುವ ಸವಲತ್ತುಗಳು ಕುರಿತು ವಿವರಿಸಲಾಯಿತು. ವಿವಿಧ ಶಾಲೆಗಳ ವಿದ್ಯಾರ್ಥಿಗಳ ಅಹವಾಲುಗಳನ್ನು ಚರ್ಚಿಸಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಂದ ಸೂಕ್ತ ಸ್ಪಂದನೆ ದೊರಕುವಂತೆ ಸಂಪನ್ಮೂಲ ವ್ಯಕ್ತಿ ವಿನೋದ್ ನೆರವೇರಿಸಿದರು.

ಸಭೆಯಲ್ಲಿ ಮುಖ್ಯವಾಗಿ ಶಾಲಾ ಕಟ್ಟಡಗಳು ಹಾಗೂ ಮೈದಾನದೊಳಗಿನ ಅನಧಿಕೃತ ಅತಿಕ್ರಮಣ, ಕಂಪೌಂಡ್ ನಿರ್ಮಾಣ, ಶಾಲಾ ಸೌಂದರೀಕರಣ, ಬೀದಿನಾಯಿಗಳಿಂದ ರಕ್ಷಣೆ, ಮನೆಗಳಲ್ಲಿ ವಿದ್ಯುತ್ ಸೌಲಭ್ಯ ಇಲ್ಲದೆ ಓದಲು ಎದುರಾಗುವ ಸಮಸ್ಯೆ, ಶಾಲೆಗಳಿಗೆ ಕಸ ವಿಲೇವಾರಿ ವಾಹನ ಬಾರದಿರುವುದು, ಬ್ಯಾಂಡ್ ಸೆಟ್ ಹಾಗೂ ಸ್ಕೌಟ್ಸ್–ಗೈಡ್ಸ್ ಸಮವಸ್ತ್ರ ಒದಗಿಸುವುದು, ಶೌಚಾಲಯಕ್ಕೆ ಇನ್ಸಿನರೇಟರ್ ವ್ಯವಸ್ಥೆ, ರಸ್ತೆ ರಿಪೇರಿ, ಶಾಲೆಗೆ ಗೈರು ಹಾಜರಾಗುತ್ತಿರುವ ಮಕ್ಕಳ ಸಮಸ್ಯೆ, ಶಾಲಾ ಸಮೀಪದ ಅಂಗಡಿಗಳಲ್ಲಿ ಮಾದಕ ವಸ್ತು ಮಾರಾಟ ನಿಷೇಧಿಸುವ ಕುರಿತು ವಿದ್ಯಾರ್ಥಿಗಳು ತಮ್ಮ ದೂರುಗಳನ್ನು ಸಲ್ಲಿಸಿದರು.

ಕೆಲವು ಸಮಸ್ಯೆಗಳಿಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ತಕ್ಷಣ ಸ್ಪಂದಿಸಿದ್ದು, ಉಳಿದ ಬೇಡಿಕೆಗಳಿಗೆ ಹಂತಹಂತವಾಗಿ ಪರಿಹಾರ ಒದಗಿಸುವುದಾಗಿ ಭರವಸೆ ನೀಡಿದರು. ಸಭೆಯಲ್ಲಿ ವಿವಿಧ ಅಂಗನವಾಡಿ ಕೇಂದ್ರಗಳ ಕಾರ್ಯಕರ್ತೆಯರು ಭಾಗವಹಿಸಿದ್ದರು.

ಸರಕಾರಿ ಪ್ರೌಢಶಾಲೆ ಕಕ್ಕಿಂಜೆಯ ಶಾಲಾ ನಾಯಕಿ ಕುಮಾರಿ ನಿಕಿತ ಅಧ್ಯಕ್ಷೀಯ ಭಾಷಣ ಮಾಡಿದರು. ಸರಕಾರಿ ಪ್ರೌಢಶಾಲೆ ಕಕ್ಕಿಂಜೆಯ ಮುಖ್ಯ ಶಿಕ್ಷಕರಾದ ಶಂಭು ಶಂಕರ್ ವಂದಿಸಿದರು. ಸಭೆಯ ಯಶಸ್ಸಿಗೆ ಗ್ರಂಥ ಪಾಲಕಿ ಶ್ರೀಮತಿ ಜ್ಯೋತಿ, ಲೆಕ್ಕ ಪರಿಶೋಧಕರಾದ ಸಂಜೀವ, ಗ್ರಾಮ ಪಂಚಾಯತಿ ಸಿಬ್ಬಂದಿ ವರ್ಗ ಹಾಗೂ ಶಿಕ್ಷಕರು ಸಹಕರಿಸಿದರು.

Related posts

ಕಳೆ ತೆಗೆಯುವ ಯಂತ್ರಕ್ಕೆ ಸಿಲುಕಿ ಎದೆಗೆ ಬಡಿದ ರಬ್ಬರ್ ಕಪ್‌ನ ಸರಿಗೆ: ಕಾಯರ್ತಡ್ಕ ನಿವಾಸಿ ಕೊರಗಪ್ಪ ಗೌಡ ಸಾವು

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆ

Suddi Udaya

ಎನ್ನೆಸ್ಸೆ ಸ್: ಉಜಿರೆ ಶ್ರೀ ಧ. ಮಂ.ಪ.ಪೂ. ಕಾಲೇಜಿನ ಸುದರ್ಶನ್ ನಾಯಕ್ ಗೆ ಉತ್ತಮ ಪರ್ಫಾರ್ಮರ್ ಪ್ರಶಸ್ತಿ

Suddi Udaya

ಎಕ್ಸೆಲ್ : ವಾಣಿಜ್ಯ ವಿಭಾಗದ ಅಧ್ಯಯನ ಸಾಮಾಗ್ರಿ ಲೋಕಾರ್ಪಣೆ

Suddi Udaya

ಕನ್ಯಾಡಿ ಗುರುದೇವ ಮಠದಲ್ಲಿ ಶಾಸಕ ಹರೀಶ್ ಪೂಂಜರಿಂದ ಸ್ವಾಮೀಜಿಯವರ ಪಾದ ಪೂಜೆ

Suddi Udaya

ಪೆರಿಂಜೆ ಎನ್ನೆನ್ನೆಸ್ ಶಿಬಿರಕ್ಕೆ ವಿಭಾಗಾಧಿಕಾರಿ ಭೇಟಿ

Suddi Udaya
error: Content is protected !!