22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿ

ಚೂಪಾದ ಆಯುಧಗಳಿಂದ ಆಗಿರುವ ಗಾಯ ಅಲ್ಲ ಓಡಿಲ್ನಾಳ ಸಂಬೋಳ್ಯದ ಸುಮಂತ್‌ ಶವದ ಪರೀಕ್ಷಾ ವರದಿ: ಅಸಹಜ ಸಾವು ಪ್ರಕರಣವನ್ನು ಕೊಲೆ ಪ್ರಕರಣವಾಗಿ ಪರಿವರ್ತಿಸಿ ತನಿಖೆ ನಡೆಸಲಾಗುತ್ತಿದೆ: ದ.ಕ ಎಸ್.ಪಿ

ಬೆಳ್ತಂಗಡಿ: ಜ. 14 ರಂದು ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಓಡಿಲ್ನಾಳ ಗ್ರಾಮದ ಸಂಬೋಳ್ಯದ ಪ್ರಕರಣದಲ್ಲಿ ಮೃತ ಸುಮಂತ್‌ (15)ರವರ ಶವಪರೀಕ್ಷೆಯ ನಂತರ ಬಂದ ಪ್ರಾಥಮಿಕ ವರದಿಯ ಪ್ರಕಾರ, ಹುಡುಗನು ಕೆರೆಯಲ್ಲಿ ಮುಳುಗುವ ಸಮಯದಲ್ಲಿ ಜೀವಂತನಾಗಿದ್ದನು ಮತ್ತು ತಕ್ಷಣದ ಸಾವಿನ ಕಾರಣ ಮುಳುಗು ಸಾವಾಗಿರುತ್ತದೆ ಎಂದು ಬಂದಿದೆ ಎಂದು ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹೇಳಿಕೆ ನೀಡಿದ್ದಾರೆ.

ಪ್ರಾಥಮಿಕ ವರದಿ ತಲೆಯ ಮೇಲಿನ ಗಾಯಗಳು ಮಂದ ಬಲದ ಗಾಯ (Blunt injury) ಉಂಟಾಗಿವೆ ಮತ್ತು ಯಾವುದೇ ಚೂಪಾದ (Sharp) ಆಯುಧಗಳಿಂದ ಆಗಿರುವ ಗಾಯ ಅಲ್ಲ ಎಂದು ತಿಳಿದುಬಂದಿರುತ್ತದೆ. ಆದರೆ ತಲೆಯ ಮೇಲಿನ ಗಾಯಗಳ ಬಗ್ಗೆ ಸಮರ್ಪಕವಾದ ವಿವರಣೆ ದೊರಕಿಲ್ಲ. ಆದ್ದರಿಂದ ಸಮಗ್ರ ಹಾಗೂ ಸೂಕ್ಷ್ಮ ತನಿಖೆ ನಡೆಸುವ ಉದ್ದೇಶದಿಂದ ಈ ಅಸಹಜ ಸಾವು ಪ್ರಕರಣವನ್ನು ಕೊಲೆ ಪ್ರಕರಣವಾಗಿ ಪರಿವರ್ತಿಸಿ ತನಿಖೆ ನಡೆಸಲಾಗುತ್ತಿದೆ . ಈ ಪ್ರಕರಣದ ಸಮಗ್ರ ತನಿಖೆಗಾಗಿ ಬೆಳ್ತಂಗಡಿ ಡಿಎಸ್‌ಪಿ ರವರ ನೇತೃತ್ವದಲ್ಲಿ ನಾಲ್ಕು ತಂಡಗಳನ್ನು ರಚಿಸಲಾಗಿದೆ.ಎಂದು ತಿಳಿಸಿದ್ದಾರೆ.

Related posts

ಉಜಿರೆ ಮಾಚಾರು ಜಾತಿ ನಿಂದನೆ ಮಾಡಿ ಹಲ್ಲೆ ಆರೋಪ: ಯುವಕ ಆಸ್ಪತ್ರೆಗೆ ದಾಖಲು

Suddi Udaya

ನಕ್ಸಲ್ ನಾಯಕ ರೂಪೇಶ್ ಪೊಲೀಸ್ ಕಸ್ಟಡಿ ಅಂತ್ಯ ಬೆಳ್ತಂಗಡಿ ನ್ಯಾಯಾಲಯಗೆ ಹಾಜರುಪಡಿಸಿ ಮತ್ತೆ ಕೇರಳ ಜೈಲಿಗೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಿರುವ ದೂರು ನೀಡಿದ್ದ ಪ್ರಕರಣ ಸಾಕ್ಷಿ ದೂರುದಾರರ ಗುರುತನ್ನು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗಪಡಿಸಿದ ಹಿನ್ನೆಲೆ ಬಂಟ್ವಾಳ ಪೊಲೀಸ್ ಉಪಾಧೀಕ್ಷಕರಿಂದ ಇನ್ನೊಂದು ವಿಚಾರಣೆ ಪ್ರಾರಂಭ

Suddi Udaya

ಬೆಳಾಲು ಪ್ಯಾಕ್ಸ್: ಆರ್ಥಿಕ ಅವ್ಯವಹಾರ ಪ್ರಕರಣಎರಡನೇ ಆರೋಪಿ ಪ್ರಶಾಂತ್ ಬಂಧನ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಅವಮಾನಕಾರಿ‌ ಸಂದೇಶಗಳ ಪೋಸ್ಟ್ : ಬೆಳ್ತಂಗಡಿ ಹಾಗೂ ವೇಣೂರು ಠಾಣೆಯಲ್ಲಿ 6 ಪ್ರಕರಣ ದಾಖಲು

Suddi Udaya

ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಆರೋಪಿ ಪುದುವೆಟ್ಟುವಿನ ಯುವಕನ ಬಂಧನ

Suddi Udaya
error: Content is protected !!