22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧನು ಪೂಜೆಗೆ ಹೋದ ಬಾಲಕನ ಶವ ಕೆರೆಯಲ್ಲಿ ಪತ್ತೆ ಪ್ರಕರಣ: ಕೆರೆಯ ನೀರು ಖಾಲಿ ಮಾಡಿ ತನಿಖೆ – ಟಾರ್ಚ್ ಲೈಟ್ ಪತ್ತೆ: ಪೊಲೀಸರಿಂದ ತೀವ್ರಗೊಂಡ ಶೋಧ ಕಾರ್ಯ

ಬೆಳ್ತಂಗಡಿ : ನಾಳ ದೇವಸ್ಥಾನಕ್ಕೆ ಧನುಪೂಜೆಗೆ ಮನೆಯಿಂದ ಜ‌.14 ರಂದು 5 ಗಂಟೆಗೆ ಹೊರಟು ಹೋದ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ಗ್ರಾಮದ ಸಂಬೋಳ್ಯ ನಿವಾಸಿ ಸುಬ್ರಹ್ಮಣ್ಯ ನಾಯಕ್ ಪುತ್ರ ಬಾಲಕ ಸುಮಂತ್(15) ಎಂಬಾತ ದೇವಸ್ಥಾನಕ್ಕೂ ತಲುಪದೆ ಮನೆಗೂ ವಾಪಾಸು ಹೋಗದೆ ನಾಪತ್ತೆಯಾಗಿ ಆತನ ಮೃತದೇಹ ಮನೆಯ ಸಮೀಪದ ಕೆರೆಯಲ್ಲಿ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೆರೆಯ ನೀರನ್ನು ಖಾಲಿ ಮಾಡಿ ತನಿಖೆ ನಡೆಸಿದ ವೇಳೆ ನೀಲಿ ಬಣ್ಣದ ಟಾರ್ಚ್ ಲೈಟ್ ಪತ್ತೆಯಾಗಿದೆ.

ಇದರೊಂದಿಗೆ ಕೆರೆಯಲ್ಲಿ ಹಳೆಯ ತುಕ್ಕು ಹಿಡಿದ ಕತ್ತಿಯೊಂದು ಪತ್ತೆಯಾಗಿದೆ. ಪೋಲಿಸ್ ನಿರೀಕ್ಷಕ ಸುಬ್ಬಪುರ್ ಮಠ ಹಾಗೂ ಎಸ್ ಐ ಆನಂದ ನೇತೃತ್ವದ ತಂಡ ಪತ್ತೆ ಹಚ್ಚಿದೆ. ಈ ಬಗ್ಗೆ ಸೋಕೋ ತಂಡ ಪರಿಶೀಲನೆ ನಡೆಸಿ ವರದಿ ನೀಡಲಿದೆ‌. ಟಾರ್ಚ್ ಲೈಟ್ ಬಾಲಕ ಸುಮಂತ್ ಹಿಡಿದುಕೊಂಡು ಹೋಗಿದ್ದ ಲೈಟ್ ಆಗಿದೆಯೇ ಎಂಬ ಸಂಶಯ ಇದೆ. ಪೋಲಿಸರು ಮತ್ತಷ್ಟು ತನಿಖೆಯನ್ನು ಬಿರುಸುಗೊಳಿಸಿದ್ದಾರೆ.

Related posts

ಧರ್ಮಸ್ಥಳದ ಯುವಕರು ನಟಿಸಿರುವ “ತೀರ್ಪು” ಚಿತ್ರದ ಮುಹೂರ್ತ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಸ್ಪಂದನಾ ಸೇವಾ ಸಂಘದ 116ನೇ ಸೇವಾ ಯೋಜನೆಯ ಧನಸಹಾಯ ವಿತರಣೆ

Suddi Udaya

ಬೆಳ್ತಂಗಡಿ: ಸಂತ ಅಲ್ಫೋನ್ಸ ಮಿಷನ್ ಲೀಗ್ ವತಿಯಿಂದ ರೂ. 75 ಸಾವಿರ ಚೆಕ್ ಹಸ್ತಾಂತರ

Suddi Udaya

ಗುಂಡೂರಿ ಅಂಗನವಾಡಿ ಕೇಂದ್ರದಲ್ಲಿ ಪೌಷ್ಠಿಕ ಆಹಾರ ಶಿಬಿರ

Suddi Udaya

ಬೆಳ್ತಂಗಡಿ ಸಂಚಾರಿ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಕಿಶೋರ್ ಪಿ ಅಧಿಕಾರ ಸ್ವೀಕಾರ

Suddi Udaya
error: Content is protected !!