23.7 C
ಪುತ್ತೂರು, ಬೆಳ್ತಂಗಡಿ
April 24, 2026
ಪ್ರಮುಖ ಸುದ್ದಿಬೆಳ್ತಂಗಡಿವರದಿ

ಪಡ್ಡಂದಡ್ಕ ಕಟ್ಟೆ: ಪುನಃ ಪ್ರತಿಷ್ಠಾ ಕಲಶಾಭಿಷೇಕ, ದೊಂಪದಬಲಿ ನೇಮೋತ್ಸವ

ವೇಣೂರು: ಐದು ಗ್ರಾಮಗಳಿಗೆ ಸಂಬಂಧಿಸಿದ ಶ್ರೀ ದೈವ, ಶ್ರೀ ಕೊಡಮಣಿತ್ತಾಯ ಹಾಗೂ ಪರಿವಾರ ಸಾನಿಧ್ಯ ಪಡ್ಡಂದಡ್ಕದ ಗಡುಸ್ಥಳ ಕಟ್ಟೆಯಲ್ಲಿ ಪುನಃ ಪ್ರತಿಷ್ಠಾ ಕಲಶಾಭಿಷೇಕ, ಪರ್ವಸೇವೆ ಹಾಗೂ ದೊಂಪದಬಲಿ ನೇಮೋತ್ಸವವು ವೇ.ಮೂ. ಮಾರೂರು ಖಂಡಿಗದ ರಾಮದಾಸ ಅಸ್ರಣ್ಣರ ಪೌರೋಹಿತ್ಯದಲ್ಲಿ ವಿಜ್ರಂಭನೆಯಿಂದ ಜರಗಿತು.

ಪೆರಿಂಜೆ ರಾಜ್ಯಗುತ್ತು, ಕರಿಮಣೇಲು ಮಾಗಣೆಗುತ್ತು, ಬಡಕೋಡಿ ಗುತ್ತು, ಪಡ್ಯೋಡಿಗುತ್ತು, ಮೂಡುಕೋಡಿಗುತ್ತು ಜೀಣೋದ್ದಾರ ಸಮಿತಿಯ ಅಧ್ಯಕ್ಷರಾದ ಜಿನರಾಜ್ ಜೈನ್ ಪದ್ಮಾಂಬ ಹಾಗೂ ಐದು ಗ್ರಾಮಗಳ ಬರ್ಕೆಯವರು ಉಪಸ್ಥಿತಿಯಲ್ಲಿ ಬೆಳಿಗ್ಗೆ ಧರ್ಮದೈವಗಳ ಪ್ರತಿಷ್ಠೆ, ಕಲಶಾಭಿಷೇಕ, ಪರ್ವಸೇವೆ ನಡೆಯಿತು.

ಸಂಜೆ ನವಕ ಕಲಶಾಭಿಷೇಕ, ವಿವಿಧ ಗುತ್ತುಗಳಿಂದ ಭಂಡಾರ ಬಂದು ಶ್ರೀ ದೈವ, ಶ್ರೀ ಕೊಡಮಣಿತ್ತಾಯ, ಶ್ರೀ ಕಲ್ಕುಡ ಕಲ್ಲುರ್ಟಿ, ಕಾಳಮ್ಮ ದೈವಗಳ ಬಲಿ ನೇಮ ನಡೆಯಿತು. ವಿವಿಧ ಗ್ರಾಮಗಳ ಸಾವಿರಾರು ಭಕ್ತರು ಆಗಮಿಸಿ ಗಂಧಪ್ರಸಾದ ಸ್ವೀಕರಿಸಿದರು. ಸಾಯಂಕಾಲ ಸಾರ್ವಜಕರಿಗೆ ಉಪಹಾರ ಹಾಗೂ ಅನ್ನ ಸಂತರ್ಪಣೆಯ ವ್ಯವಸ್ಥೆ ಕಲ್ಪಿಸಲಾಗಿತ್ತು.

Related posts

ಹತ್ಯಡ್ಕ: ತುಂಬೆತಡ್ಕ ರಾಣಿಯಾರ್ ಸಮಾಜ ಸೇವಾ ಸಂಘದಿಂದ “ಸ್ವಚ್ಛ ಭಾರತ ಅಭಿಯಾನ ” ಪ್ರಯುಕ್ತ ಸ್ವಚ್ಛತಾ ಕಾರ್ಯ

Suddi Udaya

ನಿಡ್ಲೆ: ನಾಟಿ ವೈದ್ಯ ಬಾಬು ನಿಧನ

Suddi Udaya

ಕರ್ನಾಟಕ ಮುಸ್ಲಿಂ ಜಮಾಅತ್ ಉಜಿರೆ ಸರ್ಕಲ್ ವತಿಯಿಂದ “ಸ್ವಾತಂತ್ರ್ಯ ಸಂಗಮ” ಕಾರ್ಯಕ್ರಮ

Suddi Udaya

ಗಾಳಿ ಮಳೆಗೆ ಕೂತ್ರೋಟ್ಟು ನಿವಾಸಿ ಗಿರಿಜಾ ಅವರ ಮನೆಗೆ ಮರ ಬಿದ್ದು ಹಾನಿ

Suddi Udaya

ಮೇ 22: ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢಕಲಶ

Suddi Udaya

ಗುರುವಾಯನಕೆರೆ – ಉಪ್ಪಿನಂಗಡಿ ಮುಖ್ಯ ರಸ್ತೆಯ ಕುಲಾಲ ಮಂದಿರದ ಬಳಿ ಬೃಹತ್ ಮರಗಳು ರಸ್ತೆಯ ಅಂಚಿನಲ್ಲಿದ್ದು ತೆರವುಗೊಳಿಸುವಂತೆ ಹರೀಶ್ ಕಾರಿಂಜ ಒತ್ತಾಯ

Suddi Udaya
error: Content is protected !!