23.7 C
ಪುತ್ತೂರು, ಬೆಳ್ತಂಗಡಿ
April 24, 2026
ಪ್ರಮುಖ ಸುದ್ದಿಬೆಳ್ತಂಗಡಿವರದಿ

ಪಡ್ಡಂದಡ್ಕ ಕಟ್ಟೆ: ಪುನಃ ಪ್ರತಿಷ್ಠಾ ಕಲಶಾಭಿಷೇಕ, ದೊಂಪದಬಲಿ ನೇಮೋತ್ಸವ

ವೇಣೂರು: ಐದು ಗ್ರಾಮಗಳಿಗೆ ಸಂಬಂಧಿಸಿದ ಶ್ರೀ ದೈವ, ಶ್ರೀ ಕೊಡಮಣಿತ್ತಾಯ ಹಾಗೂ ಪರಿವಾರ ಸಾನಿಧ್ಯ ಪಡ್ಡಂದಡ್ಕದ ಗಡುಸ್ಥಳ ಕಟ್ಟೆಯಲ್ಲಿ ಪುನಃ ಪ್ರತಿಷ್ಠಾ ಕಲಶಾಭಿಷೇಕ, ಪರ್ವಸೇವೆ ಹಾಗೂ ದೊಂಪದಬಲಿ ನೇಮೋತ್ಸವವು ವೇ.ಮೂ. ಮಾರೂರು ಖಂಡಿಗದ ರಾಮದಾಸ ಅಸ್ರಣ್ಣರ ಪೌರೋಹಿತ್ಯದಲ್ಲಿ ವಿಜ್ರಂಭನೆಯಿಂದ ಜರಗಿತು.

ಪೆರಿಂಜೆ ರಾಜ್ಯಗುತ್ತು, ಕರಿಮಣೇಲು ಮಾಗಣೆಗುತ್ತು, ಬಡಕೋಡಿ ಗುತ್ತು, ಪಡ್ಯೋಡಿಗುತ್ತು, ಮೂಡುಕೋಡಿಗುತ್ತು ಜೀಣೋದ್ದಾರ ಸಮಿತಿಯ ಅಧ್ಯಕ್ಷರಾದ ಜಿನರಾಜ್ ಜೈನ್ ಪದ್ಮಾಂಬ ಹಾಗೂ ಐದು ಗ್ರಾಮಗಳ ಬರ್ಕೆಯವರು ಉಪಸ್ಥಿತಿಯಲ್ಲಿ ಬೆಳಿಗ್ಗೆ ಧರ್ಮದೈವಗಳ ಪ್ರತಿಷ್ಠೆ, ಕಲಶಾಭಿಷೇಕ, ಪರ್ವಸೇವೆ ನಡೆಯಿತು.

ಸಂಜೆ ನವಕ ಕಲಶಾಭಿಷೇಕ, ವಿವಿಧ ಗುತ್ತುಗಳಿಂದ ಭಂಡಾರ ಬಂದು ಶ್ರೀ ದೈವ, ಶ್ರೀ ಕೊಡಮಣಿತ್ತಾಯ, ಶ್ರೀ ಕಲ್ಕುಡ ಕಲ್ಲುರ್ಟಿ, ಕಾಳಮ್ಮ ದೈವಗಳ ಬಲಿ ನೇಮ ನಡೆಯಿತು. ವಿವಿಧ ಗ್ರಾಮಗಳ ಸಾವಿರಾರು ಭಕ್ತರು ಆಗಮಿಸಿ ಗಂಧಪ್ರಸಾದ ಸ್ವೀಕರಿಸಿದರು. ಸಾಯಂಕಾಲ ಸಾರ್ವಜಕರಿಗೆ ಉಪಹಾರ ಹಾಗೂ ಅನ್ನ ಸಂತರ್ಪಣೆಯ ವ್ಯವಸ್ಥೆ ಕಲ್ಪಿಸಲಾಗಿತ್ತು.

Related posts

ನಡ: ಸ್ಟಾರ್ ಲೈನ್ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ ” ಫಿಟ್ ಫೆಸ್ಟ್ 2024 “

Suddi Udaya

ಮಹಾವೀರ ಜಯಂತಿ ರಜೆ ಹಿನ್ನಲೆ ಮಾ.30ರಂದು ನಡೆಯಬೇಕಾಗಿದ್ದ ಎಸ್ಸೆಸ್ಸೆಲ್ಸಿ ತೃತೀಯ ಭಾಷೆ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ

Suddi Udaya

ಗುಂಡೂರಿ ಸ.ಕಿ.ಪ್ರಾ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ಕಾರ್ಯದ ಮನೆಮನೆ ಸಂಪರ್ಕದ ಪ್ರಯುಕ್ತ ಶ್ರೀರಾಮ ಕ್ಷೇತ್ರದ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಭೇಟಿ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಶಿವನ ಸನ್ನಿಧಿಗೆ ಹರಿದು ಬಂದ ಬೃಹತ್ ಹಸಿರುವಾಣಿ ಹೊರೆಕಾಣಿಕೆ, ಪ್ರಗತಿಪರ ಕೃಷಿಕ ಸಂತೋಷ್ ಕುಮಾರ್ ಕಾಪಿನಡ್ಕ ರವರಿಂದ ಉಗ್ರಾಣ ಮುಹೂರ್ತ

Suddi Udaya

ಕಲ್ಮಂಜ ಸರಕಾರಿ ಪ್ರೌಢ ಶಾಲೆಯ ನೂತನ ಸಭಾಂಗಣಕ್ಕೆ ಶಿಲಾನ್ಯಾಸ

Suddi Udaya
error: Content is protected !!