July 23, 2026
ಪ್ರಮುಖ ಸುದ್ದಿಬೆಳ್ತಂಗಡಿವರದಿ

ಪಡ್ಡಂದಡ್ಕ ಕಟ್ಟೆ: ಪುನಃ ಪ್ರತಿಷ್ಠಾ ಕಲಶಾಭಿಷೇಕ, ದೊಂಪದಬಲಿ ನೇಮೋತ್ಸವ

ವೇಣೂರು: ಐದು ಗ್ರಾಮಗಳಿಗೆ ಸಂಬಂಧಿಸಿದ ಶ್ರೀ ದೈವ, ಶ್ರೀ ಕೊಡಮಣಿತ್ತಾಯ ಹಾಗೂ ಪರಿವಾರ ಸಾನಿಧ್ಯ ಪಡ್ಡಂದಡ್ಕದ ಗಡುಸ್ಥಳ ಕಟ್ಟೆಯಲ್ಲಿ ಪುನಃ ಪ್ರತಿಷ್ಠಾ ಕಲಶಾಭಿಷೇಕ, ಪರ್ವಸೇವೆ ಹಾಗೂ ದೊಂಪದಬಲಿ ನೇಮೋತ್ಸವವು ವೇ.ಮೂ. ಮಾರೂರು ಖಂಡಿಗದ ರಾಮದಾಸ ಅಸ್ರಣ್ಣರ ಪೌರೋಹಿತ್ಯದಲ್ಲಿ ವಿಜ್ರಂಭನೆಯಿಂದ ಜರಗಿತು.

ಪೆರಿಂಜೆ ರಾಜ್ಯಗುತ್ತು, ಕರಿಮಣೇಲು ಮಾಗಣೆಗುತ್ತು, ಬಡಕೋಡಿ ಗುತ್ತು, ಪಡ್ಯೋಡಿಗುತ್ತು, ಮೂಡುಕೋಡಿಗುತ್ತು ಜೀಣೋದ್ದಾರ ಸಮಿತಿಯ ಅಧ್ಯಕ್ಷರಾದ ಜಿನರಾಜ್ ಜೈನ್ ಪದ್ಮಾಂಬ ಹಾಗೂ ಐದು ಗ್ರಾಮಗಳ ಬರ್ಕೆಯವರು ಉಪಸ್ಥಿತಿಯಲ್ಲಿ ಬೆಳಿಗ್ಗೆ ಧರ್ಮದೈವಗಳ ಪ್ರತಿಷ್ಠೆ, ಕಲಶಾಭಿಷೇಕ, ಪರ್ವಸೇವೆ ನಡೆಯಿತು.

ಸಂಜೆ ನವಕ ಕಲಶಾಭಿಷೇಕ, ವಿವಿಧ ಗುತ್ತುಗಳಿಂದ ಭಂಡಾರ ಬಂದು ಶ್ರೀ ದೈವ, ಶ್ರೀ ಕೊಡಮಣಿತ್ತಾಯ, ಶ್ರೀ ಕಲ್ಕುಡ ಕಲ್ಲುರ್ಟಿ, ಕಾಳಮ್ಮ ದೈವಗಳ ಬಲಿ ನೇಮ ನಡೆಯಿತು. ವಿವಿಧ ಗ್ರಾಮಗಳ ಸಾವಿರಾರು ಭಕ್ತರು ಆಗಮಿಸಿ ಗಂಧಪ್ರಸಾದ ಸ್ವೀಕರಿಸಿದರು. ಸಾಯಂಕಾಲ ಸಾರ್ವಜಕರಿಗೆ ಉಪಹಾರ ಹಾಗೂ ಅನ್ನ ಸಂತರ್ಪಣೆಯ ವ್ಯವಸ್ಥೆ ಕಲ್ಪಿಸಲಾಗಿತ್ತು.

Related posts

ತೆಂಕಕಾರಂದೂರು ಶ್ರೀ ವಿಷ್ಣು ಮೂರ್ತಿ ದೇವಸ್ಥಾನದ ಆಡಳಿತ ಮೊಕ್ತೇಸರ ಕೃಷ್ಣ ಸಂಪಿಗೆತ್ತಾಯರಿಗೆ ಸನ್ಮಾನ

Suddi Udaya

ಕಳಿಯ ಸಹಕಾರಿ ಸಂಘದ ನೂತನ ಗೋದಾಮು ಕಟ್ಟಡ ಉದ್ಘಾಟನೆ: ರೈತಾಪಿ ಸದಸ್ಯರಿಗೆ ಉಚಿತ ಮೈಲುತುತ್ತು ವಿತರಣೆ: ಶಾಸಕ ಹರೀಶ್ ಪೂಂಜ ಮತ್ತು ಡಾ. ಎಂ.ಎನ್ ರಾಜೇಂದ್ರ ಕುಮಾರ್ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಶ್ರೀಲಂಕಾದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಾದರಿ ಅನುಷ್ಠಾನಕ್ಕೆ ಪೂಣ೯ ಸಹಕಾರ: ಡಾ. ಹೆಗ್ಗಡೆ

Suddi Udaya

ಡಾ.ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್

Suddi Udaya

ವರ್ಷ ಕಳೆದರೂ ಇನ್ನೂ ಜನರಿಗೆ ಉಪಯೋಗಕಿಲ್ಲದ ಮಚ್ಚಿನ ಶುದ್ಧ ಕುಡಿಯುವ ನೀರಿನ ಘಟಕ: ತುಕ್ಕು ಹಿಡಿಯುತ್ತಿರುವ ಮಿಷನರಿಗಳು

Suddi Udaya

ಉಜಿರೆಯ ವ್ಯಾಯಾಮ್ ಮಲ್ಟಿ ಜಿಮ್ ನಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya
error: Content is protected !!