22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ ಯಶಸ್ವಿ ವಾರ್ಷಿಕ ಜಾತ್ರಾ ಮಹೋತ್ಸವದ ಅಭಿನಂದನಾ ಕಾರ್ಯಕ್ರಮ, ಶ್ರೀ ದೇವರಿಗೆ ದೀಪಾಲಂಕಾರ ರಂಗಪೂಜೆ

ಬೆಳಾಲು : ಶ್ರೀ ಅನಂತಪದ್ಮನಾಭ ದೇವಸ್ಥಾನ ಜಾತ್ರೋತ್ಸವ ಯಶಸ್ವಿಯ ಬಗ್ಗೆ ಅಭಿನಂದನಾ ಕಾರ್ಯಕ್ರಮ ಹಾಗೂ ಲೆಕ್ಕಪತ್ರ ಮಂಡನೆ. ಜ.14 ರಂದು ಮಕರ ಸಂಕ್ರಾಂತಿಯ ದಿನ ಶ್ರೀ ಕ್ಷೇತ್ರದ ವಠಾರದಲ್ಲಿ ನೆರವೇರಿತು.

ಸಭಾಧ್ಯಕ್ಷತೆಯನ್ನು ಜಾತ್ರೋತ್ಸವ ಸಮಿತಿಯ ಪ್ರಧಾನ ಸಂಚಾಲಕರಾದ ಲಿಂಗಪ್ಪ ಪೂಜಾರಿ ಬನಂದೂರು ಇವರು ವಹಿಸಿಕೊಂಡರು. ಅಭಿನಂದನಾ ಭಾಷಣಗಾರರಾಗಿ ಶ್ರೀಮತಿ ವಿಜಯ ಮುಖ್ಯೋಪಾಧ್ಯಾಯಿನಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಪೆರಿಯಡ್ಕ ಇವರು ದೇವಸ್ಥಾನದ ಸ್ವಚ್ಛತೆ ಅಚ್ಚುಕಟ್ಟುತನ ಜಾತ್ರಾ ಮಹೋತ್ಸವದ ಯಶಸ್ವಿಗೆ ಸೇವೆ ಸಲ್ಲಿಸಿದ ಎಲ್ಲಾ ಪದಾಧಿಕಾರಿಗಳಿಗೆ ಹಾಗೂ ಊರ ಸಮಸ್ತ ಭಕ್ತ ಬಾಂಧವರಿಗೆ ತುಂಬು ಹೃದಯದ ಅಭಿನಂದನೆಯನ್ನು ಸಲ್ಲಿಸಿದರು.

ದೇವಸ್ಥಾನದ ಪಾರದರ್ಶಕವಾದ ಲೆಕ್ಕಪತ್ರ ಮಂಡನೆಗೆ ಶ್ಲಾಘನೆ ವ್ಯಕ್ತಪಡಿಸಿ ದೇವಸ್ಥಾನವು ಜಿಲ್ಲೆಗೆ ಮಾದರಿ ದೇವಸ್ಥಾನ ಎಂದುಮೆಚ್ಚುಗೆ ವ್ಯಕ್ತ ಪಡಿಸಿದರು. ಈ ಸಂದರ್ಭದಲ್ಲಿ ಜಾತ್ರೋತ್ಸವ ಕಾರ್ಯಕ್ರಮವನ್ನು ಯಶಸ್ವಿಯಾಗಿ ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ಪ್ರಚಾರಪಡಿಸಿದ ಗಿರೀಶ್ ಗೌಡ.ಬಿ.ಕೆ ಕುಂಬುಡಂಗೆ -ಬಂದಾರು, ಕಾಮಗಾರಿ ಕೆಲಸದ ನಿರ್ವಹಣೆ ಮಾಡಿದ ಶ್ರೀ ಹರೀಶ್ ಮುಂಡೆತ್ಯಾರ್ , ನಾಟಿ ಹೂಗಳಿಂದ ಹೂಗುಚ್ಚಗಳ್ಳನ್ನು ನೀಡಿದ ಜ್ಞಾನವಿಕಾಸದ ಮಹಿಳೆಯರನ್ನು ಗೌರವಿಸಲಾಯಿತು. ಜಾತ್ರೆಯ ಶ್ರಮದಾನ ಸಂದರ್ಭದಲ್ಲಿ ಉಂಟಾದ ನೋವಿನ ಚಿಕಿತ್ಸೆಗೆ ರುಕ್ಮಯ ಗೌಡ ಏರ್ ದೊಟ್ಟು ಇವರಿಗೆ ಸಹಾಯ ಹಸ್ತವನ್ನು ನೀಡಲಾಯಿತು.

ವೇದಿಕೆಯಲ್ಲಿ ಕ್ಷೇತ್ರದ ಅಸ್ರಣ್ಣರಾದ ಗಿರೀಶ್ ಬಾರಿತಾಯ ಪಾರಲ, ವ್ಯವಸ್ಥಾಪನ ಸಮಿತಿಯ ಉಪಾಧ್ಯಕ್ಷರಾದ ಮಮತಾ ದಿನೇಶ್ ಪೂಜಾರಿ ಉಪ್ಪಾರು, ಮಹಿಳಾ ಸಮಿತಿಯ ಗೌರವಾಧ್ಯಕ್ಷರಾದ ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ, ಅನಂತೇಶ್ವರ ಭಜನಾ ಮಂಡಳಿಯ ಅಧ್ಯಕ್ಷರಾದ ಹರೀಶ್ ಪೋಸೊಟ್ಟು ಹಾಗೂ ಊರಿನ ಸಮಸ್ತ ಭಕ್ತಾದಿಗಳು ಉಪಸ್ಥಿತರಿದ್ದರು.

ವ್ಯವಸ್ಥಾಪನ ಸಮಿತಿಯ ಕಾರ್ಯದರ್ಶಿ ಸತೀಶ್ ಎಳ್ಳುಗದ್ದೆ ಸ್ವಾಗತಿಸಿ, ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಶ್ರೀನಿವಾಸ ಗೌಡ ವಕೀಲರು ಪ್ರಸ್ತಾವಿಕ ಮಾತುಗಳನ್ನಾಡಿದರು. ವ್ಯವಸ್ಥಾಪನ ಸಮಿತಿಯ ಪ್ರಧಾನ ಕಾರ್ಯದರ್ಶಿ ಶ್ರೀ ದುರ್ಗಾ ಪ್ರಸಾದ್ ಕೆರ್ಮುಣ್ಣಾಯ ಧನ್ಯವಾದವಿತ್ತರು, ಗಿರೀಶ್ ಮಂಜೊತ್ತು ಕಾರ್ಯಕ್ರಮವನ್ನು ನಿರೂಪಿಸಿದರು.

ಇದೇ ಸಂದರ್ಭದಲ್ಲಿ ಅನಂತೋಡಿ ಶ್ರೀ ಅನಂತೇಶ್ವರ ಫ್ರೆಂಡ್ಸ್ ಇವರ ನಿರ್ವಹಣೆಯಲ್ಲಿ ಶ್ರೀ ಬೆಂಕಿನಾಥೇಶ್ವರ ಕೃಪಾಪೋಷಿತ ದಶಾವತಾರ ಯಕ್ಷಗಾನ ಮಂಡಳಿ ಬಾಳ – ಕಳವಾರು ಇವರಿಂದ ನಾಗರ ಪಂಚಮಿ ಎಂಬ ತುಳು ಯಕ್ಷಗಾನ ಪ್ರದರ್ಶನ ನಡೆಯಿತು.

Related posts

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಎಸ್.ಡಿ.ಎಂ ಸ್ವಾಯತ್ತ ಕಾಲೇಜು : ವಿದ್ಯಾರ್ಥಿಗಳಿಂದ ಪ್ರಾಯೋಗಿಕ ‘ಮಾದರಿ ಸಂಸತ್ತು 2025 -26’

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ವೇಣೂರು ಭಗವಾನ್ ಶ್ರೀ ಬಾಹಬಲಿಯ ಮಹಾ ಮಜ್ಜನ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಹೆಗ್ಗಡೆ ಭೇಟಿ, ಅಟ್ಟಳಿಗೆ ಹಾಗೂ ಇತರ ಕಾಮಗಾರಿ ವೀಕ್ಷಣೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಗ್ಯಾರಂಟಿ ಅನುಷ್ಟಾನ ಸಮಿತಿ ಸಭೆ

Suddi Udaya

ಪಡಂಗಡಿ: ಪಾದಚಾರಿಗೆ ಕಾರು ಡಿಕ್ಕಿ : ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya
error: Content is protected !!