23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕರ ಸಂಕ್ರಾಂತಿ ಹಬ್ಬ ಆಚರಣೆ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಮಕರ ಸಂಕ್ರಾಂತಿ ಹಬ್ಬವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು.

ಈ ಹಬ್ಬದ ವಿಶೇಷ ಆಹಾರವಾದ ಎಳ್ಳು ಬೆಲ್ಲವನ್ನು ತಯಾರಿಸಿ ಎಲ್ಲರಿಗೂ ಹಂಚಲಾಯಿತು. ಸಾಂಪ್ರಾದಾಯಿಕ ಉಡುಗೆಗಳನ್ನು ಧರಿಸಿದ ಮಕ್ಕಳು ವಿಭಿನ್ನ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ಸಂಕ್ರಾಂತಿ ಹಬ್ಬದ ವಿಶೇಷತೆಯನ್ನು ಸಾನ್ವಿ ಎಸ್ ಬಂಗೇರ 8ನೇ ಮತ್ತು ಶ್ರೇಯಸ್ 9ನೇ ಇವರು ತಮ್ಮ ಭಾಷಣದ ಮೂಲಕ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳು ಮಕರ ಸಂಕ್ರಾಂತಿ ಪ್ರಯುಕ್ತ ತಯಾರಿಸಿದ ಭಿತ್ತಿ ಪತ್ರಿಕೆಗಳನ್ನು ಪ್ರದರ್ಶಿಸಲಾಯಿತು ಶಾಲಾ ಶಿಕ್ಷಕಿಯವರಾದ ಶ್ರೀಮತಿ ವಾಗ್ದೇವಿ ಮತ್ತು ಶ್ರೀಮತಿ ಪ್ರಮೀಳಾ ಎನ್ ರವರು ಕಾರ್ಯಕ್ರಮವನ್ನು ನಿರ್ವಹಿಸಿದರು.
ಶಾಲಾ ಮುಖ್ಯೋಪಾಧ್ಯಾಯಿನಿಯವರ ಸಲಹೆ, ಶಿಕ್ಷಕ ವೃಂದದವರ ಸಹಕಾರದೊಂದಿಗೆ ಕಾರ್ಯಕ್ರಮವು ಯಶಸ್ವಿಗೊಂಡಿತು.

Related posts

ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣವಚನ: ಗುರುವಾಯನಕೆರೆ ಪೇಟೆಯಲ್ಲಿ ಲ| ಹೇಮಂತ ರಾವ್ ಯರ್ಡೂರ್ ರಿಂದ ಚಹಾ ವಿತರಣೆ

Suddi Udaya

ಲಯನ್ಸ್ ಜಿಲ್ಲೆ 317ಡಿ ಕೃತಜ್ಞಾ ಪ್ರಶಸ್ತಿ ಪ್ರಧಾನ ಸಮಾರಂಭ: ವಸಂತ್ ಶೆಟ್ಟಿ ಶ್ರದ್ದಾರವರಿಗೆ ಅತ್ಯುತ್ತಮ ಪ್ರಾಂತೀಯ ಅಧ್ಯಕ್ಷ ಪ್ರಶಸ್ತಿ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಧ್ಯಾನದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಫೆ.11 : ಬೆಳ್ತಂಗಡಿ ಧರ್ಮಪ್ರಾಂತ್ಯ ಸ್ಥಾಪನೆಯ ಬೆಳ್ಳಿ ಹಬ್ಬದ ಸಂಭ್ರಮ : ಶ್ರೇಷ್ಠ ಮಹಾಧರ್ಮಾಧ್ಯಕ್ಷರುಗಳು ಭಾಗಿ -ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸಚಿವರುಗಳು, ಡಾ.ಹೆಗ್ಗಡೆ ಆಗಮನ

Suddi Udaya

ವೇಣೂರು ದೇವಾಡಿಗರ ಸೇವಾ ವೇದಿಕೆಯ ವತಿಯಿಂದ ಸಾಧಕರಿಗೆ ಸನ್ಮಾನ , ಅಭಿನಂದನೆ, ಪ್ರತಿಭಾ ಪುರಸ್ಕಾರ ಹಾಗೂ ಖಾಯಂ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!