September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕರ ಸಂಕ್ರಾಂತಿ ಹಬ್ಬ ಆಚರಣೆ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಮಕರ ಸಂಕ್ರಾಂತಿ ಹಬ್ಬವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು.

ಈ ಹಬ್ಬದ ವಿಶೇಷ ಆಹಾರವಾದ ಎಳ್ಳು ಬೆಲ್ಲವನ್ನು ತಯಾರಿಸಿ ಎಲ್ಲರಿಗೂ ಹಂಚಲಾಯಿತು. ಸಾಂಪ್ರಾದಾಯಿಕ ಉಡುಗೆಗಳನ್ನು ಧರಿಸಿದ ಮಕ್ಕಳು ವಿಭಿನ್ನ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ಸಂಕ್ರಾಂತಿ ಹಬ್ಬದ ವಿಶೇಷತೆಯನ್ನು ಸಾನ್ವಿ ಎಸ್ ಬಂಗೇರ 8ನೇ ಮತ್ತು ಶ್ರೇಯಸ್ 9ನೇ ಇವರು ತಮ್ಮ ಭಾಷಣದ ಮೂಲಕ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳು ಮಕರ ಸಂಕ್ರಾಂತಿ ಪ್ರಯುಕ್ತ ತಯಾರಿಸಿದ ಭಿತ್ತಿ ಪತ್ರಿಕೆಗಳನ್ನು ಪ್ರದರ್ಶಿಸಲಾಯಿತು ಶಾಲಾ ಶಿಕ್ಷಕಿಯವರಾದ ಶ್ರೀಮತಿ ವಾಗ್ದೇವಿ ಮತ್ತು ಶ್ರೀಮತಿ ಪ್ರಮೀಳಾ ಎನ್ ರವರು ಕಾರ್ಯಕ್ರಮವನ್ನು ನಿರ್ವಹಿಸಿದರು.
ಶಾಲಾ ಮುಖ್ಯೋಪಾಧ್ಯಾಯಿನಿಯವರ ಸಲಹೆ, ಶಿಕ್ಷಕ ವೃಂದದವರ ಸಹಕಾರದೊಂದಿಗೆ ಕಾರ್ಯಕ್ರಮವು ಯಶಸ್ವಿಗೊಂಡಿತು.

Related posts

ಕುತ್ಲೂರು: ಜೇನು ಕೃಷಿ ತರಬೇತಿ ಮತ್ತು ತೋಟಗಾರಿಕಾ ಬೆಳೆಗಳು ಹಾಗೂ ಇಲಾಖೆಯ ಯೋಜನೆಗಳ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಮದ್ದಡ್ಕ ತಾಯಿ‌ ಪಿಲಿಚಾಮುಂಡಿ‌ ದೈವಸ್ಥಾನದಲ್ಲಿ ತಾಂಬೂಲ ಪ್ರಶ್ನಾ ಚಿಂತನೆ

Suddi Udaya

ಬೆಳ್ತಂಗಡಿಯ ಹಲವು ಕಡೆ ಆಲಿಕಲ್ಲು ಮಳೆ

Suddi Udaya

ಕಾಯರ್ತಡ್ಕ ಸ.ಹಿ.ಪ್ರಾ. ಶಾಲೆಯಲ್ಲಿ ನೂತನ ಎರಡು ತರಗತಿ ಕೊಠಡಿಗಳ ಶಿಲಾನ್ಯಾಸ ಹಾಗೂ ಸ್ಮಾರ್ಟ್ ಟಿವಿ ಉದ್ಘಾಟನೆ

Suddi Udaya

ಉಜಿರೆ ಅನುಗ್ರಹ ಪೂರ್ವ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ.ರವೀಶ್ ಪಡುಮಲೆಗೆ ಸನ್ಮಾನ

Suddi Udaya
error: Content is protected !!