July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕರ ಸಂಕ್ರಾಂತಿ ಹಬ್ಬ ಆಚರಣೆ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಮಕರ ಸಂಕ್ರಾಂತಿ ಹಬ್ಬವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು.

ಈ ಹಬ್ಬದ ವಿಶೇಷ ಆಹಾರವಾದ ಎಳ್ಳು ಬೆಲ್ಲವನ್ನು ತಯಾರಿಸಿ ಎಲ್ಲರಿಗೂ ಹಂಚಲಾಯಿತು. ಸಾಂಪ್ರಾದಾಯಿಕ ಉಡುಗೆಗಳನ್ನು ಧರಿಸಿದ ಮಕ್ಕಳು ವಿಭಿನ್ನ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ಸಂಕ್ರಾಂತಿ ಹಬ್ಬದ ವಿಶೇಷತೆಯನ್ನು ಸಾನ್ವಿ ಎಸ್ ಬಂಗೇರ 8ನೇ ಮತ್ತು ಶ್ರೇಯಸ್ 9ನೇ ಇವರು ತಮ್ಮ ಭಾಷಣದ ಮೂಲಕ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳು ಮಕರ ಸಂಕ್ರಾಂತಿ ಪ್ರಯುಕ್ತ ತಯಾರಿಸಿದ ಭಿತ್ತಿ ಪತ್ರಿಕೆಗಳನ್ನು ಪ್ರದರ್ಶಿಸಲಾಯಿತು ಶಾಲಾ ಶಿಕ್ಷಕಿಯವರಾದ ಶ್ರೀಮತಿ ವಾಗ್ದೇವಿ ಮತ್ತು ಶ್ರೀಮತಿ ಪ್ರಮೀಳಾ ಎನ್ ರವರು ಕಾರ್ಯಕ್ರಮವನ್ನು ನಿರ್ವಹಿಸಿದರು.
ಶಾಲಾ ಮುಖ್ಯೋಪಾಧ್ಯಾಯಿನಿಯವರ ಸಲಹೆ, ಶಿಕ್ಷಕ ವೃಂದದವರ ಸಹಕಾರದೊಂದಿಗೆ ಕಾರ್ಯಕ್ರಮವು ಯಶಸ್ವಿಗೊಂಡಿತು.

Related posts

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ಜಿಲ್ಲಾ ಧ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘ ನೂತನ ಸಮಿತಿಗೆ ತಾಲೂಕಿನ ಐದು ಸದಸ್ಯರ ಆಯ್ಕೆ

Suddi Udaya

ಕಲ್ಮಂಜ: ರಾಧಾಕೃಷ್ಣ ಗೌಡ ನಿಧನ

Suddi Udaya

ಬೆಳ್ತಂಗಡಿ: ಸಂತ ತೆರೇಸಾ ಪ್ರೌಢಶಾಲೆಯ ನವೀಕೃತ ಶಾಲಾ ಸಭಾಂಗಣ ಮತ್ತು ವಜ್ರ ಮಹೋತ್ಸವದ ಉದ್ಘಾಟನೆ

Suddi Udaya

ಮಾ.6: ವೇಣೂರು ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ತೆಂಕಕಾರಂದೂರು: ಕಟ್ಟೆಯ ಸಾರ್ವಜನಿಕ ಬಸ್ಸು ತಂಗುದಾಣ ಕುಸಿತ

Suddi Udaya
error: Content is protected !!