25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲದಲ್ಲಿ ಎಸ್.ಎಂ.ಇ.ಗ್ರೂಪ್ಸ್ ನ ಸಹ ಸಂಸ್ಥೆ “ಯುನಿಕ್ ಎಂಟರ್‌ಪ್ರೈಸಸ್” ಶುಭಾರಂಭ

ಬೆಳ್ತಂಗಡಿ: ಇಲ್ಲಿಯ ಲಾಯಿಲದಲ್ಲಿರುವ ನೂರೂಲ್‌ಹುದಾ ಕಟ್ಟಡದಲ್ಲಿ ಎಸ್.ಎಂ.ಇ.ಗ್ರೂಪ್ಸ್ ನೂತನವಾಗಿ ಆರಂಭಿಸಿದ ಸಹ ಸಂಸ್ಥೆ “ಯುನಿಕ್ ಎಂಟರ್‌ಪ್ರೈಸಸ್” ಕಂಪ್ಯೂಟರ್ಸ್, ವಾಟರ್ ಪ್ಯೂರಿಫಯರ್, ‌ಸೆಕ್ಯೂರಿಟಿ ಸಿಸ್ಟಮ್ ಜ.15ರಂದು ಶುಭಾರಂಭಗೊಂಡಿತು.

ಸಹ ಸಂಸ್ಥೆಯ ಉದ್ಘಾಟನೆಯನ್ನು ಲಾಯಿಲ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಜಯಂತಿ ಎಂ.ಕೆ, ಉದ್ಘಾಟಿಸಿದರು. ಶ್ರೀಮತಿ ಮತ್ತು ಪ್ರೇಮ ರಾಜಪ್ಪ ಗೌಡ, ಶ್ರೀಮತಿ ಮತ್ತು ಶ್ರೀ ಜಯಲಕ್ಷ್ಮಿ ರಾಜಣ್ಣ ಬೆಂಗಳೂರು ಇವರು ದೀಪ ಪ್ರಜ್ವಲನೆಗೊಳಿಸಿದರು.

ನಾಳ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಕ್ಷೇತ್ರದ ಪ್ರಧಾನ ಅರ್ಚಕ ವೇದಮೂರ್ತಿ ರಾಘವೇಂದ್ರ ಅಸ್ರಣ್ಣರು ಆಗಮಿಸಿ ನೂತನ ಸಂಸ್ಥೆಗೆ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾದ ಲಾಯಿಲ ನೂರುಲ್ ಹುದಾ ಮಸೀದಿಯ ಧರ್ಮಗುರು ಉಬೈದುಲ್ಲಾ ಸಖಾಫಿ ಮುಈನಿ ಎಂ.ಎ, ಫಾ| ಪೌಲ್ ಒಸಿಡಿ, ಕಾರ್ಮೆಲ್ ಸದನ ಲಾಯಿಲ, ಲಾಯಿಲ ನೂರುಲ್ ಹುದಾ ಜುಮ್ಮಾ ಮಸೀದಿ ಅಧ್ಯಕ್ಷ ಅಬ್ದುಲ್ ಹನೀಫ್, ಬೆಳ್ಳಾರೆ
ಸ್ನೇಹ ಇಲೆಕ್ಟಿಕಲ್ಸ್ ಮಾಲಕ ಹೊನ್ನಪ್ಪ, ನಿವೃತ್ತ ಗ್ರಾಮ ಲೆಕ್ಕಾಧಿಕಾರಿ ಎಚ್. ಕೃಷ್ಣಯ್ಯ ಇಡ್ಯಾ, ಬೆಳ್ತಂಗಡಿ ಜೆಸಿಐ ಅಧ್ಯಕ್ಷ
ಜಿತೇಶ್ ಕುಮಾರ್ ಭಾಗವಹಿಸಿದರು.

ಈ ಸಂದರ್ಭದಲ್ಲಿ ಲಾಯಿಲ ಗ್ರಾಮ ಪಂಚಾಯತ್ ಸದಸ್ಯರುಗಳಾದ ಅರವಿಂದ, ಗಣೇಶ್, ನಿವೃತ್ತ ಶಿಕ್ಷಕ ಸುರೇಶ್, ವ್ಯವಸ್ಥಾಪಕ ನಿರ್ದೇಶಕ ಅವಿನಾಶ್ ಎ.ಆರ್. ರವರ ಮನೆಯವರು, ಬಂಧು ಮಿತ್ರರು ಉಪಸ್ಥಿತರಿದ್ದರು.

ಎಸ್.ಎಂ.ಎಸ್ ಗ್ರೂಪ್ಸ್ ನ ವ್ಯವಸ್ಥಾಪಕ ನಿರ್ದೇಶಕ ಅವಿನಾಶ್ ಎ.ಆರ್. ರವರು ಬಂದಂತಹ ಅತಿಥಿ ಗಣ್ಯರನ್ನು ಸ್ವಾಗತಿಸಿ ಸತ್ಕರಿಸಿದರು.

Related posts

ಕಣಿಯೂರು ಸ.ಉ.ಪ್ರಾ. ಶಾಲೆಯಲ್ಲಿ ಪೋಕ್ಸೋ ಕಾಯಿದೆಯ ಜಾಗೃತಿ ಅಭಿಯಾನ

Suddi Udaya

ಕೈಗಾರಿಕೋದ್ಯಮಿ ಅಶ್ವಥ್ ಹೆಗ್ಡೆ ವಿರುದ್ಧ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಆಧಾರ ರಹಿತ ಸುದ್ದಿ ಪ್ರಸಾರಕ್ಕೆ ನ್ಯಾಯಾಲಯ ತಡೆಯಾಜ್ಞೆ

Suddi Udaya

ಶಿರ್ಲಾಲು ಹಾ.ಉ.ಸ‌.ಸಂಘದ ಸದಸ್ಯ ರಾಧಾಕೃಷ್ಣ ಪಾರೋಟ್ಟುರವರಿಗೆ ಸಹಕಾರಿ ಸಪ್ತಾಹದಲ್ಲಿ ಕ್ಷೀರ ರತ್ನ ಪ್ರಶಸ್ತಿ

Suddi Udaya

ಉಜಿರೆಯ ಪದ್ಮಶ್ರೀ ಎಂಟರ್ ಪ್ರೈಸಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ “ಪದ್ಮಶ್ರೀ ಬೆಳಕಿನ ಶಾಪಿಂಗ್ ಉತ್ಸವ”

Suddi Udaya

ಅಳದಂಗಡಿಯಲ್ಲಿ ಸಿವಿಲ್ ನ್ಯಾಯಾಧೀಶರಾದ ಮಂಜುನಾಥ ಶಿವಲಿಂಗಪ್ಪ ಜಿ.ರವರಿಗೆ ಸನ್ಮಾನ

Suddi Udaya

ಕಾಯರ್ತಡ್ಕ ಸಾರ್ವಜನಿಕ ಕುಡಿಯುವ ನೀರಿನ ಟ್ಯಾಂಕಿನಲ್ಲಿ ಅಪರಿಚಿತ ಶವ ಪತ್ತೆ: ನಾಲ್ಕು ದಿನಗಳ ಹಿಂದೆ ಸಾವನ್ನಪ್ಪಿರಬಹುದೆಂಬ ಶಂಕೆ

Suddi Udaya
error: Content is protected !!