27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿ ಶ್ರೀ ಸೋಮನಾಥೇಶ್ವರಿ ಜಾತ್ರಾ ಮಹೋತ್ಸವ, ಆಮಂತ್ರಣ ದಶಮಾನೋತ್ಸವ ಸಂಭ್ರಮ: ಉದ್ಯಮಿ ಮೋಹನ್ ಕುಮಾರ್‌ರವರಿಂದ ಅಮ್ಯೂಸ್‌ಮೆಂಟ್ ಉದ್ಘಾಟನೆ

ಅಳದಂಗಡಿ: ಸತ್ಯ ಮತ್ತು ಧರ್ಮದ ಪುಣ್ಯಕ್ಷೇತ್ರ ಅಳದಂಗಡಿಯ ಜಾತ್ರಾಗರ ಮಹೋತ್ಸವ ಮತ್ತು ಆಮಂತ್ರಣ ದಶಮಾನೋತ್ಸವ ಸಂಭ್ರಮ ಅತ್ಯಂತ ಯಶಸ್ವಿಯಾಗಿ ನಡೆಯಲಿ. ಸದಾ ನಮ್ಮ ಸಹಕಾರವಿದೆ ಎಂದು ಉಜಿರೆ ಲಕ್ಷ್ಮೀ ಇಂಡಸ್ಟಿçÃಸ್ ಕನಸಿನ ಮನೆ ಮಾಲಿಕ ಮೋಹನ್ ಕುಮಾರ್ ಹೇಳಿದರು.

ಅವರು ಜ 14 ರಂದು ಅಳದಂಗಡಿ ಶ್ರೀ ಸೋಮನಾಥೇಶ್ವರಿ ಜಾತ್ರಾ ಮಹೋತ್ಸವ, ಆಮಂತ್ರಣ ದಶಮಾನೋತ್ಸವ ಸಂಭ್ರಮದ ಅಮ್ಯೂಸ್ ಮೆಂಟ್ ಉದ್ಘಾಟಿಸಿ ಮಾತನಾಡಿದರು.


ಹಿಂದಿನ ಕಾಲದಲ್ಲಿ ನಮ್ಮ ಹಿರಿಯರು ಮಕ್ಕಳನ್ನು ಜಾತ್ರೆ, ದೇವಸ್ಥಾನದ ಮತ್ತು ಧಾರ್ಮಿಕ ಕೆಲಸ ಕಾರ್ಯಗಳಿಗೆ ಕಳುಹಿಸುತ್ತಿದ್ದರು. ಇಂದು ಎಲ್ಲವೂ ಮಾಯವಾಗಿದೆ. ಮಕ್ಕಳಿಗೆ ನಮ್ಮ ನೆಲದ ಮೌಲ್ಯಗಳನ್ನು ತಿಳಿಸುವ ಕೆಲಸವಾಗಬೇಕಿದೆ ಎಂದರು.

ಈ ಸಂದರ್ಭದಲ್ಲಿ ಅಳದಂಗಡಿ ಅರಮನೆಯ ಡಾ.ಪ್ರೊಸ್ಟಿಲ್ ಅಜಿಲ, ಬೆಳ್ತಂಗಡಿ ಲಯನ್ಸ್ ಕ್ಲಬ್‌ನ ನಿಕಟ ಪೂರ್ವಾಧ್ಯಕ್ಷ ದೇವದಾಸ್ ಶೆಟ್ಟಿ ಬದ್ಯಾರು, ಅಳದಂಗಡಿ ಸೊಸೈಟಿ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ, ಉಪಾಧ್ಯಕ್ಷ ಜನಾರ್ಧನ ಪೂಜಾರಿ, ಹಿರಿಯರಾದ ಸದಾನಂದ ಪೂಜಾರಿ ಉಂಗಿಲಬೈಲು, ಶಿರ್ಲಾಲು ಸೊಸೈಟಿ ಅಧ್ಯಕ್ಷ ಸುಧೀರ್ ಆರ್ ಸುವರ್ಣ, ಉದ್ಯಮಿ ನಿತ್ಯಾನಂದ ನಾವರ, ಪ್ರಮುಖರಾದ ಶೇಖರ್ ನಾವರ, ಚಂದ್ರಶೇಖರ ಅಳದಂಗಡಿ, ಧರ್ಣಪ್ಪ ಪೂಜಾರಿ, ಪ್ರಜ್ವಲ್ ಜೈನ್, ಸುಪ್ರಿತ್ ಜೈನ್, ಆನಂದ ಪೂಜಾರಿ, ಪ್ರಭಾಕರ ಪೂಜಾರಿ, ಸುಂದರ ಶೆಟ್ಟಿ ಸುಲ್ಕೇರಿ ಹಾಗೂ ಇತರರು ಉಪಸ್ಥಿತರಿದ್ದರು.
ಆಮಂತ್ರಣ ಪರಿವಾರದ ಸಂಚಾಲಕ ವಿಜಯ್ ಜೈನ್ ನಾವರ ಸ್ವಾಗತಿಸಿ, ವಂದಿಸಿದರು.

Related posts

ಬೆಳಾಲು ಪ್ರೌಢಶಾಲೆ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾಗಿ ಭವಾನಿ ಮಾರ್ಪಾಲು, ಉಪಾಧ್ಯಕ್ಷರಾಗಿ ರಾಜೇಶ್ ಕುರ್ಕಿಲು

Suddi Udaya

ನಾವೂರು ಗ್ರಾ.ಪಂ. ನಲ್ಲಿ ಆರೋಗ್ಯ ಕಾರ್ಯಪಡೆಯ ಸದಸ್ಯರಿಗೆ ತರಬೇತಿ ಕಾರ್ಯಕ್ರಮ ಮತ್ತು ಸ್ಚಚ್ಚತಾ ಹೀ ಸೇವಾ ಆಂದೋಲನ ಕಾರ್ಯಕ್ರಮ

Suddi Udaya

ಭೂಸೇನೆಯಲ್ಲಿ 22 ವರ್ಷ ಕರ್ತವ್ಯ ಸಲ್ಲಿಸಿದ್ದ ಸೋಮಂತಡ್ಕ ನಿವಾಸಿ ಫ್ರಾನ್ಸಿಸ್ ಜೆ. ನಿವೃತ್ತಿ‌

Suddi Udaya

ಸೌಜನ್ಯ ಕೊಲೆ ಪ್ರಕರಣ: ಕೊಕ್ಕಡ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಗ್ರಾಮ ಸಮಿತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

Suddi Udaya

ಕುಕ್ಕೇಡಿ ಗ್ರಾಮ ಪಂಚಾಯತ್ ವತಿಯಿಂದ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಪಟ್ರಮೆ ನಿವಾಸಿ ಕೊರಗಪ್ಪ ನಾಯ್ಕ ಡೆಂಗ್ಯೂ ಜ್ವರದಿಂದ ನಿಧನ

Suddi Udaya
error: Content is protected !!