July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ : ಯಡೂ೯ರು ಎಂಬಲ್ಲಿ ಮನೆಯೊಳಗಡೆ ಯುವಕ ಕವಚಿಬಿದ್ದ ಸ್ಥಿತಿಯಲ್ಲಿ ಪತ್ತೆ: ತಲೆಯ ಭಾಗದಿಂದ ನೆಲದಲ್ಲಿ ಹರಿದು ಹೋದ ನೆತ್ತರು

ಗುರುವಾಯನಕೆರೆ: ಇಲ್ಲಿಯ ಯಡೂ೯ರು ಎಂಬಲ್ಲಿ ಯುವಕರೋವ೯ರು ಮನೆಯೊಳಗಡೆ ಕವಚಿಬಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ತಲೆಯ ಭಾಗದಿಂದ ನೆತ್ತರು ನೆಲದಲ್ಲಿ ಹರಿದು ಹೋಗಿರುವುದು ಕಂಡು ಬಂದಿದೆ.

ಯಡೂ೯ರಿನ ದಿ. ಶ್ರೀಧರ ಭಟ್ ಮತ್ತು ಶ್ರೀಮತಿ ಗೀತಾ ದಂಪತಿ ಪುತ್ರ ಮುರಳೀಧರ ಭಟ್ (35ವ) ಮನೆಯೊಳಗೆ ಕವಚಿ ಬಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.


ಮುರಳೀಧರ ಭಟ್ ಅವರ ತಾಯಿ ಗೀತಾ ಭಟ್ ಅವರು ಕಾಲಿನ ಆಪರೇಷನ್ ಆಗಿ ತಮ್ಮ ಮಗಳ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದು, ಮನೆಯಲ್ಲಿ ಮುರಳೀಧರ ಭಟ್ ಒಬ್ಬರೇ ಇದ್ದರೆನ್ನಲಾಗಿದೆ. ಮನೆಯ ಒಳಗಿನಿಂದ ಲಾಕ್ ಮಾಡಲಾಗಿದ್ದು, ಒಳಗಡೆ ಫ್ಯಾನ್ ತಿರುಗುತ್ತಿದೆ. ಮುರಳೀಧರ ಭಟ್ ಒಬ್ಬರೇ ರಾತ್ರಿ ‌ಮನೆಯಲ್ಲಿ ಇದ್ದುದರಿಂದ ಘಟನೆ ಏನಾಗಿದೆ ಎಂಬ ಮಾಹಿತಿ ಯಾರಿಗೂ ಗೊತ್ತಾಗಿಲ್ಲ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಆದರೆ ಮನೆಗೆ ಒಳಗಿನಿಂದ ಲಾಕ್ ಹಾಕಿರುವುದರಿಂದ ಇದರ ತೆರವು ಕಾರ್ಯಾಚರಣೆ ನಡೆಸಲು ತಯಾರಿ ನಡೆಸಲಾಗುತ್ತಿದೆ.

Related posts

ಶಿರ್ಲಾಲು ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಕನ್ಯಾಡಿ 2: ಸ.ಉ. ಹಿ.ಪ್ರಾ. ಶಾಲೆಗೆ ಕನ್ಯಾಡಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಪ್ರಿಂಟರ್ ಕೊಡುಗೆ

Suddi Udaya

ಮುಗ್ಗ ಗುತ್ತುವಿನಲ್ಲಿ ಪೀತಾಂಬರ ಹೇರಾಜೆಯವರ 75 ನೇ ವರ್ಷದ ಹುಟ್ಟುಹಬ್ಬ ಆಚರಣೆ

Suddi Udaya

ಫೇಸ್‌ಬುಕ್ ಮೂಲಕ ಪರಿಚಯವಾದ ಮಹಿಳೆಯಿಂದ ರೂ.6.96 ಲಕ್ಷ ವಂಚನೆ

Suddi Udaya

ಶಿಶಿಲ -ಅರಸಿನಮಕ್ಕಿ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಕಾರೆಗುಡ್ಡೆಯಲ್ಲಿ ರಸ್ತೆ ದುರಸ್ತಿ

Suddi Udaya

ಬೆಳಾಲು ಶ್ರೀರಾಮ ಶಾಖೆ ವತಿಯಿಂದ ಕೊಲ್ಪಾಡಿ ಸುಬ್ರಮಣ್ಯೇಶ್ವರ ಮಕ್ಕಳ ಭಜನಾ ತಂಡಕ್ಕೆ ಧನಸಹಾಯ

Suddi Udaya
error: Content is protected !!