23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಚಾರ್ಮಾಡಿ ಗ್ರಾಮ ಪಂಚಾಯತ್‌ನಲ್ಲಿ ಮಕ್ಕಳ ಗ್ರಾಮ ಸಭೆ

ಚಾರ್ಮಾಡಿ: ಚಾರ್ಮಾಡಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಸರಕಾರಿ ಪ್ರೌಢಶಾಲೆ ಕಕ್ಕಿಂಜೆಯಲ್ಲಿ ಜ.14 ರಂದು ಚಾರ್ಮಾಡಿ ಗ್ರಾಮ ಪಂಚಾಯತಿ ವತಿಯಿಂದ ಮಕ್ಕಳ ಗ್ರಾಮ ಸಭೆ ಯಶಸ್ವಿಯಾಗಿ ನಡೆಯಿತು. ಗ್ರಾಮ ಪಂಚಾಯತ್ ಅಧ್ಯಕ್ಷೆ ಶಾರದ ಅವರ ಮಾರ್ಗದರ್ಶನದಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಅವರು ಸಭೆಯನ್ನು ನಿರ್ವಹಿಸಿದರು. ಪಂಚಾಯತ್ ಸದಸ್ಯ ಅಬ್ದುಲ್ ರಹಿಮಾನ್ ಉಪಸ್ಥಿತರಿದ್ದರು.

ಚಾರ್ಮಾಡಿ, ಅಣಿಯೂರು, ಕಕ್ಕಿಂಜೆ, ತೋಟತ್ತಾಡಿ, ಪೆರಿಯಡ್ಕ ಹಾಗೂ ಕಕ್ಕಿಂಜೆ ಸರಕಾರಿ ಪ್ರೌಢಶಾಲೆಗಳ ನೂರಕ್ಕೂ ಅಧಿಕ ವಿದ್ಯಾರ್ಥಿಗಳು ಸಭೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದರು. ಮಕ್ಕಳ ಹಕ್ಕುಗಳು ಹಾಗೂ ಪೋಕ್ಸೋ ಕಾಯಿದೆ ಕುರಿತು ಮಂಗಳೂರಿನ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಯಶೋದ ಅವರು ಮಾಹಿತಿ ನೀಡಿದರು. ಮಕ್ಕಳ ಸುರಕ್ಷತೆ, ಮಕ್ಕಳ ಹಕ್ಕುಗಳ ಕ್ಲಬ್, ಪಂಚಾಯತಿಯಿಂದ ಮಕ್ಕಳಿಗೆ ದೊರೆಯುವ ಸವಲತ್ತುಗಳು ಕುರಿತು ವಿವರಿಸಲಾಯಿತು. ವಿವಿಧ ಶಾಲೆಗಳ ವಿದ್ಯಾರ್ಥಿಗಳ ಅಹವಾಲುಗಳನ್ನು ಚರ್ಚಿಸಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಂದ ಸೂಕ್ತ ಸ್ಪಂದನೆ ದೊರಕುವಂತೆ ಸಂಪನ್ಮೂಲ ವ್ಯಕ್ತಿ ವಿನೋದ್ ನೆರವೇರಿಸಿದರು.

ಸಭೆಯಲ್ಲಿ ಮುಖ್ಯವಾಗಿ ಶಾಲಾ ಕಟ್ಟಡಗಳು ಹಾಗೂ ಮೈದಾನದೊಳಗಿನ ಅನಧಿಕೃತ ಅತಿಕ್ರಮಣ, ಕಂಪೌಂಡ್ ನಿರ್ಮಾಣ, ಶಾಲಾ ಸೌಂದರೀಕರಣ, ಬೀದಿನಾಯಿಗಳಿಂದ ರಕ್ಷಣೆ, ಮನೆಗಳಲ್ಲಿ ವಿದ್ಯುತ್ ಸೌಲಭ್ಯ ಇಲ್ಲದೆ ಓದಲು ಎದುರಾಗುವ ಸಮಸ್ಯೆ, ಶಾಲೆಗಳಿಗೆ ಕಸ ವಿಲೇವಾರಿ ವಾಹನ ಬಾರದಿರುವುದು, ಬ್ಯಾಂಡ್ ಸೆಟ್ ಹಾಗೂ ಸ್ಕೌಟ್ಸ್–ಗೈಡ್ಸ್ ಸಮವಸ್ತ್ರ ಒದಗಿಸುವುದು, ಶೌಚಾಲಯಕ್ಕೆ ಇನ್ಸಿನರೇಟರ್ ವ್ಯವಸ್ಥೆ, ರಸ್ತೆ ರಿಪೇರಿ, ಶಾಲೆಗೆ ಗೈರು ಹಾಜರಾಗುತ್ತಿರುವ ಮಕ್ಕಳ ಸಮಸ್ಯೆ, ಶಾಲಾ ಸಮೀಪದ ಅಂಗಡಿಗಳಲ್ಲಿ ಮಾದಕ ವಸ್ತು ಮಾರಾಟ ನಿಷೇಧಿಸುವ ಕುರಿತು ವಿದ್ಯಾರ್ಥಿಗಳು ತಮ್ಮ ದೂರುಗಳನ್ನು ಸಲ್ಲಿಸಿದರು.

ಕೆಲವು ಸಮಸ್ಯೆಗಳಿಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ತಕ್ಷಣ ಸ್ಪಂದಿಸಿದ್ದು, ಉಳಿದ ಬೇಡಿಕೆಗಳಿಗೆ ಹಂತಹಂತವಾಗಿ ಪರಿಹಾರ ಒದಗಿಸುವುದಾಗಿ ಭರವಸೆ ನೀಡಿದರು. ಸಭೆಯಲ್ಲಿ ವಿವಿಧ ಅಂಗನವಾಡಿ ಕೇಂದ್ರಗಳ ಕಾರ್ಯಕರ್ತೆಯರು ಭಾಗವಹಿಸಿದ್ದರು.

ಸರಕಾರಿ ಪ್ರೌಢಶಾಲೆ ಕಕ್ಕಿಂಜೆಯ ಶಾಲಾ ನಾಯಕಿ ಕುಮಾರಿ ನಿಕಿತ ಅಧ್ಯಕ್ಷೀಯ ಭಾಷಣ ಮಾಡಿದರು. ಸರಕಾರಿ ಪ್ರೌಢಶಾಲೆ ಕಕ್ಕಿಂಜೆಯ ಮುಖ್ಯ ಶಿಕ್ಷಕರಾದ ಶಂಭು ಶಂಕರ್ ವಂದಿಸಿದರು. ಸಭೆಯ ಯಶಸ್ಸಿಗೆ ಗ್ರಂಥ ಪಾಲಕಿ ಶ್ರೀಮತಿ ಜ್ಯೋತಿ, ಲೆಕ್ಕ ಪರಿಶೋಧಕರಾದ ಸಂಜೀವ, ಗ್ರಾಮ ಪಂಚಾಯತಿ ಸಿಬ್ಬಂದಿ ವರ್ಗ ಹಾಗೂ ಶಿಕ್ಷಕರು ಸಹಕರಿಸಿದರು.

Related posts

ಸೆ.12 : ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ನಿರುದ್ಯೋಗಿ ವಿಕಲಚೇತನರ ಉದ್ಯೋಗ ಪೂರ್ವ ಕೌಶಲ್ಯ ಶಿಬಿರ- ಉದ್ಯೋಗ ಆಯ್ಕೆ

Suddi Udaya

ಕೋಳಿ ಅಂಕ ಅಪರಾಧವಾಗಿದ್ದು ಕಾನೂನು ಪಾಲಿಸುವಂತೆ ಪೊಲೀಸರಿಗೆ ಡೈರೆಕ್ಟರ್ ಜನರಲ್ ಆದೇಶ

Suddi Udaya

ಕಕ್ಕೆನೇಜಿ ವಾಸುದೇವ ರಾವ್ ಅವರ ಅಂಗಡಿಯಲ್ಲಿ ಎಲ್ಲರ ಗಮನ ಸೆಳೆದ ತೆಂಗಿನ ಕಾಯಿ

Suddi Udaya

ಚಾರ್ಮಾಡಿಯಲ್ಲಿ ಟೊಮ್ಯಾಟೊ ಟೆಂಪೋ ಪಲ್ಟಿ

Suddi Udaya

ಜ. 31 -ಫೆ.04: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಜಾತ್ರಾ ಮಹೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

72 ನೇ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಅಖಿಲ ಭಾರತ ಸಹಕಾರ ಸಪ್ತಾಹದಲ್ಲಿ ನಾರಾವಿ ಸೊಸೈಟಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಂಸ್ಥೆಯ ಬೆಳವಣಿಗೆಯಲ್ಲಿ ತೊಡಗಿಸಿಕೊಂಡಿರುವ ಎನ್.ಶಶಿಕಾಂತ್ ಜೈನ್ ಅವರಿಗೆ ಕಾಯಕ ದೀಕ್ಷಾಮಣಿ ಪ್ರಶಸ್ತಿ

Suddi Udaya
error: Content is protected !!