23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿ

ಚೂಪಾದ ಆಯುಧಗಳಿಂದ ಆಗಿರುವ ಗಾಯ ಅಲ್ಲ ಓಡಿಲ್ನಾಳ ಸಂಬೋಳ್ಯದ ಸುಮಂತ್‌ ಶವದ ಪರೀಕ್ಷಾ ವರದಿ: ಅಸಹಜ ಸಾವು ಪ್ರಕರಣವನ್ನು ಕೊಲೆ ಪ್ರಕರಣವಾಗಿ ಪರಿವರ್ತಿಸಿ ತನಿಖೆ ನಡೆಸಲಾಗುತ್ತಿದೆ: ದ.ಕ ಎಸ್.ಪಿ

ಬೆಳ್ತಂಗಡಿ: ಜ. 14 ರಂದು ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಓಡಿಲ್ನಾಳ ಗ್ರಾಮದ ಸಂಬೋಳ್ಯದ ಪ್ರಕರಣದಲ್ಲಿ ಮೃತ ಸುಮಂತ್‌ (15)ರವರ ಶವಪರೀಕ್ಷೆಯ ನಂತರ ಬಂದ ಪ್ರಾಥಮಿಕ ವರದಿಯ ಪ್ರಕಾರ, ಹುಡುಗನು ಕೆರೆಯಲ್ಲಿ ಮುಳುಗುವ ಸಮಯದಲ್ಲಿ ಜೀವಂತನಾಗಿದ್ದನು ಮತ್ತು ತಕ್ಷಣದ ಸಾವಿನ ಕಾರಣ ಮುಳುಗು ಸಾವಾಗಿರುತ್ತದೆ ಎಂದು ಬಂದಿದೆ ಎಂದು ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹೇಳಿಕೆ ನೀಡಿದ್ದಾರೆ.

ಪ್ರಾಥಮಿಕ ವರದಿ ತಲೆಯ ಮೇಲಿನ ಗಾಯಗಳು ಮಂದ ಬಲದ ಗಾಯ (Blunt injury) ಉಂಟಾಗಿವೆ ಮತ್ತು ಯಾವುದೇ ಚೂಪಾದ (Sharp) ಆಯುಧಗಳಿಂದ ಆಗಿರುವ ಗಾಯ ಅಲ್ಲ ಎಂದು ತಿಳಿದುಬಂದಿರುತ್ತದೆ. ಆದರೆ ತಲೆಯ ಮೇಲಿನ ಗಾಯಗಳ ಬಗ್ಗೆ ಸಮರ್ಪಕವಾದ ವಿವರಣೆ ದೊರಕಿಲ್ಲ. ಆದ್ದರಿಂದ ಸಮಗ್ರ ಹಾಗೂ ಸೂಕ್ಷ್ಮ ತನಿಖೆ ನಡೆಸುವ ಉದ್ದೇಶದಿಂದ ಈ ಅಸಹಜ ಸಾವು ಪ್ರಕರಣವನ್ನು ಕೊಲೆ ಪ್ರಕರಣವಾಗಿ ಪರಿವರ್ತಿಸಿ ತನಿಖೆ ನಡೆಸಲಾಗುತ್ತಿದೆ . ಈ ಪ್ರಕರಣದ ಸಮಗ್ರ ತನಿಖೆಗಾಗಿ ಬೆಳ್ತಂಗಡಿ ಡಿಎಸ್‌ಪಿ ರವರ ನೇತೃತ್ವದಲ್ಲಿ ನಾಲ್ಕು ತಂಡಗಳನ್ನು ರಚಿಸಲಾಗಿದೆ.ಎಂದು ತಿಳಿಸಿದ್ದಾರೆ.

Related posts

ಕನ್ಯಾಡಿ ಲಾಡ್ಜ್ ನಲ್ಲಿ ಅಕ್ರಮ ಜೂಜಾಟ: ಧರ್ಮಸ್ಥಳ ಪೊಲೀಸರಿಂದ ದಾಳಿ: 11 ಮಂದಿಯ ಬಂಧನ ; ರೂ.3 ಲಕ್ಷ ನಗದು ವಶ

Suddi Udaya

ಕಡಿರುದ್ಯಾವರ: ಅಕ್ರಮ ಮರಳು ಸಾಗಾಟಕ್ಕೆ ಯತ್ನ: ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

Suddi Udaya

ಬೆಳಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಅವ್ಯವಹಾರ ಆರೋಪ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು

Suddi Udaya

ಸರಕಾರಿ ಬಸ್ಸಿನ ಗ್ಲಾಸಿಗೆ ಕಲ್ಲು ಎಸೆತ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕೊಕ್ಕಡ: ಪಲಸ್ತಡ್ಕ ರಕ್ಷಿತಾರಣ್ಯದಿಂದ ಮರ ಕಳವು ಭೇದಿಸಿದ ಅರಣ್ಯ ಇಲಾಖೆ: ಬಂಧಿಸಲಾಗಿದ್ದ ಆರೋಪಿ ಪ್ರಕಾಶ್ ಜಾಮೀನು ಮೇಲೆ ಬಿಡುಗಡೆ

Suddi Udaya

ಕ್ಯಾಂಟಿನ್ ಒಳಗಡೆ ವೇಶ್ಯಾವಟಿಕೆ ದಂಧೆ ಪ್ರಕರಣ: ಇಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ

Suddi Udaya
error: Content is protected !!