23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿ

ಚೂಪಾದ ಆಯುಧಗಳಿಂದ ಆಗಿರುವ ಗಾಯ ಅಲ್ಲ ಓಡಿಲ್ನಾಳ ಸಂಬೋಳ್ಯದ ಸುಮಂತ್‌ ಶವದ ಪರೀಕ್ಷಾ ವರದಿ: ಅಸಹಜ ಸಾವು ಪ್ರಕರಣವನ್ನು ಕೊಲೆ ಪ್ರಕರಣವಾಗಿ ಪರಿವರ್ತಿಸಿ ತನಿಖೆ ನಡೆಸಲಾಗುತ್ತಿದೆ: ದ.ಕ ಎಸ್.ಪಿ

ಬೆಳ್ತಂಗಡಿ: ಜ. 14 ರಂದು ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಓಡಿಲ್ನಾಳ ಗ್ರಾಮದ ಸಂಬೋಳ್ಯದ ಪ್ರಕರಣದಲ್ಲಿ ಮೃತ ಸುಮಂತ್‌ (15)ರವರ ಶವಪರೀಕ್ಷೆಯ ನಂತರ ಬಂದ ಪ್ರಾಥಮಿಕ ವರದಿಯ ಪ್ರಕಾರ, ಹುಡುಗನು ಕೆರೆಯಲ್ಲಿ ಮುಳುಗುವ ಸಮಯದಲ್ಲಿ ಜೀವಂತನಾಗಿದ್ದನು ಮತ್ತು ತಕ್ಷಣದ ಸಾವಿನ ಕಾರಣ ಮುಳುಗು ಸಾವಾಗಿರುತ್ತದೆ ಎಂದು ಬಂದಿದೆ ಎಂದು ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹೇಳಿಕೆ ನೀಡಿದ್ದಾರೆ.

ಪ್ರಾಥಮಿಕ ವರದಿ ತಲೆಯ ಮೇಲಿನ ಗಾಯಗಳು ಮಂದ ಬಲದ ಗಾಯ (Blunt injury) ಉಂಟಾಗಿವೆ ಮತ್ತು ಯಾವುದೇ ಚೂಪಾದ (Sharp) ಆಯುಧಗಳಿಂದ ಆಗಿರುವ ಗಾಯ ಅಲ್ಲ ಎಂದು ತಿಳಿದುಬಂದಿರುತ್ತದೆ. ಆದರೆ ತಲೆಯ ಮೇಲಿನ ಗಾಯಗಳ ಬಗ್ಗೆ ಸಮರ್ಪಕವಾದ ವಿವರಣೆ ದೊರಕಿಲ್ಲ. ಆದ್ದರಿಂದ ಸಮಗ್ರ ಹಾಗೂ ಸೂಕ್ಷ್ಮ ತನಿಖೆ ನಡೆಸುವ ಉದ್ದೇಶದಿಂದ ಈ ಅಸಹಜ ಸಾವು ಪ್ರಕರಣವನ್ನು ಕೊಲೆ ಪ್ರಕರಣವಾಗಿ ಪರಿವರ್ತಿಸಿ ತನಿಖೆ ನಡೆಸಲಾಗುತ್ತಿದೆ . ಈ ಪ್ರಕರಣದ ಸಮಗ್ರ ತನಿಖೆಗಾಗಿ ಬೆಳ್ತಂಗಡಿ ಡಿಎಸ್‌ಪಿ ರವರ ನೇತೃತ್ವದಲ್ಲಿ ನಾಲ್ಕು ತಂಡಗಳನ್ನು ರಚಿಸಲಾಗಿದೆ.ಎಂದು ತಿಳಿಸಿದ್ದಾರೆ.

Related posts

ಅಪಾಯಕಾರಿಯಾಗಿ ವೀಲಿಂಗ್ ಮಾಡುತ್ತಿದ್ದವನ ಹೆಡೆಮುರಿ ಕಟ್ಟಿದ ಬೆಳ್ತಂಗಡಿ ಸಂಚಾರಿ ಪೊಲೀಸರು

Suddi Udaya

ನಿವೃತ್ತ ಯೋಧ ದಿನೇಶ್ ಮೂಲ್ಯಹೃದಯಾಘಾತದಿಂದ ನಿಧನ

Suddi Udaya

ಮೂಡಿಗೆರೆ ಪಟ್ಟಣದಲ್ಲಿ ಮಾದಕ ವಸ್ತು ಗಾಂಜಾ ಮಾರಾಟದಲ್ಲಿ ತೊಡಗಿದ್ದ ಬೆಳ್ತಂಗಡಿಯ ಇಬ್ಬರು ಯುವಕರ ಬಂಧನ

Suddi Udaya

ಹಾಡು ಹಗಲೇ ಲಾಯಿಲದ ದೇಜಪ್ಪರ ಮನೆಗೆ ನುಗ್ಗಿದ ಕಳ್ಳರು: ರೂ.20 ಸಾವಿರ ನಗದು ಸಹಿತ ರೂ.40 ಸಾವಿರ ಮೌಲ್ಯದ ಚಿನ್ನಾಭರಣ ಕಳವು

Suddi Udaya

ಮದ್ದಡ್ಕದಲ್ಲಿ ಗಾಂಜಾ ಮಾರಾಟ: ಆರೋಪಿ ಬಂಧನ: 90 ಗ್ರಾಂ ಗಾಂಜಾ ವಶ

Suddi Udaya

ಚಿನ್ನ ಪಾಲಿಶ್ ಮಾಡುವ ನೆಪದಲ್ಲಿ ವಂಚನೆ ಪ್ರಕರಣ: ಬಿಹಾರದ ಆರೋಪಿಯನ್ನು ಹೆಡೆಮುರಿ ಕಟ್ಟಿದ ವೇಣೂರು ಪೊಲೀಸರು

Suddi Udaya
error: Content is protected !!